<p><strong>ಕೋಲಾರ: </strong>‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ಕೆಲವೇ ದಿನಗಳು ಬಾಕಿಯಿದ್ದು, ಆರೋಗ್ಯ ರಕ್ಷಣೆಗೆ ಒತ್ತು ನೀಡಿ. ಶ್ರದ್ಧೆ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮುಂದುವರಿಸಿ. ಕಾಲಹರಣ ಮಾಡಬೇಡಿ’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಕೆಂಬೋಡಿಯಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿಯು ಶೈಕ್ಷಣಿಕ ಜೀವನದ ಬುನಾದಿ. ವಿದ್ಯಾರ್ಥಿಗಳ ಈ ಹಂತದಲ್ಲಿ ಕಲಿಕೆಯಲ್ಲಿ ಆಸಕ್ತಿ ವಹಿಸಿ ಶ್ರದ್ಧೆಯಿಂದ ಓದಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯ ಬೇಕಿಲ್ಲ. ಓದಿದವರಿಗೆ ಆತ್ಮಸ್ಥೈರ್ಯ ಜತೆಯಲ್ಲೇ ಇರುತ್ತದೆ. ಕೋವಿಡ್ ಆತಂಕದ ನಡುವೆಯೂ ಹಿಂದಿನ ವರ್ಷ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಸುತ್ತೇವೆ. ಪ್ರತಿ ಪಠ್ಯ ವಿಷಯಕ್ಕೂ ಆದ್ಯತೆ ನೀಡಿ ಓದಿ. ಇಲಾಖೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಮುಂದಿನ ವಾರ ನನ್ನನ್ನೊಮ್ಮೆ ಗಮನಿಸಿ ಮಾದರಿ ಪಶ್ನೋತ್ತರ ಕೋಠಿ ಒದಗಿಸುತ್ತೇವೆ. 6 ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳು ಸಿಗಲಿದ್ದು, ಇದರ ಸದುಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>‘ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿರುತ್ತದೆ. ಶೇ 10ರಷ್ಟು ಮಾತ್ರ ಕಠಿಣತೆ ಇರುತ್ತದೆ. ಉತ್ತಮ ಅಂಕ ಸಾಧನೆಗೆ ಇದು ಉತ್ತಮ ಅವಕಾಶ. ಆರೋಗ್ಯವಂತ ಶರೀರದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಕೋವಿಡ್ ವಿಷಯದಲ್ಲಿ ನಿರ್ಲಕ್ಷ್ಯತೆ ಬೇಡ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಳ್ಳಿ’ ಎಂದರು.</p>.<p>ಆತ್ಮವಿಶ್ವಾಸ ಮುಖ್ಯ: ‘ಪರೀಕ್ಷೆಯಲ್ಲಿ ಬರವಣಿಗೆ ಸುಂದರವಾಗಿರಬೇಕು. ಯಾವುದೇ ಕೆಲಸಕ್ಕೆ ಆತ್ಮವಿಶ್ವಾಸ ಬಹಳ ಮುಖ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಆತ್ಮವಿಶ್ವಾಸವು ನಿರ್ಣಾಯಕ ಪಾತ್ರ ವಹಿಸುತ್ತದೆ. ಜತೆಗೆ ಪರೀಕ್ಷಾ ಭಯ ಹೋಗಲಾಡಿಸುತ್ತದೆ’ ಎಂದು ಹೇಳಿದರು.</p>.<p>‘ನಕಾರಾತ್ಮಕ ಭಾವನೆ ಬಿಟ್ಟು ಸಕಾರಾತ್ಮಕ ಭಾವನೆ ರೂಢಿಸಿಕೊಳ್ಳಿ. ಉತ್ತೀರ್ಣನಾಗುತ್ತೇವೆ ಎಂಬ ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ. ಶಿಕ್ಷಕರು ಮಕ್ಕಳ ಕಲಿಕೆಯ ದೃಢೀಕರಣಕ್ಕೆ ಗಮನ ನೀಡಬೇಕು. ಪಠ್ಯ ಪುಸ್ತಕ ಅಧ್ಯಯನ ಮಾಡುವುದರಿಂದ ಪರೀಕ್ಷೆಯಲ್ಲಿ ಕೇಳಲಾಗುವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಬಹುದು’ ಎಂದು ಅಭಿಪ್ರಾಯಪಟ್ಟರು.</p>.<p>‘ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನ ವಿಷಯಗಳ ಓದಿಗೆ ಹೆಚ್ಚಿನ ಒತ್ತು ನೀಡಿ. ನಿರಂತರ ಅಭ್ಯಾಸದಿಂದ ಈ ವಿಷಯಗಳು ಸುಲಭವೆನಿಸುತ್ತವೆ. ಗಣಿತ ವಿಷಯಕ್ಕೆ ಅಭ್ಯಾಸ ಬಹಳ ಮುಖ್ಯ. ಸೂತ್ರಗಳನ್ನು ನೆನಪಿಸಿಕೊಂಡು ತಪ್ಪಿಲ್ಲದೆ ಬರೆಯುವುದನ್ನು ಅಭ್ಯಾಸ ಮಾಡಿ. ಪ್ರತಿ ಅಭ್ಯಾಸದಲ್ಲಿರುವ ಸಮಸ್ಯೆಗಳನ್ನು ಬರೆದುಕೊಂಡು ಸ್ವತಃ ಬಿಡಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ’ ಎಂದರು.</p>.<p>ಜನತಾ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಎಂ.ಎಸ್.ರವಿ, ಶಿಕ್ಷಕರಾದ ಮಲ್ಲಿಕಾರ್ಜುನ್, ನಾರಾಯಣಸ್ವಾಮಿ, ರಾಜಣ್ಣ, ವೆಂಕಟೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ಕೆಲವೇ ದಿನಗಳು ಬಾಕಿಯಿದ್ದು, ಆರೋಗ್ಯ ರಕ್ಷಣೆಗೆ ಒತ್ತು ನೀಡಿ. ಶ್ರದ್ಧೆ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮುಂದುವರಿಸಿ. ಕಾಲಹರಣ ಮಾಡಬೇಡಿ’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಕೆಂಬೋಡಿಯಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿಯು ಶೈಕ್ಷಣಿಕ ಜೀವನದ ಬುನಾದಿ. ವಿದ್ಯಾರ್ಥಿಗಳ ಈ ಹಂತದಲ್ಲಿ ಕಲಿಕೆಯಲ್ಲಿ ಆಸಕ್ತಿ ವಹಿಸಿ ಶ್ರದ್ಧೆಯಿಂದ ಓದಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯ ಬೇಕಿಲ್ಲ. ಓದಿದವರಿಗೆ ಆತ್ಮಸ್ಥೈರ್ಯ ಜತೆಯಲ್ಲೇ ಇರುತ್ತದೆ. ಕೋವಿಡ್ ಆತಂಕದ ನಡುವೆಯೂ ಹಿಂದಿನ ವರ್ಷ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಸುತ್ತೇವೆ. ಪ್ರತಿ ಪಠ್ಯ ವಿಷಯಕ್ಕೂ ಆದ್ಯತೆ ನೀಡಿ ಓದಿ. ಇಲಾಖೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಮುಂದಿನ ವಾರ ನನ್ನನ್ನೊಮ್ಮೆ ಗಮನಿಸಿ ಮಾದರಿ ಪಶ್ನೋತ್ತರ ಕೋಠಿ ಒದಗಿಸುತ್ತೇವೆ. 6 ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳು ಸಿಗಲಿದ್ದು, ಇದರ ಸದುಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>‘ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿರುತ್ತದೆ. ಶೇ 10ರಷ್ಟು ಮಾತ್ರ ಕಠಿಣತೆ ಇರುತ್ತದೆ. ಉತ್ತಮ ಅಂಕ ಸಾಧನೆಗೆ ಇದು ಉತ್ತಮ ಅವಕಾಶ. ಆರೋಗ್ಯವಂತ ಶರೀರದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಕೋವಿಡ್ ವಿಷಯದಲ್ಲಿ ನಿರ್ಲಕ್ಷ್ಯತೆ ಬೇಡ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಳ್ಳಿ’ ಎಂದರು.</p>.<p>ಆತ್ಮವಿಶ್ವಾಸ ಮುಖ್ಯ: ‘ಪರೀಕ್ಷೆಯಲ್ಲಿ ಬರವಣಿಗೆ ಸುಂದರವಾಗಿರಬೇಕು. ಯಾವುದೇ ಕೆಲಸಕ್ಕೆ ಆತ್ಮವಿಶ್ವಾಸ ಬಹಳ ಮುಖ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಆತ್ಮವಿಶ್ವಾಸವು ನಿರ್ಣಾಯಕ ಪಾತ್ರ ವಹಿಸುತ್ತದೆ. ಜತೆಗೆ ಪರೀಕ್ಷಾ ಭಯ ಹೋಗಲಾಡಿಸುತ್ತದೆ’ ಎಂದು ಹೇಳಿದರು.</p>.<p>‘ನಕಾರಾತ್ಮಕ ಭಾವನೆ ಬಿಟ್ಟು ಸಕಾರಾತ್ಮಕ ಭಾವನೆ ರೂಢಿಸಿಕೊಳ್ಳಿ. ಉತ್ತೀರ್ಣನಾಗುತ್ತೇವೆ ಎಂಬ ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ. ಶಿಕ್ಷಕರು ಮಕ್ಕಳ ಕಲಿಕೆಯ ದೃಢೀಕರಣಕ್ಕೆ ಗಮನ ನೀಡಬೇಕು. ಪಠ್ಯ ಪುಸ್ತಕ ಅಧ್ಯಯನ ಮಾಡುವುದರಿಂದ ಪರೀಕ್ಷೆಯಲ್ಲಿ ಕೇಳಲಾಗುವ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಬಹುದು’ ಎಂದು ಅಭಿಪ್ರಾಯಪಟ್ಟರು.</p>.<p>‘ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನ ವಿಷಯಗಳ ಓದಿಗೆ ಹೆಚ್ಚಿನ ಒತ್ತು ನೀಡಿ. ನಿರಂತರ ಅಭ್ಯಾಸದಿಂದ ಈ ವಿಷಯಗಳು ಸುಲಭವೆನಿಸುತ್ತವೆ. ಗಣಿತ ವಿಷಯಕ್ಕೆ ಅಭ್ಯಾಸ ಬಹಳ ಮುಖ್ಯ. ಸೂತ್ರಗಳನ್ನು ನೆನಪಿಸಿಕೊಂಡು ತಪ್ಪಿಲ್ಲದೆ ಬರೆಯುವುದನ್ನು ಅಭ್ಯಾಸ ಮಾಡಿ. ಪ್ರತಿ ಅಭ್ಯಾಸದಲ್ಲಿರುವ ಸಮಸ್ಯೆಗಳನ್ನು ಬರೆದುಕೊಂಡು ಸ್ವತಃ ಬಿಡಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ’ ಎಂದರು.</p>.<p>ಜನತಾ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಎಂ.ಎಸ್.ರವಿ, ಶಿಕ್ಷಕರಾದ ಮಲ್ಲಿಕಾರ್ಜುನ್, ನಾರಾಯಣಸ್ವಾಮಿ, ರಾಜಣ್ಣ, ವೆಂಕಟೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>