ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಸ್ತೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ ಕಾರ್ಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸರ್ಕಾರಕ್ಕೂ ಗುತ್ತಿಗೆದಾರರಿಗೂ ಸಂಬಂಧವಿಲ್ಲ, ಕಾರ್ಯಾದೇಶ ಕೊಟ್ಟ ಮೇಲೆ ಗುಣಮಟ್ಟದ ಕಾಮಗಾರಿ ಮಾಡಿರಲೇಬೇಕು. ತಪ್ಪು ಮಾಡಿದವರು ತಪ್ಪಿಸಿಕೊಂಡು ಹೋಗಲು ಬಿಡುವುದಿಲ್ಲ’ ಎಂದರು.