<p><strong>ಕೋಲಾರ:</strong> ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಹಾಗೂ ತೆರಿಗೆ ಪಾವತಿಸುವ ಕುರಿತು ನಗರದಲ್ಲಿ ನಗರಸಭೆಯಿಂದ ಶುಕ್ರವಾರ ಜಾಗೃತಿ ಜಾಥಾ ನಡೆಯಿತು.</p>.<p>ನಗರಭೆ ಪೌರಾಯುಕ್ತ ಶ್ರೀಕಾಂತ್ ಚಾಲನೆ ನೀಡಿ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆ ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಇನ್ನು ಮುಂದೆ ಯಾರಾದರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬಂದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಸ ಮುಕ್ತ ನಗರ ನಿರ್ಮಾಣ ಮಾಡುವ ಜವಾಬ್ದಾರಿ ನಾಗರಿಕರ ಮೇಲಿದೆ. ಈ ಬಗ್ಗೆ ಯುವಕರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿಗೆ ತಾಲ್ಲೂಕಿನ ಪೊಂಬರಹಳ್ಳಿ ಸಮೀಪ ಜಾಗ ಗುರುತಿಸಲಾಗಿದೆ. ಸಾರ್ವಜನಿಕರು ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರಿಗೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಲಕಾಲಕ್ಕೆ ತೆರಿಗೆ ಪಾವತಿಯಾಗದ ಕಾರಣ, ನಗರಸಭೆ ಸಿಬ್ಬಂದಿಗೆ ವೇತನ ನೀಡಲು ಅಗುತ್ತಿಲ್ಲ. ಮತ್ತೊಂದು ಕಡೆ ಆದಾಯ ಹೆಚ್ಚಳ ಮಾಡಲು ಅಗುತ್ತಿಲ್ಲ. ಬಿಲ್ ಕಲೆಕ್ಟರ್ಗಳು ತೆರಿಗೆ ವಸೂಲಿಗೆ ಬಂದಾಗ ನಾಗರಿಕರು ಸ್ಪಂದಿಸಬೇಕು’ ಎಂದು ತಿಳಿಸಿದರು.</p>.<p>ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಕ್ಲಕ್ ಟವರ್, ಅಮ್ಮವಾರಿ ಪೇಟೆ ಭಾಗದಲ್ಲಿ ವಾಣಿಜ್ಯ ತೆರಿಗೆ ಬಾಕಿ ಉಳಿದಿದೆ. ನೋಟಿಸ್ ನೀಡಿದ್ದರೂ ಪಾವತಿಗೆ ಮುಂದಾಗಿಲ್ಲ. ಕೊನೆ ನೋಟಿಸ್ಗೂ ಮಣಿಯದಿದ್ದರೆ ಕಾನೂನು ಕ್ರಮಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ವಕ್ಫ್ ಬೋರ್ಡ್ ₹ 93 ಲಕ್ಷ, ನಾಗರಾಜ ಸ್ಟೋರ್ ₹ 40 ಲಕ್ಷ, ಚಿನ್ಮಯ ಶಾಲೆ ₹65ಲಕ್ಷ, ಭವಾನಿ ಚಿತ್ರಮಂದಿರ ₹23ಲಕ್ಷ, ಡಿಸಿಸಿ ಬ್ಯಾಂಕ್ ಹಾಗೂ ಸಹಕಾರಿ ಯೂನಿಯನ್ ತಲಾ ₹10ಲಕ್ಷ ಸೇರಿದಂತೆ ಇನ್ನೂ ಅನೇಕರು ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಪಾವತಿ ಮಾಡಬೇಕು’ ಎಂದು ಹೇಳಿದರು.</p>.<p>ನಗರಸಭೆ ಅಧಿಕಾರಿಗಳು ಹಾಗೂ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಜಾಥಾವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.</p>.<p>ನಗರಸಭೆ ವ್ಯವಸ್ಥಾಪಕ ತ್ಯಾಗರಾಜ್, ಆರೋಗ್ಯ ನಿರೀಕ್ಷಕರಾದ ದೀಪಾ, ಮರಿಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಪ್ಲಾಸ್ಟಿಕ್ ಬಳಕೆ ನಿಯಂತ್ರಣ ಹಾಗೂ ತೆರಿಗೆ ಪಾವತಿಸುವ ಕುರಿತು ನಗರದಲ್ಲಿ ನಗರಸಭೆಯಿಂದ ಶುಕ್ರವಾರ ಜಾಗೃತಿ ಜಾಥಾ ನಡೆಯಿತು.</p>.<p>ನಗರಭೆ ಪೌರಾಯುಕ್ತ ಶ್ರೀಕಾಂತ್ ಚಾಲನೆ ನೀಡಿ ಮಾತನಾಡಿ, ‘ಪ್ಲಾಸ್ಟಿಕ್ ಬಳಕೆ ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಇನ್ನು ಮುಂದೆ ಯಾರಾದರು ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡು ಬಂದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಕಸ ಮುಕ್ತ ನಗರ ನಿರ್ಮಾಣ ಮಾಡುವ ಜವಾಬ್ದಾರಿ ನಾಗರಿಕರ ಮೇಲಿದೆ. ಈ ಬಗ್ಗೆ ಯುವಕರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿಗೆ ತಾಲ್ಲೂಕಿನ ಪೊಂಬರಹಳ್ಳಿ ಸಮೀಪ ಜಾಗ ಗುರುತಿಸಲಾಗಿದೆ. ಸಾರ್ವಜನಿಕರು ಕಸವನ್ನು ವಿಂಗಡಿಸಿ ಪೌರ ಕಾರ್ಮಿಕರಿಗೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಸಾಲಕಾಲಕ್ಕೆ ತೆರಿಗೆ ಪಾವತಿಯಾಗದ ಕಾರಣ, ನಗರಸಭೆ ಸಿಬ್ಬಂದಿಗೆ ವೇತನ ನೀಡಲು ಅಗುತ್ತಿಲ್ಲ. ಮತ್ತೊಂದು ಕಡೆ ಆದಾಯ ಹೆಚ್ಚಳ ಮಾಡಲು ಅಗುತ್ತಿಲ್ಲ. ಬಿಲ್ ಕಲೆಕ್ಟರ್ಗಳು ತೆರಿಗೆ ವಸೂಲಿಗೆ ಬಂದಾಗ ನಾಗರಿಕರು ಸ್ಪಂದಿಸಬೇಕು’ ಎಂದು ತಿಳಿಸಿದರು.</p>.<p>ನಗರದ ಎಂಜಿ ರಸ್ತೆ, ದೊಡ್ಡಪೇಟೆ, ಕ್ಲಕ್ ಟವರ್, ಅಮ್ಮವಾರಿ ಪೇಟೆ ಭಾಗದಲ್ಲಿ ವಾಣಿಜ್ಯ ತೆರಿಗೆ ಬಾಕಿ ಉಳಿದಿದೆ. ನೋಟಿಸ್ ನೀಡಿದ್ದರೂ ಪಾವತಿಗೆ ಮುಂದಾಗಿಲ್ಲ. ಕೊನೆ ನೋಟಿಸ್ಗೂ ಮಣಿಯದಿದ್ದರೆ ಕಾನೂನು ಕ್ರಮಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ವಕ್ಫ್ ಬೋರ್ಡ್ ₹ 93 ಲಕ್ಷ, ನಾಗರಾಜ ಸ್ಟೋರ್ ₹ 40 ಲಕ್ಷ, ಚಿನ್ಮಯ ಶಾಲೆ ₹65ಲಕ್ಷ, ಭವಾನಿ ಚಿತ್ರಮಂದಿರ ₹23ಲಕ್ಷ, ಡಿಸಿಸಿ ಬ್ಯಾಂಕ್ ಹಾಗೂ ಸಹಕಾರಿ ಯೂನಿಯನ್ ತಲಾ ₹10ಲಕ್ಷ ಸೇರಿದಂತೆ ಇನ್ನೂ ಅನೇಕರು ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಪಾವತಿ ಮಾಡಬೇಕು’ ಎಂದು ಹೇಳಿದರು.</p>.<p>ನಗರಸಭೆ ಅಧಿಕಾರಿಗಳು ಹಾಗೂ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಜಾಥಾವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.</p>.<p>ನಗರಸಭೆ ವ್ಯವಸ್ಥಾಪಕ ತ್ಯಾಗರಾಜ್, ಆರೋಗ್ಯ ನಿರೀಕ್ಷಕರಾದ ದೀಪಾ, ಮರಿಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>