<p><strong>ಕೋಲಾರ: </strong>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸುವಂತೆ ಸರ್ಕಾರ ಆದೇಶಿಸಿದ್ದು, ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜಿಲ್ಲೆಗೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ₹ 3,295 ಬೆಂಬಲ ಬೆಲೆ ನಿಗದಿಯಾಗಿದೆ. ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಕೋಲಾರ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಆಸಕ್ತ ರೈತರು ನೋಂದಣಿ ಕೇಂದ್ರಗಳಲ್ಲಿ 2021ರ ಜ.31ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ನೋಂದಣಿಯಾದ ರೈತರಿಂದ 2021ರ ಮಾರ್ಚ್ 15ರವರೆಗೆ ರಾಗಿ ಖರೀದಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ರೈತರು ನೋಂದಣಿ ಮಾಡಿಸಿಕೊಂಡ ನಂತರ ರಾಗಿ ಖರೀದಿ ಕೇಂದ್ರಕ್ಕೆ ತಂದ ರಾಗಿಯನ್ನು ಕೃಷಿ ಇಲಾಖೆಯಿಂದ ನೇಮಿಸಿದ ಗ್ರೇಡರ್ಗಳಿಂದ ಪರೀಕ್ಷೆ ಮಾಡಿಸಲಾಗುತ್ತದೆ. ಗುಣಮಟ್ಟದ ಪ್ರಮಾಣಪತ್ರ ಪಡೆದ ರಾಗಿಯನ್ನು ಖರೀದಿಸಲಾಗುವುದು. ಆ ನಂತರ ಆನ್ಲೈನ್ ಮೂಲಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸುವಂತೆ ಸರ್ಕಾರ ಆದೇಶಿಸಿದ್ದು, ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಜಿಲ್ಲೆಗೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನಿಯೋಜಿಸಲಾಗಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ₹ 3,295 ಬೆಂಬಲ ಬೆಲೆ ನಿಗದಿಯಾಗಿದೆ. ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಕೋಲಾರ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಆಸಕ್ತ ರೈತರು ನೋಂದಣಿ ಕೇಂದ್ರಗಳಲ್ಲಿ 2021ರ ಜ.31ರೊಳಗೆ ಹೆಸರು ನೋಂದಣಿ ಮಾಡಿಸಬೇಕು. ನೋಂದಣಿಯಾದ ರೈತರಿಂದ 2021ರ ಮಾರ್ಚ್ 15ರವರೆಗೆ ರಾಗಿ ಖರೀದಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ರೈತರು ನೋಂದಣಿ ಮಾಡಿಸಿಕೊಂಡ ನಂತರ ರಾಗಿ ಖರೀದಿ ಕೇಂದ್ರಕ್ಕೆ ತಂದ ರಾಗಿಯನ್ನು ಕೃಷಿ ಇಲಾಖೆಯಿಂದ ನೇಮಿಸಿದ ಗ್ರೇಡರ್ಗಳಿಂದ ಪರೀಕ್ಷೆ ಮಾಡಿಸಲಾಗುತ್ತದೆ. ಗುಣಮಟ್ಟದ ಪ್ರಮಾಣಪತ್ರ ಪಡೆದ ರಾಗಿಯನ್ನು ಖರೀದಿಸಲಾಗುವುದು. ಆ ನಂತರ ಆನ್ಲೈನ್ ಮೂಲಕ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>