<p><strong>ಶ್ರೀನಿವಾಸಪುರ:</strong> ಪಟ್ಟಣದ ಬಹುತೇಕ ವಾರ್ಡ್ಗಳಲ್ಲಿ ಬೀದಿನಾಯಿ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>.<p>ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪ್ರತಿದಿನ ಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.</p>.<p>ನಸುಕಿನಿಂದಲೇ ಬೀದಿನಾಯಿಗಳ ಹಾವಳಿ ಶುರುವಾಗುತ್ತದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಬೆಳಗಿನ ವಿಶೇಷ ತರಗತಿಗಳ ಹಿನ್ನೆಲೆಯಲ್ಲಿ ಮುಂಜಾನೆ ಶಾಲೆ ಹಾಗೂ ಟ್ಯೂಷನ್ ಕೇಂದ್ರಗಳಿಗೆ ತೆರಳಬೇಕಾಗುತ್ತದೆ. ಈ ವೇಳೆ ರಸ್ತೆ ಮಧ್ಯೆ ಗುಂಪುಗೂಡಿ ನಿಂತಿರುವ ನಾಯಿಗಳಿಂದ ವಿದ್ಯಾರ್ಥಿಗಳು ಆತಂಕದಲ್ಲಿ ಸಾಗುತ್ತಿದ್ದಾರೆ. ಕೆಲವೆಡೆ ನಾಯಿಗಳು ಮಕ್ಕಳನ್ನು ಹಿಂಬಾಲಿಸಿ ದಾಳಿ ನಡೆಸಿರುವ ಘಟನೆಗಳೂ ನಡೆದಿವೆ ಎಂದು ಪೋಷಕರು ತಿಳಿಸಿದ್ದಾರೆ.</p>.<p>ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಬೆಳಿಗ್ಗೆ ತೆರಳುವ ಕಾರ್ಮಿಕರು ಇದೇ ಸಮಸ್ಯೆ ಎದುರಿಸುತ್ತಿದ್ದಾರೆ. ಪಟ್ಟಣದ ರಾಜಾಜಿ ರಸ್ತೆ, ಆಜಾದ್ ರಸ್ತೆ, ಜಾಕಿರ್ ಹುಸೇನ್ ಮೊಹಲ್ಲಾ, ಹೈದರಾಲಿ ಮೊಹಲ್ಲಾ ಹಾಗೂ ಪವನ್ ಆಸ್ಪತ್ರೆ ಸರ್ಕಲ್ ಭಾಗಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಪ್ರದೇಶಗಳಲ್ಲಿ ಬೆಳಗಿನ ವ್ಯಾಯಾಮಕ್ಕೆ ತೆರಳುವ ಮಹಿಳೆಯರು ಹಾಗೂ ಹಿರಿಯ ನಾಗರಿಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ.</p>.<p>ಬೈಕ್ ಸವಾರರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗಿದೆ. ಕೆಲ ನಾಯಿಗಳು ಬೈಕ್ ಹಿಂಬಾಲಿಸಿದರೆ, ಕೆಲ ನಾಯಿಗಳು ಏಕಾಏಕಿ ಅಡ್ಡಬಂದು ಅಪಘಾತಕ್ಕೆ ಕಾರಣವಾಗುತ್ತಿವೆ. ಕೆಲವರು ಸಣ್ಣಪುಟ್ಟ ಅಪಘಾತಕ್ಕೆ ಒಳಗಾಗಿದ್ದಾರೆ.</p>.<p>ಆಜಾದ್ ರಸ್ತೆಯಲ್ಲಿರುವ ಜಾಮಿಯಾ ಮಸೀದಿ ಹಾಗೂ ಚಾರ್ಮಿನಾರ್ ಮಸೀದಿ ಕಡೆ ಬೆಳಗಿನ ಪ್ರಾರ್ಥನೆಗೆ ತೆರಳುವ ಭಕ್ತರು ಸಹ ನಾಯಿಗಳ ಗುಂಪುಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನಾಹುತ ಸಂಭವಿಸಿದ ನಂತರವೇ ಕ್ರಮ ಕೈಗೊಳ್ಳಬೇಕೇ? ಅಥವಾ ಮುನ್ನೆಚ್ಚರಿಕೆಯಾಗಿ ಸಮಸ್ಯೆ ಪರಿಹರಿಸಬೇಕೇ ಎಂದು ಪ್ರಶ್ನಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ ಶೆಲ್ಟರ್ನಲ್ಲಿ ಇಡಬೇಕು. ಜೊತೆಗೆ ಲಸಿಕಾ ಕಾರ್ಯಕ್ರಮ ಜಾರಿಗೊಳಿಸಬೇಕು. ಆದರೆ ಈ ಕುರಿತು ಸಮರ್ಪಕ ಹಾಗೂ ನಿಯಮಿತ ಕಾರ್ಯಾಚರಣೆ ನಡೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪಟ್ಟಣದಲ್ಲಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾದರೆ ಬೀದಿನಾಯಿಗಳ ಗುಂಪುಗೂಡುವಿಕೆ ಕಡಿಮೆಯಾಗಬಹುದು. ಆಹಾರದ ಅವಶೇಷಗಳನ್ನು ರಸ್ತೆ ಬದಿಯಲ್ಲಿ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕಾಗಿದೆ ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಪಟ್ಟಣದ ಬಹುತೇಕ ವಾರ್ಡ್ಗಳಲ್ಲಿ ಬೀದಿನಾಯಿ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.</p>.<p>ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪ್ರತಿದಿನ ಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.</p>.<p>ನಸುಕಿನಿಂದಲೇ ಬೀದಿನಾಯಿಗಳ ಹಾವಳಿ ಶುರುವಾಗುತ್ತದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಬೆಳಗಿನ ವಿಶೇಷ ತರಗತಿಗಳ ಹಿನ್ನೆಲೆಯಲ್ಲಿ ಮುಂಜಾನೆ ಶಾಲೆ ಹಾಗೂ ಟ್ಯೂಷನ್ ಕೇಂದ್ರಗಳಿಗೆ ತೆರಳಬೇಕಾಗುತ್ತದೆ. ಈ ವೇಳೆ ರಸ್ತೆ ಮಧ್ಯೆ ಗುಂಪುಗೂಡಿ ನಿಂತಿರುವ ನಾಯಿಗಳಿಂದ ವಿದ್ಯಾರ್ಥಿಗಳು ಆತಂಕದಲ್ಲಿ ಸಾಗುತ್ತಿದ್ದಾರೆ. ಕೆಲವೆಡೆ ನಾಯಿಗಳು ಮಕ್ಕಳನ್ನು ಹಿಂಬಾಲಿಸಿ ದಾಳಿ ನಡೆಸಿರುವ ಘಟನೆಗಳೂ ನಡೆದಿವೆ ಎಂದು ಪೋಷಕರು ತಿಳಿಸಿದ್ದಾರೆ.</p>.<p>ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಬೆಳಿಗ್ಗೆ ತೆರಳುವ ಕಾರ್ಮಿಕರು ಇದೇ ಸಮಸ್ಯೆ ಎದುರಿಸುತ್ತಿದ್ದಾರೆ. ಪಟ್ಟಣದ ರಾಜಾಜಿ ರಸ್ತೆ, ಆಜಾದ್ ರಸ್ತೆ, ಜಾಕಿರ್ ಹುಸೇನ್ ಮೊಹಲ್ಲಾ, ಹೈದರಾಲಿ ಮೊಹಲ್ಲಾ ಹಾಗೂ ಪವನ್ ಆಸ್ಪತ್ರೆ ಸರ್ಕಲ್ ಭಾಗಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಪ್ರದೇಶಗಳಲ್ಲಿ ಬೆಳಗಿನ ವ್ಯಾಯಾಮಕ್ಕೆ ತೆರಳುವ ಮಹಿಳೆಯರು ಹಾಗೂ ಹಿರಿಯ ನಾಗರಿಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ.</p>.<p>ಬೈಕ್ ಸವಾರರಿಗೆ ಮತ್ತೊಂದು ದೊಡ್ಡ ಸವಾಲು ಎದುರಾಗಿದೆ. ಕೆಲ ನಾಯಿಗಳು ಬೈಕ್ ಹಿಂಬಾಲಿಸಿದರೆ, ಕೆಲ ನಾಯಿಗಳು ಏಕಾಏಕಿ ಅಡ್ಡಬಂದು ಅಪಘಾತಕ್ಕೆ ಕಾರಣವಾಗುತ್ತಿವೆ. ಕೆಲವರು ಸಣ್ಣಪುಟ್ಟ ಅಪಘಾತಕ್ಕೆ ಒಳಗಾಗಿದ್ದಾರೆ.</p>.<p>ಆಜಾದ್ ರಸ್ತೆಯಲ್ಲಿರುವ ಜಾಮಿಯಾ ಮಸೀದಿ ಹಾಗೂ ಚಾರ್ಮಿನಾರ್ ಮಸೀದಿ ಕಡೆ ಬೆಳಗಿನ ಪ್ರಾರ್ಥನೆಗೆ ತೆರಳುವ ಭಕ್ತರು ಸಹ ನಾಯಿಗಳ ಗುಂಪುಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನಾಹುತ ಸಂಭವಿಸಿದ ನಂತರವೇ ಕ್ರಮ ಕೈಗೊಳ್ಳಬೇಕೇ? ಅಥವಾ ಮುನ್ನೆಚ್ಚರಿಕೆಯಾಗಿ ಸಮಸ್ಯೆ ಪರಿಹರಿಸಬೇಕೇ ಎಂದು ಪ್ರಶ್ನಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ ಶೆಲ್ಟರ್ನಲ್ಲಿ ಇಡಬೇಕು. ಜೊತೆಗೆ ಲಸಿಕಾ ಕಾರ್ಯಕ್ರಮ ಜಾರಿಗೊಳಿಸಬೇಕು. ಆದರೆ ಈ ಕುರಿತು ಸಮರ್ಪಕ ಹಾಗೂ ನಿಯಮಿತ ಕಾರ್ಯಾಚರಣೆ ನಡೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪಟ್ಟಣದಲ್ಲಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾದರೆ ಬೀದಿನಾಯಿಗಳ ಗುಂಪುಗೂಡುವಿಕೆ ಕಡಿಮೆಯಾಗಬಹುದು. ಆಹಾರದ ಅವಶೇಷಗಳನ್ನು ರಸ್ತೆ ಬದಿಯಲ್ಲಿ ಎಸೆಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕಾಗಿದೆ ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>