<p><strong>ಕೋಲಾರ:</strong> ‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಶ್ರದ್ಧೆ, ಏಕಾಗ್ರತೆ ಇಲ್ಲವಾದರೆ ಸಾಧನೆ ಅಸಾಧ್ಯ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಸಾಧನೆ ಕಳಪೆಯಾಗಿದ್ದು, ಓದಿನತ್ತ ಹೆಚ್ಚು ಗಮನಹರಿಸಿ’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬುನಾದಿ. ಕಲಿಕೆಯಲ್ಲಿ ಆಸಕ್ತಿ ವಹಿಸಿ. ಶ್ರದ್ಧೆಯಿಂದ ಓದಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯ ಬೇಡ. ಶ್ರದ್ಧೆಯಿಂದ ಓದಿನಲ್ಲಿ ತೊಡಗಿದರೆ ಆತ್ಮಸ್ಥೈರ್ಯ ಬರುತ್ತದೆ. ಕೋವಿಡ್ ಆತಂಕದ ನಡುವೆಯೂ ಹಿಂದಿನ ವರ್ಷ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿಯೂ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಪ್ರತಿ ಪಠ್ಯ ವಿಷಯಕ್ಕೂ ಆದ್ಯತೆ ನೀಡಿ ಓದಿ. ಇಲಾಖೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಮುಂದಿನ ವಾರ ನನ್ನನ್ನೊಮ್ಮೆ ಗಮನಿಸಿ ಮಾದರಿ ಪಶ್ನೋತ್ತರ ಕೋಠಿ ಓದಗಿಸುತ್ತದೆ. ಆರು ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳು ಸಿಗಲಿದ್ದು, ಇದರ ಸದುಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>‘ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿರುತ್ತದೆ. ಶೇ 10ರಷ್ಟು ಮಾತ್ರ ಕಠಿಣತೆ ಇರುತ್ತದೆ. ಉತ್ತಮ ಅಂಕ ಸಾಧನೆಗೆ ಇದು ಒಳ್ಳೆಯ ಅವಕಾಶ. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ. ಆರೋಗ್ಯವಂತ ಶರೀರದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಶಾಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಳ್ಳಿ’ ಎಂದರು.</p>.<p><strong>ಆತ್ಮವಿಶ್ವಾಸ ಮುಖ್ಯ</strong></p>.<p>‘ಪರೀಕ್ಷೆಯಲ್ಲಿ ಬರವಣಿಗೆ ಸುಂದರವಾಗಿರಲಿ. ಯಾವುದೇ ಕಾರ್ಯಕ್ಕೆ ಆತ್ಮವಿಶ್ವಾಸ ಮುಖ್ಯ. ನಕಾರಾತ್ಮಕ ಭಾವನೆ ಬಿಟ್ಟು ಸಕಾರಾತ್ಮಕ ಭಾವನೆ ರೂಢಿಸಿಕೊಳ್ಳಿ. ಉತ್ತೀರ್ಣನಾಗುತ್ತೇವೆ ಎಂಬ ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ. ಶಿಕ್ಷಕರು ಮಕ್ಕಳ ಕಲಿಕೆ ದೃಢೀಕರಣಕ್ಕೆ ಗಮನ ನೀಡಿ’ ಎಂದು ಹೇಳಿದರು.</p>.<p>‘ಪಠ್ಯಪುಸ್ತಕ ಅಧ್ಯಯನದಿಂದ ಪರೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಬಹುದು. ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನಕ್ಕೆ ಹೆಚ್ಚಿನ ಒತ್ತು ಕೊಡಿ. ನಿರಂತರ ಅಭ್ಯಾಸದಿಂದ ಈ ವಿಷಯಗಳು ಸುಲಭವೆನಿಸುತ್ತವೆ. ಗಣಿತ ವಿಷಯಕ್ಕೆ ಅಭ್ಯಾಸ ಬಹಳ ಮುಖ್ಯ. ಸೂತ್ರಗಳನ್ನು ನೆನಪಿಸಿಕೊಂಡು ತಪ್ಪಿಲ್ಲದೆ ಬರೆಯುವುದನ್ನು ಅಭ್ಯಾಸ ಮಾಡಿ’ ಎಂದು ಸೂಚಿಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಭವಾನಿ, ಶ್ವೇತಾ, ಲೀಲಾ, ಸುಗುಣಾ, ಫರೀದಾ, ವೆಂಕಟರೆಡ್ಡಿ, ಶ್ರೀನಿವಾಸಲು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಶ್ರದ್ಧೆ, ಏಕಾಗ್ರತೆ ಇಲ್ಲವಾದರೆ ಸಾಧನೆ ಅಸಾಧ್ಯ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಸಾಧನೆ ಕಳಪೆಯಾಗಿದ್ದು, ಓದಿನತ್ತ ಹೆಚ್ಚು ಗಮನಹರಿಸಿ’ ಎಂದು ಎಸ್ಸೆಸ್ಸೆಲ್ಸಿ ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬುನಾದಿ. ಕಲಿಕೆಯಲ್ಲಿ ಆಸಕ್ತಿ ವಹಿಸಿ. ಶ್ರದ್ಧೆಯಿಂದ ಓದಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು’ ಎಂದರು.</p>.<p>‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ಭಯ ಬೇಡ. ಶ್ರದ್ಧೆಯಿಂದ ಓದಿನಲ್ಲಿ ತೊಡಗಿದರೆ ಆತ್ಮಸ್ಥೈರ್ಯ ಬರುತ್ತದೆ. ಕೋವಿಡ್ ಆತಂಕದ ನಡುವೆಯೂ ಹಿಂದಿನ ವರ್ಷ ಯಶಸ್ವಿಯಾಗಿ ಪರೀಕ್ಷೆ ನಡೆಸಿದ್ದೇವೆ. ಈ ಬಾರಿಯೂ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಪ್ರತಿ ಪಠ್ಯ ವಿಷಯಕ್ಕೂ ಆದ್ಯತೆ ನೀಡಿ ಓದಿ. ಇಲಾಖೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಮುಂದಿನ ವಾರ ನನ್ನನ್ನೊಮ್ಮೆ ಗಮನಿಸಿ ಮಾದರಿ ಪಶ್ನೋತ್ತರ ಕೋಠಿ ಓದಗಿಸುತ್ತದೆ. ಆರು ಸೆಟ್ ಮಾದರಿ ಪ್ರಶ್ನೆಪತ್ರಿಕೆಗಳು ಸಿಗಲಿದ್ದು, ಇದರ ಸದುಪಯೋಗ ಪಡೆಯಿರಿ’ ಎಂದು ಸಲಹೆ ನೀಡಿದರು.</p>.<p>‘ಈ ಬಾರಿ ಪ್ರಶ್ನೆಪತ್ರಿಕೆ ಸುಲಭವಾಗಿರುತ್ತದೆ. ಶೇ 10ರಷ್ಟು ಮಾತ್ರ ಕಠಿಣತೆ ಇರುತ್ತದೆ. ಉತ್ತಮ ಅಂಕ ಸಾಧನೆಗೆ ಇದು ಒಳ್ಳೆಯ ಅವಕಾಶ. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ. ಆರೋಗ್ಯವಂತ ಶರೀರದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ಶಾಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಪಾಡಿಕೊಳ್ಳಿ’ ಎಂದರು.</p>.<p><strong>ಆತ್ಮವಿಶ್ವಾಸ ಮುಖ್ಯ</strong></p>.<p>‘ಪರೀಕ್ಷೆಯಲ್ಲಿ ಬರವಣಿಗೆ ಸುಂದರವಾಗಿರಲಿ. ಯಾವುದೇ ಕಾರ್ಯಕ್ಕೆ ಆತ್ಮವಿಶ್ವಾಸ ಮುಖ್ಯ. ನಕಾರಾತ್ಮಕ ಭಾವನೆ ಬಿಟ್ಟು ಸಕಾರಾತ್ಮಕ ಭಾವನೆ ರೂಢಿಸಿಕೊಳ್ಳಿ. ಉತ್ತೀರ್ಣನಾಗುತ್ತೇವೆ ಎಂಬ ಆತ್ಮವಿಶ್ವಾಸದಿಂದ ಅಭ್ಯಾಸ ಮಾಡಿ. ಶಿಕ್ಷಕರು ಮಕ್ಕಳ ಕಲಿಕೆ ದೃಢೀಕರಣಕ್ಕೆ ಗಮನ ನೀಡಿ’ ಎಂದು ಹೇಳಿದರು.</p>.<p>‘ಪಠ್ಯಪುಸ್ತಕ ಅಧ್ಯಯನದಿಂದ ಪರೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಬಹುದು. ಕಠಿಣ ವಿಷಯಗಳಾದ ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನಕ್ಕೆ ಹೆಚ್ಚಿನ ಒತ್ತು ಕೊಡಿ. ನಿರಂತರ ಅಭ್ಯಾಸದಿಂದ ಈ ವಿಷಯಗಳು ಸುಲಭವೆನಿಸುತ್ತವೆ. ಗಣಿತ ವಿಷಯಕ್ಕೆ ಅಭ್ಯಾಸ ಬಹಳ ಮುಖ್ಯ. ಸೂತ್ರಗಳನ್ನು ನೆನಪಿಸಿಕೊಂಡು ತಪ್ಪಿಲ್ಲದೆ ಬರೆಯುವುದನ್ನು ಅಭ್ಯಾಸ ಮಾಡಿ’ ಎಂದು ಸೂಚಿಸಿದರು.</p>.<p>ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಭವಾನಿ, ಶ್ವೇತಾ, ಲೀಲಾ, ಸುಗುಣಾ, ಫರೀದಾ, ವೆಂಕಟರೆಡ್ಡಿ, ಶ್ರೀನಿವಾಸಲು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>