<p><strong>ಮುಳಬಾಗಿಲು:</strong> ಮೋತಿ ಮಸೀದಿ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಅನುಕೂಲವಾಗುವಂತೆ ಶಾದಿ ಮಹಲ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಶ್ರಮಿಸಲಾಗುವುದು ಸಚಿವ ಎಚ್.ನಾಗೇಶ್ ಹೇಳಿದರು.</p>.<p>ನಗರದ ಮುತ್ಯಾಲಪೇಟೆ 4ನೇ ವಾರ್ಡ್ನ ಮೋತಿ ಮಸೀದಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.</p>.<p>ಈ ಬಾರಿ ನಗರಸಭೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರ ಆಯ್ಕೆ ಸಂತೋಷ ತಂದಿದೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ನಗರಸಭೆ ಸದಸ್ಯರಾದವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಚತುರತೆ ಇರಬೇಕು. ಪ್ರತಿಯೊಬ್ಬ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿವಾರ್ಡ್ನ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅಧ್ಯಕ್ಷರು ಈ ನಿಟ್ಟಿನಲ್ಲಿ ಕೆಲಸ ಮಾಡಿದರೆ ನಗರಸಭೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದು ಸಚಿವರು ಹೇಳಿದರು.</p>.<p>ವಾರ್ಡ್ ಸದಸ್ಯ ಚಾಂದ್ ಪಾಷಾ, ಪೌರಾಯುಕ್ತ ಜಿ.ಶ್ರೀನಿವಾಸಮೂರ್ತಿ, ತಾಲ್ಲೂಕು ದರಕಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಗುತ್ತಿಗೆದಾರ ಅತ್ತಿಪಲ್ಲಿ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಮೋತಿ ಮಸೀದಿ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಅನುಕೂಲವಾಗುವಂತೆ ಶಾದಿ ಮಹಲ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಶ್ರಮಿಸಲಾಗುವುದು ಸಚಿವ ಎಚ್.ನಾಗೇಶ್ ಹೇಳಿದರು.</p>.<p>ನಗರದ ಮುತ್ಯಾಲಪೇಟೆ 4ನೇ ವಾರ್ಡ್ನ ಮೋತಿ ಮಸೀದಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.</p>.<p>ಈ ಬಾರಿ ನಗರಸಭೆ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರ ಆಯ್ಕೆ ಸಂತೋಷ ತಂದಿದೆ. ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ನಗರಸಭೆ ಸದಸ್ಯರಾದವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಚತುರತೆ ಇರಬೇಕು. ಪ್ರತಿಯೊಬ್ಬ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿವಾರ್ಡ್ನ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅಧ್ಯಕ್ಷರು ಈ ನಿಟ್ಟಿನಲ್ಲಿ ಕೆಲಸ ಮಾಡಿದರೆ ನಗರಸಭೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಅಭಿವೃದ್ಧಿ ಹೊಂದುತ್ತದೆ ಎಂದು ಸಚಿವರು ಹೇಳಿದರು.</p>.<p>ವಾರ್ಡ್ ಸದಸ್ಯ ಚಾಂದ್ ಪಾಷಾ, ಪೌರಾಯುಕ್ತ ಜಿ.ಶ್ರೀನಿವಾಸಮೂರ್ತಿ, ತಾಲ್ಲೂಕು ದರಕಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಗುತ್ತಿಗೆದಾರ ಅತ್ತಿಪಲ್ಲಿ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>