<p>ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುಣಸೇನಹಳ್ಳಿ ಗ್ರಾಮದ ನಿವೇಶನರಹಿತ ಬಡ ಕುಟುಂಬಗಳಿಗೆ ನಿವೇಶನ ನೀಡುವಂತೆ ಕೋರಿ ಕರ್ನಾಟಕ ಸಿಂಹ ಸೇನೆ ರಕ್ಷಣಾ ವೇದಿಕೆ ಸದಸ್ಯರು ಇಲ್ಲಿ ಸೋಮವಾರ ಉಪ ವಿಭಾಗಾಧಿಕಾರಿ ಆನಂದ್ಪ್ರಕಾಶ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಬಡ ಕುಟುಂಬಗಳಿಗೆ ನಿವೇಶನ ಕೋರಿ ಬಂಗಾರಪೇಟೆ ತಾಲ್ಲೂಕು ಆಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ, ತಾಲ್ಲೂಕು ಆಡಳಿತ ಮನವಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳಿಗೆ ಬಡ ಜನರ ಬಗ್ಗೆ ಕಾಳಜಿಯಿಲ್ಲ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹುಣಸೇನಹಳ್ಳಿ ಗ್ರಾಮದ ಸಾಕಷ್ಟು ಕುಟುಂಬಗಳಿಗೆ ಸ್ವಂತ ಮನೆಯಿಲ್ಲ. ಈ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಯು ಬಂಗಾರಪೇಟೆ ತಹಶೀಲ್ದಾರ್ಗೆ ಸೂಚನೆ ಕೊಟ್ಟಿದ್ದಾರೆ. ಆದರೆ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸುಧೀರ್ ದೂರಿದರು.</p>.<p>ಮನವಿಗೆ ಸ್ಪಂದಿಸಿದ ಉಪ ವಿಭಾಗಾಧಿಕಾರಿ, ‘ಬಡ ಕುಟುಂಬಗಳಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಸಂಘಟನೆಯ ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷೆ ಸರಸ್ವತಿ, ಹುಣಸೇನಹಳ್ಳಿ ಗ್ರಾಮಸ್ಥರಾದ ಮಹಾಲಕ್ಷ್ಮೀ, ಚಂದ್ರಮ್ಮ, ಗಜವೇಣಿ, ಜಯಾ, ಮಲ್ಲಿಕಾ, ರಾಧಾ, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುಣಸೇನಹಳ್ಳಿ ಗ್ರಾಮದ ನಿವೇಶನರಹಿತ ಬಡ ಕುಟುಂಬಗಳಿಗೆ ನಿವೇಶನ ನೀಡುವಂತೆ ಕೋರಿ ಕರ್ನಾಟಕ ಸಿಂಹ ಸೇನೆ ರಕ್ಷಣಾ ವೇದಿಕೆ ಸದಸ್ಯರು ಇಲ್ಲಿ ಸೋಮವಾರ ಉಪ ವಿಭಾಗಾಧಿಕಾರಿ ಆನಂದ್ಪ್ರಕಾಶ್ ಮೀನಾ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಬಡ ಕುಟುಂಬಗಳಿಗೆ ನಿವೇಶನ ಕೋರಿ ಬಂಗಾರಪೇಟೆ ತಾಲ್ಲೂಕು ಆಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ, ತಾಲ್ಲೂಕು ಆಡಳಿತ ಮನವಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಿಗಳಿಗೆ ಬಡ ಜನರ ಬಗ್ಗೆ ಕಾಳಜಿಯಿಲ್ಲ’ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಹುಣಸೇನಹಳ್ಳಿ ಗ್ರಾಮದ ಸಾಕಷ್ಟು ಕುಟುಂಬಗಳಿಗೆ ಸ್ವಂತ ಮನೆಯಿಲ್ಲ. ಈ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವಂತೆ ಜಿಲ್ಲಾಧಿಕಾರಿಯು ಬಂಗಾರಪೇಟೆ ತಹಶೀಲ್ದಾರ್ಗೆ ಸೂಚನೆ ಕೊಟ್ಟಿದ್ದಾರೆ. ಆದರೆ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸುಧೀರ್ ದೂರಿದರು.</p>.<p>ಮನವಿಗೆ ಸ್ಪಂದಿಸಿದ ಉಪ ವಿಭಾಗಾಧಿಕಾರಿ, ‘ಬಡ ಕುಟುಂಬಗಳಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಸಂಘಟನೆಯ ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷೆ ಸರಸ್ವತಿ, ಹುಣಸೇನಹಳ್ಳಿ ಗ್ರಾಮಸ್ಥರಾದ ಮಹಾಲಕ್ಷ್ಮೀ, ಚಂದ್ರಮ್ಮ, ಗಜವೇಣಿ, ಜಯಾ, ಮಲ್ಲಿಕಾ, ರಾಧಾ, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>