<p><strong>ಕೋಲಾರ:</strong> ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ ಅಂದಾಜು 79,281 ಬೀದಿನಾಯಿಗಳು ಇವೆ. ಈ ಎಲ್ಲಾ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ(ಅನಿಮಲ್ ಬರ್ತ್ ಕಂಟ್ರೋಲ್) ಮಾಡಲಾಗುವುದು. ಶಾಲಾ ಕಾಲೇಜು, ಆಸ್ಪತ್ರೆ, ನಿಲ್ದಾಣಗಳ ಆವರಣದಲ್ಲಿರುವ ಬೀದಿನಾಯಿಗಳನ್ನು ಮಾತ್ರ ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ (ಶೆಲ್ಟರ್) ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬೀದಿನಾಯಿಗಳ ಹಾವಳಿ ತಡೆಗಟ್ಟುವ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಅನುಷ್ಠಾನ ಮಾಡುವ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ನಗರ ಹಾಗೂ ಪಟ್ಟಣ ವ್ಯಾಪ್ತಿಯ ಖಾಸಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್, ರೈಲು ನಿಲ್ದಾಣ ಆವರಣಗಳಲ್ಲಿ ಸುಮಾರು 1,065 ಬೀದಿನಾಯಿಗಳಿವೆ. ಅದೇ ರೀತಿ ಗ್ರಾಮಾಂತರ ಪ್ರದೇಶದ ಶಾಲಾ ಕಾಲೇಜು, ಆಸ್ಪತ್ರೆ ಆವರಣದಲ್ಲಿ 9,429 ಬೀದಿನಾಯಿಗಳಿವೆ. ಮೊದಲಿಗೆ ಈ ನಾಯಿಗಳನ್ನು ಹಿಡಿದು ಬೇರೆ ಕಡೆ ಸಂತಾನಶಕ್ತಿ ಹರಣ ಚಿಕಿತ್ಸೆ ನಡೆಸಿ ಮೂರು ದಿನ ಆರೈಕೆ ಮಾಡಿ ಆಶ್ರಯ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆದೇಶದಂತೆ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ನಗರ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡುವ ಜಾಗದಲ್ಲಿಯೇ ತಾತ್ಕಾಲಿಕ ಶೆಡ್ ಅಳವಡಿಸಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋಲಾರದಲ್ಲಿ ಕೆಂದಟ್ಟಿ ಬಳಿ ಕೇಂದ್ರ ತೆರೆಯಲಾಗುವುದು. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ. ಬೀದಿನಾಯಿಗಳು ಮತ್ತೆ ಶಾಲಾ, ಆಸ್ಪತ್ರೆ ಆವರಣ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಮೇಲ್ವಿಚಾರಣೆ ಮಾಡಲು ಆಯಾ ಸಂಸ್ಥೆಗಳು ಒಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಈ ಕ್ರಮ ವಹಿಸಲು ಸರ್ಕಾರ ಈಗ ನಗರ ವ್ಯಾಪ್ತಿಗೆ ಅನುದಾನ ಬಿಡುಗಡೆ ಮಾಡಿದೆ. ಆ ಹಣ ಬಳಸಿಕೊಂಡು ಸೌಕರ್ಯ ಸೃಷ್ಟಿ ಮಾಡಲಾಗುತ್ತಿದೆ. ಮಾರ್ಗಸೂಚಿಗಳಂತೆ 100 ನಾಯಿಗಳ ಆಶ್ರಯ ಕೇಂದ್ರಕ್ಕೆ ತಿಂಗಳಿಗೆ ಅಂದಾಜು ₹ 3.33 ಲಕ್ಷ ವೆಚ್ಚವಾಗಲಿದೆ. ಒಟ್ಟಿನಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿ ಉಪಟಳ ತಪ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.</p>.<p>ಗ್ರಾಮಾಂತರ ಪ್ರದೇಶದ ಬೀದಿನಾಯಿಗಳಿಗೂ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಲು ಕ್ರಮ ವಹಿಸಿ ನಿರ್ದೇಶನ ನೀಡಲಾಗಿದೆ. ತಾಲ್ಲೂಕು ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಶ್ರಯ ಕೇಂದ್ರ ನಿರ್ಮಿಸಬೇಕು. ಶಾಲೆ, ಆಸ್ಪತ್ರೆ ಆವರಣಗಳಲ್ಲಿರುವ ನಾಯಿಗಳನ್ನು ಸ್ಥಳಾಂತರಿಸಬೇಕು ಎಂದರು.</p>.<p>ಆಶ್ರಯ ಕೇಂದ್ರದಲ್ಲಿ ಬೀದಿನಾಯಿಗಳ ಪೋಷಣೆ ಕೂಡ ಮುಖ್ಯವಾದದು. ಅವುಗಳಿಗೆ ನೀರು, ನಿತ್ಯ ಎರಡು ಬಾರಿ ಊಟ, ಔಷಧೋಪಾಚಾರ, ಸ್ವಚ್ಛತೆ, ಲಸಿಕೆ ಹಾಕಬೇಕು. ಪ್ರಾಣಿಗಳ ಕಲ್ಯಾಣ ಮಂಡಳಿ ಮಾರ್ಗಸೂಚಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ನಗರ ಪ್ರದೇಶದ ಶಾಲಾ ಆವರಣಗಳಲ್ಲಿಯೇ 534 ನಾಯಿಗಳು, ಆಸ್ಪತ್ರೆ ಕಾಂಪೌಂಡ್ ಒಳಗೆ 173 ನಾಯಿಗಳು ಇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ನಗರ ಯೋಜನಾ ಅಧಿಕಾರಿ ಅಂಬಿಕಾ, ಕೋಲಾರ ನಗರಸಭೆ ಆಯುಕ್ತ ನವೀನ್ ಚಂದ್ರ, ಪಶು ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ಇಒಗಳು, ನಗರಸಭೆ, ಪುರಸಭೆ ಮುಖ್ಯಸ್ಥರು ಇದ್ದರು.</p>.<div><blockquote>ಜಿಲ್ಲೆಯ ಎಲ್ಲಾ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಬೇಕು. ಇದರಲ್ಲಿ ಶೇ 100 ಪ್ರಗತಿ ಸಾಧಿಸಬೇಕು. ಇಲ್ಲದಿದ್ದರೆ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.</blockquote><span class="attribution">–ಎಂ.ಆರ್.ರವಿ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ ಅಂದಾಜು 79,281 ಬೀದಿನಾಯಿಗಳು ಇವೆ. ಈ ಎಲ್ಲಾ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ(ಅನಿಮಲ್ ಬರ್ತ್ ಕಂಟ್ರೋಲ್) ಮಾಡಲಾಗುವುದು. ಶಾಲಾ ಕಾಲೇಜು, ಆಸ್ಪತ್ರೆ, ನಿಲ್ದಾಣಗಳ ಆವರಣದಲ್ಲಿರುವ ಬೀದಿನಾಯಿಗಳನ್ನು ಮಾತ್ರ ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ (ಶೆಲ್ಟರ್) ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಬೀದಿನಾಯಿಗಳ ಹಾವಳಿ ತಡೆಗಟ್ಟುವ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಅನುಷ್ಠಾನ ಮಾಡುವ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲೆಯ ನಗರ ಹಾಗೂ ಪಟ್ಟಣ ವ್ಯಾಪ್ತಿಯ ಖಾಸಗಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್, ರೈಲು ನಿಲ್ದಾಣ ಆವರಣಗಳಲ್ಲಿ ಸುಮಾರು 1,065 ಬೀದಿನಾಯಿಗಳಿವೆ. ಅದೇ ರೀತಿ ಗ್ರಾಮಾಂತರ ಪ್ರದೇಶದ ಶಾಲಾ ಕಾಲೇಜು, ಆಸ್ಪತ್ರೆ ಆವರಣದಲ್ಲಿ 9,429 ಬೀದಿನಾಯಿಗಳಿವೆ. ಮೊದಲಿಗೆ ಈ ನಾಯಿಗಳನ್ನು ಹಿಡಿದು ಬೇರೆ ಕಡೆ ಸಂತಾನಶಕ್ತಿ ಹರಣ ಚಿಕಿತ್ಸೆ ನಡೆಸಿ ಮೂರು ದಿನ ಆರೈಕೆ ಮಾಡಿ ಆಶ್ರಯ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆದೇಶದಂತೆ ಅನುಷ್ಠಾನಗೊಳಿಸಲಾಗುವುದು ಎಂದರು.</p>.<p>ನಗರ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡುವ ಜಾಗದಲ್ಲಿಯೇ ತಾತ್ಕಾಲಿಕ ಶೆಡ್ ಅಳವಡಿಸಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋಲಾರದಲ್ಲಿ ಕೆಂದಟ್ಟಿ ಬಳಿ ಕೇಂದ್ರ ತೆರೆಯಲಾಗುವುದು. ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ. ಬೀದಿನಾಯಿಗಳು ಮತ್ತೆ ಶಾಲಾ, ಆಸ್ಪತ್ರೆ ಆವರಣ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಮೇಲ್ವಿಚಾರಣೆ ಮಾಡಲು ಆಯಾ ಸಂಸ್ಥೆಗಳು ಒಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಈ ಕ್ರಮ ವಹಿಸಲು ಸರ್ಕಾರ ಈಗ ನಗರ ವ್ಯಾಪ್ತಿಗೆ ಅನುದಾನ ಬಿಡುಗಡೆ ಮಾಡಿದೆ. ಆ ಹಣ ಬಳಸಿಕೊಂಡು ಸೌಕರ್ಯ ಸೃಷ್ಟಿ ಮಾಡಲಾಗುತ್ತಿದೆ. ಮಾರ್ಗಸೂಚಿಗಳಂತೆ 100 ನಾಯಿಗಳ ಆಶ್ರಯ ಕೇಂದ್ರಕ್ಕೆ ತಿಂಗಳಿಗೆ ಅಂದಾಜು ₹ 3.33 ಲಕ್ಷ ವೆಚ್ಚವಾಗಲಿದೆ. ಒಟ್ಟಿನಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೀದಿನಾಯಿ ಉಪಟಳ ತಪ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.</p>.<p>ಗ್ರಾಮಾಂತರ ಪ್ರದೇಶದ ಬೀದಿನಾಯಿಗಳಿಗೂ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಲು ಕ್ರಮ ವಹಿಸಿ ನಿರ್ದೇಶನ ನೀಡಲಾಗಿದೆ. ತಾಲ್ಲೂಕು ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಶ್ರಯ ಕೇಂದ್ರ ನಿರ್ಮಿಸಬೇಕು. ಶಾಲೆ, ಆಸ್ಪತ್ರೆ ಆವರಣಗಳಲ್ಲಿರುವ ನಾಯಿಗಳನ್ನು ಸ್ಥಳಾಂತರಿಸಬೇಕು ಎಂದರು.</p>.<p>ಆಶ್ರಯ ಕೇಂದ್ರದಲ್ಲಿ ಬೀದಿನಾಯಿಗಳ ಪೋಷಣೆ ಕೂಡ ಮುಖ್ಯವಾದದು. ಅವುಗಳಿಗೆ ನೀರು, ನಿತ್ಯ ಎರಡು ಬಾರಿ ಊಟ, ಔಷಧೋಪಾಚಾರ, ಸ್ವಚ್ಛತೆ, ಲಸಿಕೆ ಹಾಕಬೇಕು. ಪ್ರಾಣಿಗಳ ಕಲ್ಯಾಣ ಮಂಡಳಿ ಮಾರ್ಗಸೂಚಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ನಗರ ಪ್ರದೇಶದ ಶಾಲಾ ಆವರಣಗಳಲ್ಲಿಯೇ 534 ನಾಯಿಗಳು, ಆಸ್ಪತ್ರೆ ಕಾಂಪೌಂಡ್ ಒಳಗೆ 173 ನಾಯಿಗಳು ಇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ನಗರ ಯೋಜನಾ ಅಧಿಕಾರಿ ಅಂಬಿಕಾ, ಕೋಲಾರ ನಗರಸಭೆ ಆಯುಕ್ತ ನವೀನ್ ಚಂದ್ರ, ಪಶು ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ಇಒಗಳು, ನಗರಸಭೆ, ಪುರಸಭೆ ಮುಖ್ಯಸ್ಥರು ಇದ್ದರು.</p>.<div><blockquote>ಜಿಲ್ಲೆಯ ಎಲ್ಲಾ ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಬೇಕು. ಇದರಲ್ಲಿ ಶೇ 100 ಪ್ರಗತಿ ಸಾಧಿಸಬೇಕು. ಇಲ್ಲದಿದ್ದರೆ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.</blockquote><span class="attribution">–ಎಂ.ಆರ್.ರವಿ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>