<p>ಶ್ರೀನಿವಾಸಪುರ: ಪಟ್ಟಣದಲ್ಲಿ ಭಾನುವಾರ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿಗೊಂಡಿತ್ತು.</p>.<p>ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಮಧ್ಯಾಹ್ನದ ಹೊತ್ತಿಗೆ ಪಟ್ಟಣ ಜನರಹಿತವಾಗಿರುವಂತೆ ಕಂಡುಬಂದಿತು.</p>.<p>ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಮುಚ್ಚಲಾಗಿತ್ತು. ಎಪಿಎಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಆಟೋಗಳು ರಸ್ತೆಗೆ ಇಳಿಯಲಿಲ್ಲ. ಯಾವುದೇ ವಾಹನ ಸಂಚಾರ<br />ಇರಲಿಲ್ಲ.</p>.<p>ತಾಲ್ಲೂಕಿನ ರಾಯಲ್ಪಾಡು, ಗೌನಿಪಲ್ಲಿ, ರೋಣೂರು, ಯಲ್ದೂರು ಹಾಗೂ ರೋಜೇನಹಳ್ಳಿ ಕ್ರಾಸ್ನಲ್ಲಿ ಪ್ರಧಾನಿ ಮೋದಿ ಅವರ ಮನವಿಗೆ ಸ್ಪಂದಿಸಿ ಜನತಾ ಕರ್ಫ್ಯೂ ಆಚರಿಸಲಾಯಿತು. ಈ ಎಲ್ಲ ಕಡೆ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಮನೆಗಳಲ್ಲಿಯೇ ಉಳಿದರು.</p>.<p>ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಹನ ಸಂಚಾರ ಹೊರತುಪಡಿಸಿ ಜನ ಜೀವನ ಸಾಮಾನ್ಯವಾಗಿತ್ತು. ಜನರು ಕೃಷಿ ಚಟುವಟಿಕೆ ಹಾಗೂ ಜಾನುವಾರು ಪಾಲನೆಯಲ್ಲಿ ತೊಡಗಿದ್ದರು. ಆದರೆ ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಜನ ಸಂಚಾರ<br />ಸ್ಥಗಿತಗೊಂಡಿತ್ತು.</p>.<p>ಸಂಜೆ 5 ಗಂಟೆಗೆ ಸರಿಯಾಗಿ ನಾಗರಿಕರು ಚಪ್ಪಾಳೆ ತಟ್ಟುವುದರ ಮೂಲಕ, ಗಂಟೆ ಹಾಗೂ ಜಾಗಟೆ ಬಾರಿಸುವುದರ ಮೂಲಕ ಕರೊನಾ ವಿರುದ್ಧ ಶ್ರಮಿಸುತ್ತಿರುವ ಸಿಬ್ಬಂದಿಗೆ ಗೌರವ<br />ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಪಟ್ಟಣದಲ್ಲಿ ಭಾನುವಾರ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿಗೊಂಡಿತ್ತು.</p>.<p>ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ. ಮಧ್ಯಾಹ್ನದ ಹೊತ್ತಿಗೆ ಪಟ್ಟಣ ಜನರಹಿತವಾಗಿರುವಂತೆ ಕಂಡುಬಂದಿತು.</p>.<p>ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಮುಚ್ಚಲಾಗಿತ್ತು. ಎಪಿಎಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಆಟೋಗಳು ರಸ್ತೆಗೆ ಇಳಿಯಲಿಲ್ಲ. ಯಾವುದೇ ವಾಹನ ಸಂಚಾರ<br />ಇರಲಿಲ್ಲ.</p>.<p>ತಾಲ್ಲೂಕಿನ ರಾಯಲ್ಪಾಡು, ಗೌನಿಪಲ್ಲಿ, ರೋಣೂರು, ಯಲ್ದೂರು ಹಾಗೂ ರೋಜೇನಹಳ್ಳಿ ಕ್ರಾಸ್ನಲ್ಲಿ ಪ್ರಧಾನಿ ಮೋದಿ ಅವರ ಮನವಿಗೆ ಸ್ಪಂದಿಸಿ ಜನತಾ ಕರ್ಫ್ಯೂ ಆಚರಿಸಲಾಯಿತು. ಈ ಎಲ್ಲ ಕಡೆ ಅಂಗಡಿಗಳನ್ನು ಮುಚ್ಚಲಾಗಿತ್ತು. ಜನರು ಮನೆಗಳಲ್ಲಿಯೇ ಉಳಿದರು.</p>.<p>ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಹನ ಸಂಚಾರ ಹೊರತುಪಡಿಸಿ ಜನ ಜೀವನ ಸಾಮಾನ್ಯವಾಗಿತ್ತು. ಜನರು ಕೃಷಿ ಚಟುವಟಿಕೆ ಹಾಗೂ ಜಾನುವಾರು ಪಾಲನೆಯಲ್ಲಿ ತೊಡಗಿದ್ದರು. ಆದರೆ ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಜನ ಸಂಚಾರ<br />ಸ್ಥಗಿತಗೊಂಡಿತ್ತು.</p>.<p>ಸಂಜೆ 5 ಗಂಟೆಗೆ ಸರಿಯಾಗಿ ನಾಗರಿಕರು ಚಪ್ಪಾಳೆ ತಟ್ಟುವುದರ ಮೂಲಕ, ಗಂಟೆ ಹಾಗೂ ಜಾಗಟೆ ಬಾರಿಸುವುದರ ಮೂಲಕ ಕರೊನಾ ವಿರುದ್ಧ ಶ್ರಮಿಸುತ್ತಿರುವ ಸಿಬ್ಬಂದಿಗೆ ಗೌರವ<br />ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>