ಹಿನ್ನೆಲೆ: ಬಿಜಿಎಂಎಲ್ ಪ್ರದೇಶದಲ್ಲಿ ಉಪಯೋಗವಾಗದೆ ಇರುವ ಸಾವಿರಾರು ಎಕರೆ ಖಾಲಿ ಜಾಗವನ್ನು ಕೈಗಾರಿಕೆ ಅಭಿವೃದ್ಧಿಗೆ ಉಪಯೋಗಿಸಿಕೊಳ್ಳಬೇಕೆಂದು ರಾಜ್ಯ ಸರ್ಕಾರ ಬಯಸಿತ್ತು. ಈ ಸಂಬಂಧವಾಗಿ ಆಗಸ್ಟ್ 28 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಕೇಂದ್ರ ಗಣಿ ಖಾತೆ ಸಚಿವ ಪ್ರಲ್ಹಾದ್ ಜೋಷಿ ಮತ್ತು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗಣಿ ಸಚಿವರು, ಗಣಿ ಪ್ರದೇಶದಲ್ಲಿರುವ ಖಾಲಿ ಜಾಗದಲ್ಲಿ ಖನಿಜ ಸಿಗುವ ಬಗ್ಗೆ ಸರ್ವೆ ಮಾಡಲಾಗುವುದು. ಖನಿಜ ಸಿಕ್ಕರೆ ಗಣಿಗಾರಿಕೆಯನ್ನು ಪ್ರಾರಂಭಿಸುತ್ತೇವೆ. ಇಲ್ಲವಾದಲ್ಲಿ ಕೈಗಾರಿಕೆಗಳಿಗೆ ಜಾಗವನ್ನು ನೀಡಲು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದರು. ಆರು ತಿಂಗಳೊಳಗೆ ಸರ್ವೆ ಮಾಡಲು ಸೂಚಿಸಿದ್ದೇನೆ ಎಂದು ಮಾಹಿತಿ
ನೀಡಿದ್ದರು.