ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ತಲುಪಿದ್ದ ಮಲಾಲ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಲಂಡನ್ಗೆ ಕಳುಹಿಸಲಾಗಿತ್ತು. ಮಲಾಲ ಬದುಕುಳಿದರೆ, ಅವರ ಮೇಲೆ ಮತ್ತೆ ದಾಳಿ ಮಾಡುವುದಾಗಿ ತಾಲಿಬಾನ್ ಬೆದರಿಕೆ ಹಾಕಿತ್ತು. ಮಲಾಲ ಸದ್ಯ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ. 2014ರಲ್ಲಿ ಅವರಿಗೆ ಶಾಂತಿ ನೊಬೆಲ್ ಸಂದಿತ್ತು. ಭಾರತದ ಕೈಲಾಶ್ ಸತ್ಯಾರ್ಥಿ ಜೊತೆ ಅವರು ಪ್ರಶಸ್ತಿ ಹಂಚಿಕೊಂಡಿದ್ದರು.