<p><strong>ಕೆಜಿಎಫ್: </strong>ಬೇತಮಂಗಲ–ವಿ. ಕೋಟೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರೈಸಲು ಗುತ್ತಿಗೆದಾರರು ಬಿಲ್ ಪಾವತಿಗಾಗಿ ಪಟ್ಟು ಹಿಡಿದಿದ್ದಾರೆ. ಸಂಚಾರಕ್ಕೆ ತೊಂದರೆಯಾಗುವ ಕಾರಣದಿಂದಾಗಿ ಸ್ವಂತ ಖರ್ಚಿನಿಂದ ಕಾಮಗಾರಿ ಶುರು ಮಾಡಿರುವುದಾಗಿ ಶಾಸಕಿ ಎಂ. ರೂಪಕಲಾ ತಿಳಿಸಿದ್ದಾರೆ.</p>.<p>ಬೇತಮಂಗಲ ಹೊರವಲಯದಲ್ಲಿ ಸುಮಾರು ನೂರು ಮೀಟರ್ಗಳಷ್ಟು ದಾರಿಯಲ್ಲಿ ಡಾಂಬರನ್ನು ಗುತ್ತಿಗೆದಾರರು ಅಗೆದಿದ್ದಾರೆ. ಅದನ್ನು ದುರಸ್ತಿ ಮಾಡಿಲ್ಲ. ರಸ್ತೆ ನಿರ್ಮಾಣ ಮಾಡಿಲ್ಲ. 32 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ ಒಟ್ಟು ₹ 46 ಕೋಟಿ ವೆಚ್ಚವಾಗಲಿದೆ ಎಂದುತಿಳಿಸಿದ್ದಾರೆ.</p>.<p>ಕಾಮಗಾರಿಗೆ 2017ರ ಡಿಸೆಂಬರ್ನಲ್ಲಿ ಕಾರ್ಯಾದೇಶ ನೀಡಲಾಗಿತ್ತು. ಕಾಮಗಾರಿಯನ್ನು 2018ರ ನವೆಂಬರ್ನಲ್ಲಿ ಮುಗಿಸಬೇಕಾಗಿತ್ತು. ಗುಜರಾತ್ ಮೂಲದವರು ರಸ್ತೆ ಅಭಿವೃದ್ಧಿ ಟೆಂಡರ್ ತೆಗೆದುಕೊಂಡಿದ್ದರು. ಗುತ್ತಿಗೆದಾರರು ₹ 18 ಕೋಟಿಯಷ್ಟು ಕಾಮಗಾರಿ ನಡೆಸಿದ್ದರೂ, ಸರ್ಕಾರ ಕೇವಲ ₹ 6 ಕೋಟಿ ಪಾವತಿ ಮಾಡಿದೆ. ಬಾಕಿ ಇರುವ ಹಣವನ್ನು ಕೂಡಲೇ ಮಂಜೂರು ಮಾಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಚಿವರನ್ನು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಹಣ ಬಿಡುಗಡೆಯಾಗಿಲ್ಲ. ಹಣ ನೀಡದೆ ಕಾಮಗಾರಿ ಮಾಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ಜೊತೆಗೆ ರಸ್ತೆ ಅಭಿವೃದ್ಧಿಗೆ ರಸ್ತೆ ಬದಿಯ ಮರಗಳನ್ನು ಕಡಿಯಬೇಕಾಗಿತ್ತು. ಅದಕ್ಕಾಗಿ ಅರಣ್ಯ ಇಲಾಖೆಗೆ ಠೇವಣಿ ಹಣ ನೀಡಬೇಕಾಗಿತ್ತು. ಈ ಸಂಬಂಧವಾಗಿ ಕೂಡ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಕಾಲಾವಕಾಶ ಕೋರಲಾಗಿತ್ತು ಎಂದು ಶಾಸಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್: </strong>ಬೇತಮಂಗಲ–ವಿ. ಕೋಟೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರೈಸಲು ಗುತ್ತಿಗೆದಾರರು ಬಿಲ್ ಪಾವತಿಗಾಗಿ ಪಟ್ಟು ಹಿಡಿದಿದ್ದಾರೆ. ಸಂಚಾರಕ್ಕೆ ತೊಂದರೆಯಾಗುವ ಕಾರಣದಿಂದಾಗಿ ಸ್ವಂತ ಖರ್ಚಿನಿಂದ ಕಾಮಗಾರಿ ಶುರು ಮಾಡಿರುವುದಾಗಿ ಶಾಸಕಿ ಎಂ. ರೂಪಕಲಾ ತಿಳಿಸಿದ್ದಾರೆ.</p>.<p>ಬೇತಮಂಗಲ ಹೊರವಲಯದಲ್ಲಿ ಸುಮಾರು ನೂರು ಮೀಟರ್ಗಳಷ್ಟು ದಾರಿಯಲ್ಲಿ ಡಾಂಬರನ್ನು ಗುತ್ತಿಗೆದಾರರು ಅಗೆದಿದ್ದಾರೆ. ಅದನ್ನು ದುರಸ್ತಿ ಮಾಡಿಲ್ಲ. ರಸ್ತೆ ನಿರ್ಮಾಣ ಮಾಡಿಲ್ಲ. 32 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ ಒಟ್ಟು ₹ 46 ಕೋಟಿ ವೆಚ್ಚವಾಗಲಿದೆ ಎಂದುತಿಳಿಸಿದ್ದಾರೆ.</p>.<p>ಕಾಮಗಾರಿಗೆ 2017ರ ಡಿಸೆಂಬರ್ನಲ್ಲಿ ಕಾರ್ಯಾದೇಶ ನೀಡಲಾಗಿತ್ತು. ಕಾಮಗಾರಿಯನ್ನು 2018ರ ನವೆಂಬರ್ನಲ್ಲಿ ಮುಗಿಸಬೇಕಾಗಿತ್ತು. ಗುಜರಾತ್ ಮೂಲದವರು ರಸ್ತೆ ಅಭಿವೃದ್ಧಿ ಟೆಂಡರ್ ತೆಗೆದುಕೊಂಡಿದ್ದರು. ಗುತ್ತಿಗೆದಾರರು ₹ 18 ಕೋಟಿಯಷ್ಟು ಕಾಮಗಾರಿ ನಡೆಸಿದ್ದರೂ, ಸರ್ಕಾರ ಕೇವಲ ₹ 6 ಕೋಟಿ ಪಾವತಿ ಮಾಡಿದೆ. ಬಾಕಿ ಇರುವ ಹಣವನ್ನು ಕೂಡಲೇ ಮಂಜೂರು ಮಾಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಚಿವರನ್ನು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಹಣ ಬಿಡುಗಡೆಯಾಗಿಲ್ಲ. ಹಣ ನೀಡದೆ ಕಾಮಗಾರಿ ಮಾಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ ಎಂದು ವಿವರಿಸಿದ್ದಾರೆ.</p>.<p>ಜೊತೆಗೆ ರಸ್ತೆ ಅಭಿವೃದ್ಧಿಗೆ ರಸ್ತೆ ಬದಿಯ ಮರಗಳನ್ನು ಕಡಿಯಬೇಕಾಗಿತ್ತು. ಅದಕ್ಕಾಗಿ ಅರಣ್ಯ ಇಲಾಖೆಗೆ ಠೇವಣಿ ಹಣ ನೀಡಬೇಕಾಗಿತ್ತು. ಈ ಸಂಬಂಧವಾಗಿ ಕೂಡ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಕಾಲಾವಕಾಶ ಕೋರಲಾಗಿತ್ತು ಎಂದು ಶಾಸಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>