ಎಪಿಎಂಸಿ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್ ಮಾತನಾಡಿ, ಮಾರುಕಟ್ಟೆ ಸಮಿತಿ ಮೂಲ ಸೌಕರ್ಯ ಕಲ್ಪಿಸಲು ಬದ್ಧವಾಗಿದೆ. ಮಾರುಕಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಕರ್ಯ ಕಲ್ಪಿಸಲಾಗುವುದು. ಸೋಂಕು ನಿವಾರಕ ಔಷಧಿ ಸಿಂಪಡಣೆ ಸುರಂಗದ ಮೂಲಕ ಪ್ರವೇಶ ನೀಡಲಾಗುವುದು. ಮಾರುಕಟ್ಟೆಗೆ ಬರುವ ವಾಹನಗಳಿಗೆ ವೈರಾಣು ಸೋಂಕು ನಿವಾರಕ ಔಷಧ
ಸಿಂಪಡಣೆ ಮಾಡಲಾಗುವುದು. ಹೊರಗಡೆಯಿಂದ ಬರುವ ಲಾರಿ ಚಾಲಕರು ಹಾಗೂ ಕ್ಲೀನರ್ಗಳ ಆರೋಗ್ಯ ತಪಾಸಣೆ ನಡೆಸಲಾಗುವುದು. ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಹಾಗೂ ಊಟ ಒದಗಿಸಲಾಗುವುದು ಎಂದು ಹೇಳಿದರು.