ಮೈಸೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ 61 ನೌಕರರನ್ನು ಕೆಲಸದಿಂದ ತೆಗೆದುಹಾಕಿದ ಬಿಎಸ್ಎನ್ಎಲ್ ಕ್ರಮವನ್ನು ಖಂಡಿಸಿ ರಾಜ್ಯ ಬಿಎಸ್ಎನ್ಎಲ್ ಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಯಲಕ್ಷ್ಮಿಪುರಂನ ಕೇಂದ್ರ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಎಲ್ಲ ನೌಕರರನ್ನು ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.