<p><strong>ಶ್ರೀನಿವಾಸಪುರ:</strong> ಜಿಲ್ಲಾ ಕಾಂಗ್ರೆಸ್ನ ನೂತನ ಕಾರ್ಯಾಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ ನೇತೃತ್ವದಲ್ಲಿ ತಾಲ್ಲೂಕಿನ ಕೆಲವು ಕಾಂಗ್ರೆಸ್ ಮುಖಂಡರು ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿಯಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.</p>.<p>ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಬೆಂಬಲಿಗರೂ ಆಗಿರುವ ಈ ಮುಖಂಡರು, ಮುನಿಯಪ್ಪ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲಕಾರಿ ಬೆಳವಣಿಗೆ ಆಗಿದೆ.</p>.<p>ತಮ್ಮನ್ನು ಭೇಟಿಯಾದ ಈ ಮುಖಂಡರನ್ನು ಸಚಿವರು ಗೌರವದಿಂದ ಸ್ವಾಗತಿಸಿ ಮಾತನಾಡಿದ್ದಾರೆ. ಆದರೆ, ರಾಜಕೀಯ ವಿಷಯ ತೆಗೆಯುತ್ತಿದಂತೆ ಸಚಿವರು ತುಸು ಬೇಸರಗೊಂಡಂತೆ ಕಂಡುಬಂದಿದ್ದಾರೆ.</p>.<p>ಮ್ಯಾಕಲ ನಾರಾಯಣಸ್ವಾಮಿ ಅವರನ್ನು ಉದ್ದೇಶಿಸಿ ಮಾತನಾಡಿದ ಮುನಿಯುಪ್ಪ, ‘ಹಿಂದೆ ತಾವು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಬೇಕಾಗಿತ್ತು. ಅದು ತಪ್ಪಿದ್ದು ಏಕೆ ಎಂಬ ಅರಿವಿದೆಯೇ? ಈಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದೀರಿ. ಇದೆಲ್ಲವೂ ತಮಗೆ ಅರ್ಥವಾಗಲಿ’ ಎಂದು ಹೇಳಿದರು ಎಂಬುದಾಗಿ ತಿಳಿದು ಬಂದಿದೆ.</p>.<p>ಕೋಮುಲ್ ನಿರ್ದೇಶಕ ಕೆ.ಕೆ.ಮಜುನಾಥರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಭಾಸ್ಕರ್, ಮಾಜಿ ಸದಸ್ಯ ಶೋರೂಂ ನಾರಾಯಣಸ್ವಾಮಿ, ಕೊರಿಗೇಪಲ್ಲಿ ಗಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥರೆಡ್ಡಿ ಈ ಸಂದರ್ಭದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಜಿಲ್ಲಾ ಕಾಂಗ್ರೆಸ್ನ ನೂತನ ಕಾರ್ಯಾಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ ನೇತೃತ್ವದಲ್ಲಿ ತಾಲ್ಲೂಕಿನ ಕೆಲವು ಕಾಂಗ್ರೆಸ್ ಮುಖಂಡರು ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿಯಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.</p>.<p>ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಬೆಂಬಲಿಗರೂ ಆಗಿರುವ ಈ ಮುಖಂಡರು, ಮುನಿಯಪ್ಪ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲಕಾರಿ ಬೆಳವಣಿಗೆ ಆಗಿದೆ.</p>.<p>ತಮ್ಮನ್ನು ಭೇಟಿಯಾದ ಈ ಮುಖಂಡರನ್ನು ಸಚಿವರು ಗೌರವದಿಂದ ಸ್ವಾಗತಿಸಿ ಮಾತನಾಡಿದ್ದಾರೆ. ಆದರೆ, ರಾಜಕೀಯ ವಿಷಯ ತೆಗೆಯುತ್ತಿದಂತೆ ಸಚಿವರು ತುಸು ಬೇಸರಗೊಂಡಂತೆ ಕಂಡುಬಂದಿದ್ದಾರೆ.</p>.<p>ಮ್ಯಾಕಲ ನಾರಾಯಣಸ್ವಾಮಿ ಅವರನ್ನು ಉದ್ದೇಶಿಸಿ ಮಾತನಾಡಿದ ಮುನಿಯುಪ್ಪ, ‘ಹಿಂದೆ ತಾವು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಬೇಕಾಗಿತ್ತು. ಅದು ತಪ್ಪಿದ್ದು ಏಕೆ ಎಂಬ ಅರಿವಿದೆಯೇ? ಈಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದೀರಿ. ಇದೆಲ್ಲವೂ ತಮಗೆ ಅರ್ಥವಾಗಲಿ’ ಎಂದು ಹೇಳಿದರು ಎಂಬುದಾಗಿ ತಿಳಿದು ಬಂದಿದೆ.</p>.<p>ಕೋಮುಲ್ ನಿರ್ದೇಶಕ ಕೆ.ಕೆ.ಮಜುನಾಥರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಭಾಸ್ಕರ್, ಮಾಜಿ ಸದಸ್ಯ ಶೋರೂಂ ನಾರಾಯಣಸ್ವಾಮಿ, ಕೊರಿಗೇಪಲ್ಲಿ ಗಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಶ್ವನಾಥರೆಡ್ಡಿ ಈ ಸಂದರ್ಭದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>