ಸೌಕರ್ಯಗಳಿಲ್ಲ: ‘ನ್ಯಾಯಾಲಯ ಸಂಕೀರ್ಣ ತುಂಬಾ ಕಿರಿದಾಗಿದ್ದು, ಸ್ಥಳಾವಕಾಶದ ಕೊರತೆಯಿದೆ. ವಾಹನ ನಿಲುಗಡೆಗೆ ಸೂಕ್ತ ಸ್ಥಳ, ಶೌಚಾಲಯ, ವಕೀಲರಿಗೆ ವಿಶ್ರಾಂತಿ ಕೊಠಡಿ, ಕೂರಲು ಆಸನಗಳು, ಕುಡಿಯುವ ನೀರು, ಅಂಗವಿಕಲರು ಮತ್ತು ವಯೋವೃದ್ಧರಿಗೆ ಲಿಫ್ಟ್ ಸೌಕರ್ಯವಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳು ಸ್ಥಳಕ್ಕೆ ಬಂದು ನೂತನ ಕಟ್ಟಡದ ಬೇಡಿಕೆ ಈಡೇರಿಸುವ ಭರವಸೆ ಕೊಡಬೇಕು. ಆವರೆಗೆ ಕಲಾಪ ಬಹಿಷ್ಕರಿಸಿ ಹೋರಾಟ ಮುಂದುವರಿಸುತ್ತೇವೆ’ ಎಂದು ಧರಣಿನಿರತರು ಎಚ್ಚರಿಕೆ ನೀಡಿದರು.