<p><strong>ಕೋಲಾರ:</strong> ಎಸ್ಸೆಸ್ಸೆಲ್ಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಸೋಮವಾರ (ಫೆ.17) ಆರಂಭವಾಗಲಿದ್ದು, ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಿದ್ದಾರೆ.</p>.<p>ತಾಲ್ಲೂಕಿನ 101 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಕ್ಕಳಿಗೆ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಭಯ ಹೋಗಲಾಡಿಸಲು ಪೂರ್ವಸಿದ್ಧತಾ ಪರೀಕ್ಷೆಯನ್ನು ಅದೇ ಮಾದರಿಯಲ್ಲಿ ನಡೆಸಲು ಬಿಇಒ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.</p>.<p>ಪರೀಕ್ಷೆಯಲ್ಲಿ ಯಾವುದೇ ಗೊಂದಲವಾಗದಂತೆ ಇಲಾಖೆ ವತಿಯಿಂದ ಬಿಆರ್ಸಿ, ಬಿಆರ್ಪಿ, ಇಸಿಒ, ಸಿಆರ್ಪಿಗಳನ್ನು ತಲಾ 4 ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರಾಗಿ ನೇಮಿಸಲಾಗಿದೆ. ಸಮಯ ಪಾಲನೆ, ಪ್ರಶ್ನೆಪತ್ರಿಕೆ ಲಕೋಟೆ ತೆರೆಯಲು, ಉತ್ತರಪತ್ರಿಕೆ ಲಕೋಟೆ ಸಿದ್ಧಪಡಿಸುವ ಕ್ರಮ ಪಾಲಿಸಬೇಕು ಎಂದು ಬಿಇಒ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ.</p>.<p>ಆಯಾ ಶಾಲಾ ಮುಖ್ಯ ಶಿಕ್ಷಕರು ಪರೀಕ್ಷೆಗೆ ಬರುವ ಮಕ್ಕಳಿಗೆ ಡೆಸ್ಕ್, ಕುಡಿಯುವ ನೀರು ಸೌಲಭ್ಯ ಒದಗಿಸಬೇಕು. ಕೊಠಡಿಗಳಲ್ಲಿ ಬೆಳಕಿನ ವ್ಯವಸ್ಥೆ ಇರಬೇಕು. ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಎಸ್ಸೆಸ್ಸೆಲ್ಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ಸೋಮವಾರ (ಫೆ.17) ಆರಂಭವಾಗಲಿದ್ದು, ಪಬ್ಲಿಕ್ ಪರೀಕ್ಷೆ ಮಾದರಿಯಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಿದ್ದಾರೆ.</p>.<p>ತಾಲ್ಲೂಕಿನ 101 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಕ್ಕಳಿಗೆ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಭಯ ಹೋಗಲಾಡಿಸಲು ಪೂರ್ವಸಿದ್ಧತಾ ಪರೀಕ್ಷೆಯನ್ನು ಅದೇ ಮಾದರಿಯಲ್ಲಿ ನಡೆಸಲು ಬಿಇಒ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.</p>.<p>ಪರೀಕ್ಷೆಯಲ್ಲಿ ಯಾವುದೇ ಗೊಂದಲವಾಗದಂತೆ ಇಲಾಖೆ ವತಿಯಿಂದ ಬಿಆರ್ಸಿ, ಬಿಆರ್ಪಿ, ಇಸಿಒ, ಸಿಆರ್ಪಿಗಳನ್ನು ತಲಾ 4 ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರಾಗಿ ನೇಮಿಸಲಾಗಿದೆ. ಸಮಯ ಪಾಲನೆ, ಪ್ರಶ್ನೆಪತ್ರಿಕೆ ಲಕೋಟೆ ತೆರೆಯಲು, ಉತ್ತರಪತ್ರಿಕೆ ಲಕೋಟೆ ಸಿದ್ಧಪಡಿಸುವ ಕ್ರಮ ಪಾಲಿಸಬೇಕು ಎಂದು ಬಿಇಒ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದಾರೆ.</p>.<p>ಆಯಾ ಶಾಲಾ ಮುಖ್ಯ ಶಿಕ್ಷಕರು ಪರೀಕ್ಷೆಗೆ ಬರುವ ಮಕ್ಕಳಿಗೆ ಡೆಸ್ಕ್, ಕುಡಿಯುವ ನೀರು ಸೌಲಭ್ಯ ಒದಗಿಸಬೇಕು. ಕೊಠಡಿಗಳಲ್ಲಿ ಬೆಳಕಿನ ವ್ಯವಸ್ಥೆ ಇರಬೇಕು. ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಬೇಕು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>