<p>ಶ್ರೀನಿವಾಸಪುರ: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶ್ರೀನಿವಾಸಪುರ ತಾಲ್ಲೂಕು 2025-26 ನೇ ಸಾಲಿನಲ್ಲಿಯೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಉಳಿಸಿಕೊಂದೆ.</p>.<p>ತಾಲ್ಲೂಕಿನಲ್ಲಿ 2,488 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 2,454 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಶೇ 98.63 ಫಲಿತಾಂಶ ಬಂದಿದ್ದು, ತಾಲ್ಲೂಕುವಾರು ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದೆ.</p>.<p>ಈ ಸಾಧನೆಗೆ ನೋಡಲ್ ಅಧಿಕಾರಿ ಎನ್.ವಿ.ಲಕ್ಷ್ಮಿನಾರಾಯಣ, ತಾಲ್ಲೂಕಿನ ಶಿಕ್ಷಕರ, ಸಿಬ್ಬಂದಿ ಕಾರಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಒಟ್ಟು 69 ಪ್ರೌಢಶಾಲೆಗಳಲ್ಲಿ ಸರ್ಕಾರಿ 31, ಅನುದಾನಿತ 7, ಅನುದಾನ ರಹಿತ 31 ಶಾಲೆಗಳು ಇವೆ. ಸರ್ಕಾರಿ 22, ಅನುದಾನಿತ 3, ಅನುದಾನ ರಹಿತ 49 ಶಾಲೆಗಳು ಶೇ 100ರಷ್ಟು ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.</p>.<p>ರಾಯಲ್ಪಾಡಿನ ಸಿ.ಎಸ್.ವಿಶ್ವನಾಥ ಶಾಸ್ತ್ರಿ, ಕುಸುಮಾ ದಂಪತಿ ಪುತ್ರಿ ಸಿ.ವಿ.ಅನಘಾ 603 (ಶೇ 96.48) ಅಂಕ ಪಡೆದಿದ್ದಾರೆ. ಅವರು ಬೈರವೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಓದಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-18-580939683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶ್ರೀನಿವಾಸಪುರ ತಾಲ್ಲೂಕು 2025-26 ನೇ ಸಾಲಿನಲ್ಲಿಯೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಉಳಿಸಿಕೊಂದೆ.</p>.<p>ತಾಲ್ಲೂಕಿನಲ್ಲಿ 2,488 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 2,454 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಶೇ 98.63 ಫಲಿತಾಂಶ ಬಂದಿದ್ದು, ತಾಲ್ಲೂಕುವಾರು ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದೆ.</p>.<p>ಈ ಸಾಧನೆಗೆ ನೋಡಲ್ ಅಧಿಕಾರಿ ಎನ್.ವಿ.ಲಕ್ಷ್ಮಿನಾರಾಯಣ, ತಾಲ್ಲೂಕಿನ ಶಿಕ್ಷಕರ, ಸಿಬ್ಬಂದಿ ಕಾರಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಒಟ್ಟು 69 ಪ್ರೌಢಶಾಲೆಗಳಲ್ಲಿ ಸರ್ಕಾರಿ 31, ಅನುದಾನಿತ 7, ಅನುದಾನ ರಹಿತ 31 ಶಾಲೆಗಳು ಇವೆ. ಸರ್ಕಾರಿ 22, ಅನುದಾನಿತ 3, ಅನುದಾನ ರಹಿತ 49 ಶಾಲೆಗಳು ಶೇ 100ರಷ್ಟು ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.</p>.<p>ರಾಯಲ್ಪಾಡಿನ ಸಿ.ಎಸ್.ವಿಶ್ವನಾಥ ಶಾಸ್ತ್ರಿ, ಕುಸುಮಾ ದಂಪತಿ ಪುತ್ರಿ ಸಿ.ವಿ.ಅನಘಾ 603 (ಶೇ 96.48) ಅಂಕ ಪಡೆದಿದ್ದಾರೆ. ಅವರು ಬೈರವೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಓದಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-18-580939683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>