ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಅಭ್ಯರ್ಥಿಗಳಿಗೆ ಬೆಂಬಲ

Last Updated 9 ಏಪ್ರಿಲ್ 2019, 12:43 IST
ಅಕ್ಷರ ಗಾತ್ರ

ಕೋಲಾರ: ‘ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡುತ್ತೇವೆ’ ಎಂದು ಯುನೈಟೆಡ್ ಗ್ರೂಪ್ಸ್ ಆಫ್ ಯೂನಿವರ್ಸ್ ಸಂಸ್ಥೆ ಪ್ರತಿನಿಧಿ ಭಾಸ್ಕರ್‌ರೆಡ್ಡಿ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕೃಷ್ಣಬೈರೇಗೌಡ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಬಚ್ಚೇಗೌಡ, ಹಾಸನದಲ್ಲಿ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ, ತುಮಕೂರಿನಲ್ಲಿ ಜೆಡಿಎಸ್‌ನ ಎಚ್.ಡಿ.ದೇವೇಗೌಡ ಹಾಗೂ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸುತ್ತೇವೆ’ ಎಂದರು.

‘ಈ ಅಭ್ಯರ್ಥಿಗಳಿಗೆ ಜತೆಗೆ ನಟ ಉಪೇಂದ್ರರ ನೂತನ ಪಕ್ಷ ಉತ್ತಮ ಪ್ರಜಾಕೀಯ ಪಕ್ಷದಲ್ಲಿನ ಕೆಲ ಅಭ್ಯರ್ಥಿಗಳನ್ನು ಬೆಂಬಲಿಸುತ್ತೇವೆ. ಸಮಾಜದ ಏಳಿಗೆಗೆ ಶ್ರಮಿಸುವ ಅಭ್ಯರ್ಥಿಗಳ ಪರ ಸಂಸ್ಥೆಯ ಪ್ರತಿನಿಧಿಗಳು ಪ್ರಚಾರ ನಡೆಸಿ ಗೆಲುವಿಗೆ ಸಹಕರಿಸುತ್ತಾರೆ’ ಎಂದು ಹೇಳಿದರು.

‘ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಕೆಲ ಮುಖ್ಯ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಈ ಅಭ್ಯರ್ಥಿಗಳು ಯುವ ಸಮುದಾಯಕ್ಕೆ ಉತ್ತಮ ಭವಿಷ್ಯ ಸೃಷ್ಟಿಸಲು ಹಗಲಿರುಳು ದುಡಿಯುತ್ತಿದ್ದಾರೆ. ನಾನು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT