<p><strong>ಬಂಗಾರಪೇಟೆ</strong>: ಕೊರೊನಾದಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದ್ದು, ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ, ವಿದ್ಯಾಗಮ ಮೂಲಕ ಮಕ್ಕಳಿಗೆ ಪಾಠ ಆರಂಭಿಸಬೇಕು ಎಂದು ಒತ್ತಾಯಿಸಿ ದಲಿತ ಸಮಾಜ ಸೇನೆಯ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.</p>.<p>ಕೊರೊನಾ ಶುರುವಾಗಿ ಒಂದೂವರೆ ವರ್ಷ ಕಳೆದಿದೆ. ಈ ಕಾರಣದಿಂದಾಗಿ ಕಳೆದ ವರ್ಷ ಸರಿಯಾಗಿ ಪಾಠ ಮಾಡಿಲ್ಲ. ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡಲಾಗಿದೆ. ಪರಿಸ್ಥಿತಿ ಮುಂದುವರಿದರೆ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸೂಲಿಕುಂಟೆ ಆನಂದ್ ಆತಂಕ ವ್ಯಕ್ತಪಡಿಸಿದರು.</p>.<p>ಸರ್ಕಾರ ಭೌತಿಕ ಪಾಠ ನಡೆಸದೆ ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಆರಂಭಿಸಲು ಮಾರ್ಗದರ್ಶನ ನೀಡಿದೆ. ಆನ್ಲೈನ್ ಪಾಠದಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮಕ್ಕಳಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು ಎಂದರು.</p>.<p>ಶಾಲೆ ತೆರೆಯದ ಕಾರಣ ಮಕ್ಕಳು ಮಾನಸಿಕವಾಗಿ ಕುಗ್ಗಿದ್ದಾರೆ. ಮತ್ತೊಂದೆಡೆ ಪೋಷಕರೂ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಆದ್ದರಿಂದ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೊರೊನಾ ಸೋಂಕು ಇನ್ನೂ ಸಂಪೂರ್ಣವಾಗಿ ತೊಲಗದ ಕಾರಣ ವಿದ್ಯಾಗಮದಡಿ ನಿಗದಿತ ಸ್ಥಗಳಲ್ಲಿ ಪಾಠ ಮಾಡಿ ಮಕ್ಕಳಿಗೆ ಚೈತನ್ಯ ತುಂಬಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಒತ್ತಾಯಿಸಿದರು.</p>.<p>ಹುಣಸನಹಳ್ಳಿ ರಮೇಶ್, ಮಂಜುನಾಥ್, ಕಣಿಂಬೆಲೆ ಮಂಜುನಾಥ್, ವೆಂಕಟೇಶ್, ಮಹೇಂದ್ರ ಮತ್ತು ಬಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಕೊರೊನಾದಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಂಡಿದ್ದು, ಅವರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ, ವಿದ್ಯಾಗಮ ಮೂಲಕ ಮಕ್ಕಳಿಗೆ ಪಾಠ ಆರಂಭಿಸಬೇಕು ಎಂದು ಒತ್ತಾಯಿಸಿ ದಲಿತ ಸಮಾಜ ಸೇನೆಯ ಕಾರ್ಯಕರ್ತರು ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದರು.</p>.<p>ಕೊರೊನಾ ಶುರುವಾಗಿ ಒಂದೂವರೆ ವರ್ಷ ಕಳೆದಿದೆ. ಈ ಕಾರಣದಿಂದಾಗಿ ಕಳೆದ ವರ್ಷ ಸರಿಯಾಗಿ ಪಾಠ ಮಾಡಿಲ್ಲ. ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡಲಾಗಿದೆ. ಪರಿಸ್ಥಿತಿ ಮುಂದುವರಿದರೆ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸೂಲಿಕುಂಟೆ ಆನಂದ್ ಆತಂಕ ವ್ಯಕ್ತಪಡಿಸಿದರು.</p>.<p>ಸರ್ಕಾರ ಭೌತಿಕ ಪಾಠ ನಡೆಸದೆ ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಆರಂಭಿಸಲು ಮಾರ್ಗದರ್ಶನ ನೀಡಿದೆ. ಆನ್ಲೈನ್ ಪಾಠದಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ಮಕ್ಕಳಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು ಎಂದರು.</p>.<p>ಶಾಲೆ ತೆರೆಯದ ಕಾರಣ ಮಕ್ಕಳು ಮಾನಸಿಕವಾಗಿ ಕುಗ್ಗಿದ್ದಾರೆ. ಮತ್ತೊಂದೆಡೆ ಪೋಷಕರೂ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಆದ್ದರಿಂದ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೊರೊನಾ ಸೋಂಕು ಇನ್ನೂ ಸಂಪೂರ್ಣವಾಗಿ ತೊಲಗದ ಕಾರಣ ವಿದ್ಯಾಗಮದಡಿ ನಿಗದಿತ ಸ್ಥಗಳಲ್ಲಿ ಪಾಠ ಮಾಡಿ ಮಕ್ಕಳಿಗೆ ಚೈತನ್ಯ ತುಂಬಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಒತ್ತಾಯಿಸಿದರು.</p>.<p>ಹುಣಸನಹಳ್ಳಿ ರಮೇಶ್, ಮಂಜುನಾಥ್, ಕಣಿಂಬೆಲೆ ಮಂಜುನಾಥ್, ವೆಂಕಟೇಶ್, ಮಹೇಂದ್ರ ಮತ್ತು ಬಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>