ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಕ್ಷೇತ್ರಕ್ಕೆ ಸುದರ್ಶನ್ ಅರ್ಜಿ

Last Updated 24 ನವೆಂಬರ್ 2022, 4:30 IST
ಅಕ್ಷರ ಗಾತ್ರ

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೆಟ್‍ಗಾಗಿ ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಅರ್ಜಿಯಲ್ಲಿ ಯಾವುದೇ ಕ್ಷೇತ್ರದ ಹೆಸರನ್ನು ದಾಖಲಿಸದೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ಕಾರಣ ಈ ಕ್ಷೇತ್ರದಿಂದ ಅರ್ಜಿ ಸಲ್ಲಿಸಿರುವುದಾಗಿ ಅವರು ಹೇಳಿದರು.

‘ಒಂದು ವೇಳೆ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾಗಬೇಕು ಎಂದು ಹೈಕಮಾಂಡ್ ಸೂಚಿಸಿದರೆ ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸುತ್ತೇವೆ’ ಎಂದರು.

‘ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯ ನಿರೀಕ್ಷೆಯಲ್ಲಿ ಇದ್ದೇವೆ. ಅವರು ಸ್ಪರ್ಧಿಸದಿದ್ದರೆ ನನಗೆ ಅವಕಾಶ ಕೊಡಬೇಕೆಂದು ಕೋರಿದ್ದೇನೆ. ಜನರ ಒತ್ತಾಯವೂ ಇದೆ. ನಾನು ಕೂಡ ಇದೇ ಕ್ಷೇತ್ರದ ವ್ಯಕ್ತಿ’ ಎಂದು ಹೇಳಿದರು.

ಈಗಾಗಲೇ ಕೋಲಾರ ಕ್ಷೇತ್ರದಿಂದ ಟಿಕೆಟ್ ಬಯಸಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಮುಖಂಡರಾದ ಸಿ.ಆರ್.ಮನೋಹರ್, ಊರುಬಾಗಿಲು ಶ್ರೀನಿವಾಸ್, ಎಲ್.ಎ.ಮಂಜುನಾಥ್, ಎ.ಶ್ರೀನಿವಾಸ್ ಅರ್ಜಿ ಸಲ್ಲಿಸಿರುವುದು ಗೊತ್ತಾಗಿದೆ.ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಕೂಡ ಅರ್ಜಿ ಹಾಕಿದ್ದು, ಕ್ಷೇತ್ರ ನಮೂದಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT