<p>ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸರ್ವೇಶ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದರು.</p>.<p>ಬೇಸಿಗೆಯಲ್ಲಿ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯವಾದ ಅನುದಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾಲ್ಲೂಕಿನಲ್ಲಿ 18 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದೆ. ಆ ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಈಗಾಗಲೇ ಖಾಸಗಿ ಕೊಳವೆಬಾವಿ ಹೊಂದಿರುವ ಮಾಲೀಕರು ಹಾಗೂ ಆ ಗ್ರಾಮಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಮಾಲೀಕರನ್ನು ಗುರುತಿಸಲಾಗಿದೆ ಎಂದರು ಹೇಳಿದರು.</p>.<p>ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಲು ಮೂವರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-85284693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸರ್ವೇಶ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 245 ಶುದ್ಧ ಕುಡಿಯುವ ನೀರು ಘಟಕಗಳಿದ್ದು, 216 ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ 29 ಘಟಕಗಳಿಗೆ ದುರಸ್ತಿ ಅಗತ್ಯವಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದರು.</p>.<p>ಬೇಸಿಗೆಯಲ್ಲಿ ತಾಲ್ಲೂಕಿನ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯವಾದ ಅನುದಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾಲ್ಲೂಕಿನಲ್ಲಿ 18 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದೆ. ಆ ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಈಗಾಗಲೇ ಖಾಸಗಿ ಕೊಳವೆಬಾವಿ ಹೊಂದಿರುವ ಮಾಲೀಕರು ಹಾಗೂ ಆ ಗ್ರಾಮಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಮಾಲೀಕರನ್ನು ಗುರುತಿಸಲಾಗಿದೆ ಎಂದರು ಹೇಳಿದರು.</p>.<p>ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಲು ಮೂವರು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-85284693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>