<p><strong>ಕೋಲಾರ: </strong>‘ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲು ಕೋಚಿಮುಲ್ ಸಿದ್ಧವಿದೆ’ ಎಂದು ಶಾಸಕ ಹಾಗೂ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಭರವಸೆ ನೀಡಿದರು.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋಚಿಮುಲ್ನಿಂದ ಮುದ್ರಿಸಿ ಹೊರ ತಂದಿರುವ ಕನ್ನಡ, ಇಂಗ್ಲೀಷ್ ಮಾಧ್ಯಮದ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಹಾಗೂ ಪ್ರಶ್ನೆಪತ್ರಿಕೆಗಳ ಹೊತ್ತಿಗೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಈ ಬಾರಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರಬೇಕು’ ಎಂದು ಆಶಿಸಿದರು.</p>.<p>‘ಸರ್ಕಾರಿ ಶಾಲೆಗಳ ಅದರಲ್ಲೂ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೋಚಿಮುಲ್ ಸಂಕಲ್ಪ ಮಾಡಿದೆ, ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೆಕೋಠಿಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಕೋಚಿಮುಲ್ ಹಾಲು ಉತ್ಪಾದಕರ ಮಕ್ಕಳಿಗೆ ವಿಶೇಷವಾಗಿ ವಿದ್ಯಾರ್ಥಿವೇತನ ನೀಡುತ್ತಿದೆ. ಎಸ್ಸೆಸ್ಸೆಲ್ಸಿ ಸಾಧಕ ಮಕ್ಕಳಿಗೆ ತಲಾ ₹ 5 ಸಾವಿರ, ಪಿಯುಸಿ ಸಾಧಕರಿಗೆ ತಲಾ ₹ 7,500, ವೈದ್ಯಕೀಯ ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಎಂಜಿನಿಯರಿಂಗ್ ಮತ್ತು ಪದವಿ ವಿದ್ಯಾರ್ಥಿಗಳಿಗೆ ತಲಾ ₹ 20 ಸಾವಿರ ನೆರವು ನೀಡುತ್ತಿದೆ’ ಎಂದು ವಿವರಿಸಿದರು.</p>.<p>ಧೈರ್ಯ ತುಂಬಿ: ‘ಹಿಂದಿನ ವರ್ಷ ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 5ನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಯು ಪ್ರಥಮ ಅಥವಾ ದ್ವಿತೀಯ ಸ್ಥಾನದಲ್ಲಿರಬೇಕು. ಯಾವುದೇ ವಿದ್ಯಾರ್ಥಿ ಅನುತ್ತೀರ್ಣವಾಗಬಾರದು’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ಧೈರ್ಯ ತುಂಬಿ. ಮಕ್ಕಳ ಸಾಮಾನ್ಯ ಜ್ಞಾನ ವೃದ್ಧಿಗೆ ಕ್ರಮ ವಹಿಸಿ. ಪ್ರತಿ ವಿದ್ಯಾರ್ಥಿಗೂ ಪ್ರಶ್ನೋತ್ತರ ಕೋಠಿ ಸಿಗುವಂತೆ ಮಾಡಿ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ’ ಎಂದು ಸಲಹೆ ನೀಡಿದರು.</p>.<p>ವಿಶೇಷ ತರಗತಿ: ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯ ಘನತೆ ಎತ್ತಿ ಹಿಡಿಯಲು ಎಲ್ಲಾ ಶಿಕ್ಷಕರು ಶ್ರಮಿಸುತ್ತಿದ್ದಾರೆ. ವಿಶೇಷ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಇಲಾಖೆಯಿಂದ ಫೋನ್–ಇನ್ ಕಾರ್ಯಕ್ರಮದ ಮೂಲಕ ಧೈರ್ಯ ತುಂಬಿ ಗೊಂದಲ ನಿವಾರಿಸಲಾಗುತ್ತಿದೆ’ ಎಂದು ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದರು.</p>.<p>‘ಹಿಂದಿನ ವರ್ಷ ಫೋನ್–ಇನ್ ಕಾರ್ಯಕ್ರಮದಲ್ಲಿ ಹಲವು ಮಕ್ಕಳು ಪ್ರಶ್ನೆಗಳಿಗೆ ಉತ್ತರ ಕೇಳುತ್ತಿದ್ದರು. ಹೀಗಾಗಿ ಈ ಬಾರಿ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಸಿದ್ಧಪಡಿಸಲಾಗಿದೆ. ಇದು ಎಲ್ಲಾ ಹಂತದ ವಿದ್ಯಾರ್ಥಿಗಳಿಗೂ ಸಹಕಾರಿಯಾಗಿದೆ’ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಹೈನೋದ್ಯಮದ ಮೂಲಕ ರೈತರ ಬದುಕಿಗೆ ದಾರಿ ತೋರಿರುವ ಕೋಚಿಮುಲ್ ಇದೀಗ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ಕಾರ್ಯಕ್ಕೂ ಕೈಜೋಡಿಸಿದೆ’ ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೋಚಿಮುಲ್ ನಿರ್ದೇಶಕರಾದ ಕಾಡೇನಹಳ್ಳಿ ನಾಗರಾಜ್, ವೆಂಕಟೇಶ್, ವ್ಯವಸ್ಥಾಪಕ ನಿರ್ದೇಶಕ ತಿಪ್ಪಾರೆಡ್ಡಿ, ವ್ಯವಸ್ಥಾಪಕ ನಾಗೇಶ್, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲು ಕೋಚಿಮುಲ್ ಸಿದ್ಧವಿದೆ’ ಎಂದು ಶಾಸಕ ಹಾಗೂ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ಭರವಸೆ ನೀಡಿದರು.</p>.<p>ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋಚಿಮುಲ್ನಿಂದ ಮುದ್ರಿಸಿ ಹೊರ ತಂದಿರುವ ಕನ್ನಡ, ಇಂಗ್ಲೀಷ್ ಮಾಧ್ಯಮದ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಹಾಗೂ ಪ್ರಶ್ನೆಪತ್ರಿಕೆಗಳ ಹೊತ್ತಿಗೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಈ ಬಾರಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರಬೇಕು’ ಎಂದು ಆಶಿಸಿದರು.</p>.<p>‘ಸರ್ಕಾರಿ ಶಾಲೆಗಳ ಅದರಲ್ಲೂ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೋಚಿಮುಲ್ ಸಂಕಲ್ಪ ಮಾಡಿದೆ, ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊರ ತಂದಿರುವ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೆಕೋಠಿಯು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಕೋಚಿಮುಲ್ ಹಾಲು ಉತ್ಪಾದಕರ ಮಕ್ಕಳಿಗೆ ವಿಶೇಷವಾಗಿ ವಿದ್ಯಾರ್ಥಿವೇತನ ನೀಡುತ್ತಿದೆ. ಎಸ್ಸೆಸ್ಸೆಲ್ಸಿ ಸಾಧಕ ಮಕ್ಕಳಿಗೆ ತಲಾ ₹ 5 ಸಾವಿರ, ಪಿಯುಸಿ ಸಾಧಕರಿಗೆ ತಲಾ ₹ 7,500, ವೈದ್ಯಕೀಯ ವಿದ್ಯಾರ್ಥಿಗಳಿಗೆ ತಲಾ ₹ 25 ಸಾವಿರ, ಎಂಜಿನಿಯರಿಂಗ್ ಮತ್ತು ಪದವಿ ವಿದ್ಯಾರ್ಥಿಗಳಿಗೆ ತಲಾ ₹ 20 ಸಾವಿರ ನೆರವು ನೀಡುತ್ತಿದೆ’ ಎಂದು ವಿವರಿಸಿದರು.</p>.<p>ಧೈರ್ಯ ತುಂಬಿ: ‘ಹಿಂದಿನ ವರ್ಷ ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 5ನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಯು ಪ್ರಥಮ ಅಥವಾ ದ್ವಿತೀಯ ಸ್ಥಾನದಲ್ಲಿರಬೇಕು. ಯಾವುದೇ ವಿದ್ಯಾರ್ಥಿ ಅನುತ್ತೀರ್ಣವಾಗಬಾರದು’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ಧೈರ್ಯ ತುಂಬಿ. ಮಕ್ಕಳ ಸಾಮಾನ್ಯ ಜ್ಞಾನ ವೃದ್ಧಿಗೆ ಕ್ರಮ ವಹಿಸಿ. ಪ್ರತಿ ವಿದ್ಯಾರ್ಥಿಗೂ ಪ್ರಶ್ನೋತ್ತರ ಕೋಠಿ ಸಿಗುವಂತೆ ಮಾಡಿ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ’ ಎಂದು ಸಲಹೆ ನೀಡಿದರು.</p>.<p>ವಿಶೇಷ ತರಗತಿ: ‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯ ಘನತೆ ಎತ್ತಿ ಹಿಡಿಯಲು ಎಲ್ಲಾ ಶಿಕ್ಷಕರು ಶ್ರಮಿಸುತ್ತಿದ್ದಾರೆ. ವಿಶೇಷ ತರಗತಿಗಳು ನಡೆಯುತ್ತಿವೆ. ಮಕ್ಕಳಿಗೆ ಇಲಾಖೆಯಿಂದ ಫೋನ್–ಇನ್ ಕಾರ್ಯಕ್ರಮದ ಮೂಲಕ ಧೈರ್ಯ ತುಂಬಿ ಗೊಂದಲ ನಿವಾರಿಸಲಾಗುತ್ತಿದೆ’ ಎಂದು ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ ನೀಡಿದರು.</p>.<p>‘ಹಿಂದಿನ ವರ್ಷ ಫೋನ್–ಇನ್ ಕಾರ್ಯಕ್ರಮದಲ್ಲಿ ಹಲವು ಮಕ್ಕಳು ಪ್ರಶ್ನೆಗಳಿಗೆ ಉತ್ತರ ಕೇಳುತ್ತಿದ್ದರು. ಹೀಗಾಗಿ ಈ ಬಾರಿ ‘ನನ್ನನ್ನೊಮ್ಮೆ ಗಮನಿಸಿ’ ಪ್ರಶ್ನೋತ್ತರ ಕೋಠಿ ಸಿದ್ಧಪಡಿಸಲಾಗಿದೆ. ಇದು ಎಲ್ಲಾ ಹಂತದ ವಿದ್ಯಾರ್ಥಿಗಳಿಗೂ ಸಹಕಾರಿಯಾಗಿದೆ’ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಹೈನೋದ್ಯಮದ ಮೂಲಕ ರೈತರ ಬದುಕಿಗೆ ದಾರಿ ತೋರಿರುವ ಕೋಚಿಮುಲ್ ಇದೀಗ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ಕಾರ್ಯಕ್ಕೂ ಕೈಜೋಡಿಸಿದೆ’ ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೋಚಿಮುಲ್ ನಿರ್ದೇಶಕರಾದ ಕಾಡೇನಹಳ್ಳಿ ನಾಗರಾಜ್, ವೆಂಕಟೇಶ್, ವ್ಯವಸ್ಥಾಪಕ ನಿರ್ದೇಶಕ ತಿಪ್ಪಾರೆಡ್ಡಿ, ವ್ಯವಸ್ಥಾಪಕ ನಾಗೇಶ್, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>