ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ, ಕಾಲೇಜು ವಿದ್ಯಾರ್ಥಿ ನಿಲಯ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಹಲ ಶಾಲಾ ಕಟ್ಟಡ ನಿರ್ಮಿಸಲಾಗಿದೆ. ಹೆಚ್ಚಿನ ಗ್ರಾಮೀಣ ಮಕ್ಕಳು ಇದರ ಅನುಕೂಲ ಪಡೆಯುತ್ತಿದ್ದು, ನನಗೆ ತೃಪ್ತಿ ತಂದಿದೆ ಎಂದರು. ಪ್ರಾಂಶುಪಾಲ ಮುನಿಶಾಮಪ್ಪ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.