ಮುಳಬಾಗಿಲು: ಎಸ್ಎಸ್ಎಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಮುಳಬಾಗಿಲು ನಗರದ ಅಮರಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಲೇಖಶ್ರೀ ಬಿ.ಎಂ 623 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಮತ್ತು ರಾಜ್ಯಕ್ಕೆ ತೃತೀಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.
ಮಾರ್ಚ್ 2023ರಲ್ಲಿ ನಡೆದ 10ನೇ ತರಗತಿ ಪರೀಕ್ಷೆಯಲ್ಲಿ 611 ಅಂಕ ಪಡೆದಿದ್ದಳು. ನಂತರ ಮರುಮೌಲ್ಯಮಾಪನ ಮಾಡಿದಾಗ 12 ಅಂಕ ಹೆಚ್ಚು ಬಂದಿದೆ.
ಮರು ಮೌಲ್ಯಮಾಪನದ ನಂತರ ವಿಜ್ಞಾನ ವಿಷಯದಲ್ಲಿ 98 ಅಂಕ ಪಡೆದಿದ್ದು, ಉಳಿದ 5 ವಿಷಯಗಳಲ್ಲಿ ಶೇ 100ರಷ್ಟು ಅಂಕ ಪಡೆದಿದ್ದಾರೆ.