<p>ಕೋಲಾರ: ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 30ರಿಂದ ಜೂನ್ 1ರವರೆಗೆ ನಡೆಯಲಿದ್ದು, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಕ್ರೀಡಾಪಟುಗಳು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿ ಮಾಡಿದ್ದಾರೆ.</p>.<p>ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸಂಪುಟದ ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳುತ್ತಾರೆ. ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದು, ಮೇ 30ರ ಸಂಜೆ 4.30ಕ್ಕೆ ಉದ್ಘಾಟನೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲಾ ಕ್ರೀಡಾಪಟುಗಳಿಗೂ ಗುಣಮಟ್ಟದ ಟ್ರಾಕ್ಸೂಟ್ ಹಾಗೂ ಕ್ಯಾಪ್ ನೀಡಲಾಗುವುದು. ಕ್ರೀಡಾಪಟುಗಳಿಗೆ 3 ದಿನ ಊಟೋಪಹಾರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ನೆನಪಿನ ಕಾಣಿಕೆ ನೀಡಲಾಗುವುದು. ಜತೆಗೆ ಅಖಿಲ ಭಾರತ ನಾಗರೀಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಮೇ 30ರ ಸಂಜೆ ಗಾಯಕ ವಿಜಯ್ ಪ್ರಕಾಶ್ರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 31ರ ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನಪದ ಕಲಾ ತಂಡಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 30ರಿಂದ ಜೂನ್ 1ರವರೆಗೆ ನಡೆಯಲಿದ್ದು, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಕ್ರೀಡಾಪಟುಗಳು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿ ಮಾಡಿದ್ದಾರೆ.</p>.<p>ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸಂಪುಟದ ಸಚಿವರು ಹಾಗೂ ಗಣ್ಯರು ಪಾಲ್ಗೊಳ್ಳುತ್ತಾರೆ. ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದು, ಮೇ 30ರ ಸಂಜೆ 4.30ಕ್ಕೆ ಉದ್ಘಾಟನೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲಾ ಕ್ರೀಡಾಪಟುಗಳಿಗೂ ಗುಣಮಟ್ಟದ ಟ್ರಾಕ್ಸೂಟ್ ಹಾಗೂ ಕ್ಯಾಪ್ ನೀಡಲಾಗುವುದು. ಕ್ರೀಡಾಪಟುಗಳಿಗೆ 3 ದಿನ ಊಟೋಪಹಾರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ನೆನಪಿನ ಕಾಣಿಕೆ ನೀಡಲಾಗುವುದು. ಜತೆಗೆ ಅಖಿಲ ಭಾರತ ನಾಗರೀಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಮೇ 30ರ ಸಂಜೆ ಗಾಯಕ ವಿಜಯ್ ಪ್ರಕಾಶ್ರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 31ರ ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನಪದ ಕಲಾ ತಂಡಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>