ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನೆಗೆ ಸುಭಾಷ್‌ಚಂದ್ರ ಬೋಸ್‌ ಬುನಾದಿ: ಜನಾರ್ದನ್‌

ನೇತಾಜಿ ಜಯಂತಿ ಆಚರಣೆ
Last Updated 25 ಜನವರಿ 2022, 3:40 IST
ಅಕ್ಷರ ಗಾತ್ರ

ಕೋಲಾರ: ‘ಭಾರತ ದೇಶವು ಜಾಗತಿಕವಾಗಿ ಬಲಿಷ್ಠ ಸೇನಾ ಬಲ ಹೊಂದಲು ಸುಭಾಷ್‌ಚಂದ್ರ ಬೋಸ್ ಸ್ವಾತಂತ್ರ್ಯ ಪೂರ್ವದಲ್ಲೇ ಬುನಾದಿ ಹಾಕಿದ್ದರು’ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜನಾರ್ದನ್‌ ಹೇಳಿದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುಭಾಷ್‌ಚಂದ್ರ ಬೋಸ್ ಜಯಂತಿಯಲ್ಲಿ ಮಾತನಾಡಿ, ‘ಸುಭಾಷ್‌ಚಂದ್ರ ಬೋಸ್‌ ಭಾರತ ದೇಶವು ಬಲಿಷ್ಠ ಸೇನೆ ಹೊಂದಬೇಕೆಂದು ಕನಸ್ಸು ಕಂಡಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಲಕ್ಷಾಂತರ ಯೋಧರು ಸಜ್ಜಾಗಿದ್ದಾರೆ. ಸಮಾಜವು ಯೋಧರ ಸೇವೆ ಗೌರವಿಸುತ್ತಿರುವುದು ಸ್ವಾಗತಾರ್ಹ’ ಎಂದರು.

‘ಸ್ವಾತಂತ್ರ್ಯಕ್ಕೆ ಬಲಿದಾನ ಬೇಕು. ತಾವು ತನಗೆ ರಕ್ತ ಕೊಡಿ. ತಾನು ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಹೇಳಿದ್ದ ಸುಭಾಷ್‌ಚಂದ್ರ ಬೋಸ್ ಅವರ ದಾರಿಯಲ್ಲಿ ಯುವ ಪೀಳಿಗೆ ಸಾಗಬೇಕು. ಸುಭಾಷ್‌ಚಂದ್ರ ಬೋಸ್‌ ದೇಶಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಕ್ರಿಯಾಶೀಲ ಸೇನಾನಿ. ಅವರ ಆದರ್ಶ ಪಾಲಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಸುಭಾಷ್‌ಚಂದ್ರ ಬೋಸ್‌ ಅವರು ಜಗತ್ತಿನ 2ನೇ ಮಹಾಯುದ್ಧದಲ್ಲಿ ಆಜಾದ್ ಹಿಂದ್ ಫೌದ್ ಸಂಘಟನೆ ಸ್ಥಾಪಿಸಿ ಯುವಕರಲ್ಲಿ ಶೌರ್ಯ ಮತ್ತು ಧೈರ್ಯ ತುಂಬಿದ ಹೋರಾಟಗಾರ. ಅತಹ ಹೋರಾಟಗಾರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳಿಯಬೇಕು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಗಣೇಶ್ ಹೇಳಿದರು.

ಪುಸ್ತಕ ಸ್ಫೂರ್ತಿ: ‘ದೇಶಾಭಿಮಾನ ಮತ್ತು ಕ್ರಿಯಾಶೀಲತೆಯ ಪ್ರತೀಕವಾದ ಸುಭಾಷ್‌ಚಂದ್ರ ಬೋಸ್‌ರ ಬದುಕು ಯುವಕರಿಗೆ ಆದರ್ಶವಾಗಬೇಕು. ಅವರು ಬರೆದ ಭಾರತ ಸ್ವಾತಂತ್ರ್ಯ ಸಂಗ್ರಾಮ ಪುಸ್ತಕವು ಇಂದಿಗೂ ಸ್ಫೂರ್ತಿಯಾಗಿದೆ’ ಎಂದು ವಕೀಲ ಸತೀಶ್ ಅಭಿಪ್ರಾಯಪಟ್ಟರು.

‘ದೇಶದ ಉಳಿವಿಗೆ ಯುವ ಪೀಳಿಗೆ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶದ ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಸ್ಮರಿಸಿ ಗೌರವ ಸಲ್ಲಿಸಬೇಕು. ದೇಶದ ರಕ್ಷಣೆಗೆ ಯುವಕರು ಸೈನಿಕರಾಗಲು ಇಚ್ಛಿಸಬೇಕು’ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಪಿ.ನಾರಾಯಣಪ್ಪ ಸಲಹೆ ನೀಡಿದರು.

ಮಾನವ ಹಕ್ಕುಗಳ ಜಾಗೃತಿ ಮತ್ತು ನಿರ್ಮೂಲನಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್‌ಗೌಡ, ಎಇಎಸ್ ಪಬ್ಲಿಕ್ ಶಾಲೆ ಅಧ್ಯಕ್ಷ ಫಲ್ಗುಣ, ಮುಖಂಡರಾದ ರಮೇಶ್‌ಬಾಬು, ನಾರಾಯಣಸ್ವಾಮಿ, ರಾಮಚಂದ್ರ, ಟಿ.ಸುಬ್ಬರಾಮಯ್ಯ, ಕವಿ ಶರಣಪ್ಪ ಗಬ್ಬೂರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT