<p><strong>ಕೋಲಾರ:</strong> ಬಾಗಲಕೋಟೆಯಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರು ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.</p>.<p>ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೊನೆಗಾಲ ಬಂದಿದೆ. ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುತ್ತಿದ್ದಾಗ ದಂಧೆಕೋರರು ವಿನಾಕಾರಣ ಕಲ್ಲು ತೂರಿ ಪೊಲೀಸ್ ಅಧಿಕಾರಿಗಳನ್ನೇ ಗಾಯಗೊಳಿಸಿದ್ದಾರೆ ಎಂದು ಹೇಳಿದರು.</p>.<p>ಬಾಗಲಕೋಟೆ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ವಿಧಿಸಿರುವ ನಿಷೇಧ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಶ್ರೀರಾಮಸೇನೆಯ ಚಿನ್ನಪ್ಪ, ಶಬರೀಷ್, ಪ್ರವೀಣ್, ಎಸ್.ಎಂ.ನಾಗರಾಜ್, ಅರುಣ್, ಸುಪ್ರೀತ್, ಪ್ರಶಾಂತ್ ಯಾದವ್, ಕಿಲಾರಿಪೇಟೆ ನಾಗ, ಆದಿ, ಮೋಹನ್, ನಾಗೇಂದ್ರ, ಅಪ್ಪು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಬಾಗಲಕೋಟೆಯಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.</p>.<p>ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರು ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.</p>.<p>ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೊನೆಗಾಲ ಬಂದಿದೆ. ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.</p>.<p>ಬಾಗಲಕೋಟೆಯಲ್ಲಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುತ್ತಿದ್ದಾಗ ದಂಧೆಕೋರರು ವಿನಾಕಾರಣ ಕಲ್ಲು ತೂರಿ ಪೊಲೀಸ್ ಅಧಿಕಾರಿಗಳನ್ನೇ ಗಾಯಗೊಳಿಸಿದ್ದಾರೆ ಎಂದು ಹೇಳಿದರು.</p>.<p>ಬಾಗಲಕೋಟೆ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಅವರಿಗೆ ವಿಧಿಸಿರುವ ನಿಷೇಧ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಶ್ರೀರಾಮಸೇನೆಯ ಚಿನ್ನಪ್ಪ, ಶಬರೀಷ್, ಪ್ರವೀಣ್, ಎಸ್.ಎಂ.ನಾಗರಾಜ್, ಅರುಣ್, ಸುಪ್ರೀತ್, ಪ್ರಶಾಂತ್ ಯಾದವ್, ಕಿಲಾರಿಪೇಟೆ ನಾಗ, ಆದಿ, ಮೋಹನ್, ನಾಗೇಂದ್ರ, ಅಪ್ಪು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>