<p><strong>ಕೋಲಾರ: </strong>ಶ್ರೀರಾಮನವಮಿ ಪ್ರಯುಕ್ತ ಸಂಘಟನೆಯಿಂದ ನಗರದ ಗಾಂಧಿವನದಲ್ಲಿ ಏ. 8ರಿಂದ ಏ. 10ರವರೆಗೆ ಶ್ರೀರಾಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಶುಕ್ರವಾರ (ಏ.8) ಸಂಜೆ 6 ಗಂಟೆಗೆ ಗಾಂಧಿವನದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಶನಿವಾರ (ಏ.9) ಸಂಜೆ 7 ಗಂಟೆಗೆ ಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಭಾನುವಾರ (ಏ.10) ಮಧ್ಯಾಹ್ನ 3 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು<br />ಹೇಳಿದ್ದಾರೆ.</p>.<p>ಎಂ.ಜಿ. ರಸ್ತೆಯಿಂದ ಆರಂಭವಾಗುವ ಶೋಭಾ ಯಾತ್ರೆ ಸಂಜೆ 6ಕ್ಕೆ ಡೂಂಲೈಟ್ ವೃತ್ತದಲ್ಲಿನ ವಿನಾಯಕ ದೇವಾಲಯದ ಬಳಿ ಅಂತ್ಯಗೊಳ್ಳುತ್ತದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಿದ್ಯಾ ಮಹಾ ಸಂಸ್ಥಾನದ ಸಂಸ್ಥಾಪಕರಾದ ಸಾಧ್ವಿ ಯೋಗಿನಿ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಂಸದ ಎಸ್. ಮುನಿಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ.</p>.<p>ನಾಗಲಾಪುರ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಆಡ್ಯಾರ್, ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರಶೇಖರ್, ವಕೀಲ ಕೆ.ವಿ. ಶಂಕರಪ್ಪ ಅತಿಥಿಗಳಾಗಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಶ್ರೀರಾಮನವಮಿ ಪ್ರಯುಕ್ತ ಸಂಘಟನೆಯಿಂದ ನಗರದ ಗಾಂಧಿವನದಲ್ಲಿ ಏ. 8ರಿಂದ ಏ. 10ರವರೆಗೆ ಶ್ರೀರಾಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಶುಕ್ರವಾರ (ಏ.8) ಸಂಜೆ 6 ಗಂಟೆಗೆ ಗಾಂಧಿವನದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಶನಿವಾರ (ಏ.9) ಸಂಜೆ 7 ಗಂಟೆಗೆ ಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ. ಭಾನುವಾರ (ಏ.10) ಮಧ್ಯಾಹ್ನ 3 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು<br />ಹೇಳಿದ್ದಾರೆ.</p>.<p>ಎಂ.ಜಿ. ರಸ್ತೆಯಿಂದ ಆರಂಭವಾಗುವ ಶೋಭಾ ಯಾತ್ರೆ ಸಂಜೆ 6ಕ್ಕೆ ಡೂಂಲೈಟ್ ವೃತ್ತದಲ್ಲಿನ ವಿನಾಯಕ ದೇವಾಲಯದ ಬಳಿ ಅಂತ್ಯಗೊಳ್ಳುತ್ತದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ವಿದ್ಯಾ ಮಹಾ ಸಂಸ್ಥಾನದ ಸಂಸ್ಥಾಪಕರಾದ ಸಾಧ್ವಿ ಯೋಗಿನಿ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಂಸದ ಎಸ್. ಮುನಿಸ್ವಾಮಿ ಅಧ್ಯಕ್ಷತೆ ವಹಿಸುತ್ತಾರೆ.</p>.<p>ನಾಗಲಾಪುರ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಆಡ್ಯಾರ್, ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರಶೇಖರ್, ವಕೀಲ ಕೆ.ವಿ. ಶಂಕರಪ್ಪ ಅತಿಥಿಗಳಾಗಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>