ಶಾಸಕ ಎಚ್.ನಾಗೇಶ್ ಅವರು ಈಚೆಗೆ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕಟ್ಟಡವನ್ನು ತಕ್ಷಣಕ್ಕೆ ಕೋವಿಡ್ಸಂತ್ರಸ್ತರಿಗೆ ಉಪಯೋಗಿಸಿಕೊಳ್ಳಲು ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಗರಸಭೆ ಪೌರಕಾರ್ಮಿಕರು ಬುಧವಾರ ಬೆಳಿಗ್ಗೆ ವಾಣಿಜ್ಯ ಸಂಕೀರ್ಣವನ್ನು ಸ್ವಚ್ಛಗೊಳಿಸುವ ಕೆಲಸ ಆರಂಭಿಸಿದ್ದಾರೆ ಎಂದು ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದ್ದಾರೆ.