<p><strong>ಕೋಲಾರ:</strong> ನಗರದಲ್ಲಿ ಬುಧವಾರ ಬೀದಿನಾಯಿಯೊಂದು ಒಂದೂವರೆ ತಾಸಿನಲ್ಲಿ ಆರ್ಟಿಒ ಬ್ರೇಕ್ ಇನ್ಸ್ಪೆಕ್ಟರ್ ಸೇರಿದಂತೆ 21 ಜನರನ್ನು ಕಚ್ಚಿ ಗಾಯಗೊಳಿಸಿದೆ.</p>.<p>ಸಾರ್ವಜನಿಕರೇ ಆ ನಾಯಿಯನ್ನು ಅಟ್ಟಾಡಿಸಿ ಹೊಡೆದು ಸಾಯಿಸಿದ್ದಾರೆ. ಬಾಯಿಯಿಂದ ಜೊಲ್ಲು ಸೋರುತ್ತಿದ್ದ ಕಾರಣ ಅದು ಹುಚ್ಚುನಾಯಿ ಎಂದು ಗಾಯಾಳುಗಳು ಹೇಳಿದ್ದಾರೆ.</p>.<p>ಆರ್ಟಿಓ ಕಚೇರಿ ಮುಂಭಾಗ ಬೆಳಗ್ಗೆ 11 ಗಂಟೆಗೆ ಆರ್ಟಿಓ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡುತ್ತಿದ್ದವರನ್ನು ನಾಯಿ ಕಚ್ಚಿ ಗಾಯಗೊಳಿಸಿದೆ. ಅಲ್ಲಿಂದ ಪಕ್ಕದ ಬಡಾವಣೆ ಹಾಗೂ ಬಿಜಿಎಸ್ ಪಿಯು ಕಾಲೇಜು ಬಳಿ ಹೋಗಿ ಅಲ್ಲಿಯೂ ನಾಲ್ಕೈದು ಮಂದಿಯನ್ನು ಕಚ್ಚಿ ಗಾಯಗೊಳಿಸಿದೆ. </p>.<p>ನಾಯಿಯಿಂದ ಕಡಿತಕ್ಕೊಳಗಾದ ಗಾಯಾಳುಗಳನ್ನು ಕೂಡಲೇ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ಮಾಡಿಸಿ ಲಸಿಕೆ ನೀಡಿ ಕಳಿಸಲಾಯಿತು.</p>.<p>ಕೋಲಾರ ನಗರಸಭೆ ಆಯುಕ್ತ ನವೀನ್ ಚಂದ್ರ, ಕೆಜಿಎಫ್ನಿಂದ ನಾಯಿ ಹಿಡಿಯುವವರನ್ನು ಕರೆಸಲು ಮುಂದಾಗಿದ್ದಾರೆ. ಅಷ್ಟರಲ್ಲಿ ನಾಯಿಯನ್ನು ಸಾರ್ವಜನಿಕರೇ ಚರಂಡಿಗೆ ತಳ್ಳಿ ಕೋಲಿನಿಂದ ಹೊಡೆದು ಕೊಂದು ಹಾಕಿದರು. </p>.<p>ಆರ್ಟಿಒ ಕಚೇರಿ ಆವರಣದಲ್ಲಿ ವಿವಿಧ ಕೆಲಸಕ್ಕೆಂದು ಬಂದವರು ಬೀದಿನಾಯಿ ದಾಳಿಗೆ ಬೆದರಿ ಕಂಗಾಲಾಗಿ ಓಡುತ್ತಿದ್ದ ದೃಶ್ಯ ಕಂಡುಬಂತು. ಕೆಲ ದೃಶ್ಯಗಳು ಕಚೇರಿಯ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಗರದಲ್ಲಿ ಬುಧವಾರ ಬೀದಿನಾಯಿಯೊಂದು ಒಂದೂವರೆ ತಾಸಿನಲ್ಲಿ ಆರ್ಟಿಒ ಬ್ರೇಕ್ ಇನ್ಸ್ಪೆಕ್ಟರ್ ಸೇರಿದಂತೆ 21 ಜನರನ್ನು ಕಚ್ಚಿ ಗಾಯಗೊಳಿಸಿದೆ.</p>.<p>ಸಾರ್ವಜನಿಕರೇ ಆ ನಾಯಿಯನ್ನು ಅಟ್ಟಾಡಿಸಿ ಹೊಡೆದು ಸಾಯಿಸಿದ್ದಾರೆ. ಬಾಯಿಯಿಂದ ಜೊಲ್ಲು ಸೋರುತ್ತಿದ್ದ ಕಾರಣ ಅದು ಹುಚ್ಚುನಾಯಿ ಎಂದು ಗಾಯಾಳುಗಳು ಹೇಳಿದ್ದಾರೆ.</p>.<p>ಆರ್ಟಿಓ ಕಚೇರಿ ಮುಂಭಾಗ ಬೆಳಗ್ಗೆ 11 ಗಂಟೆಗೆ ಆರ್ಟಿಓ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡುತ್ತಿದ್ದವರನ್ನು ನಾಯಿ ಕಚ್ಚಿ ಗಾಯಗೊಳಿಸಿದೆ. ಅಲ್ಲಿಂದ ಪಕ್ಕದ ಬಡಾವಣೆ ಹಾಗೂ ಬಿಜಿಎಸ್ ಪಿಯು ಕಾಲೇಜು ಬಳಿ ಹೋಗಿ ಅಲ್ಲಿಯೂ ನಾಲ್ಕೈದು ಮಂದಿಯನ್ನು ಕಚ್ಚಿ ಗಾಯಗೊಳಿಸಿದೆ. </p>.<p>ನಾಯಿಯಿಂದ ಕಡಿತಕ್ಕೊಳಗಾದ ಗಾಯಾಳುಗಳನ್ನು ಕೂಡಲೇ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ಮಾಡಿಸಿ ಲಸಿಕೆ ನೀಡಿ ಕಳಿಸಲಾಯಿತು.</p>.<p>ಕೋಲಾರ ನಗರಸಭೆ ಆಯುಕ್ತ ನವೀನ್ ಚಂದ್ರ, ಕೆಜಿಎಫ್ನಿಂದ ನಾಯಿ ಹಿಡಿಯುವವರನ್ನು ಕರೆಸಲು ಮುಂದಾಗಿದ್ದಾರೆ. ಅಷ್ಟರಲ್ಲಿ ನಾಯಿಯನ್ನು ಸಾರ್ವಜನಿಕರೇ ಚರಂಡಿಗೆ ತಳ್ಳಿ ಕೋಲಿನಿಂದ ಹೊಡೆದು ಕೊಂದು ಹಾಕಿದರು. </p>.<p>ಆರ್ಟಿಒ ಕಚೇರಿ ಆವರಣದಲ್ಲಿ ವಿವಿಧ ಕೆಲಸಕ್ಕೆಂದು ಬಂದವರು ಬೀದಿನಾಯಿ ದಾಳಿಗೆ ಬೆದರಿ ಕಂಗಾಲಾಗಿ ಓಡುತ್ತಿದ್ದ ದೃಶ್ಯ ಕಂಡುಬಂತು. ಕೆಲ ದೃಶ್ಯಗಳು ಕಚೇರಿಯ ಬಳಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>