ಆರೋಪಿ ಸ್ವಾಮೀಜಿಯು ಭೀಮಲಿಂಗೇಶ್ವರ ದೇವಾಲಯಕ್ಕೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ್ದ ಸುಮಾರು ₹ 10 ಲಕ್ಷವನ್ನು ಜತೆಯಲ್ಲೇ ತೆಗೆದುಕೊಂಡು ಹೋಗಿದ್ದು, ಭಕ್ತರೂ ವಂಚನೆಗೆ ಒಳಗಾಗಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳದ ಸ್ವಾಮೀಜಿಗೆ ಹಾವೇರಿ ಜಿಲ್ಲೆಯಲ್ಲಿನ ಆಪ್ತರು ಆಶ್ರಯ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ಪತ್ತೆ ಕಾರ್ಯ ಚುರುಕುಗೊಳಿಸಿರುವ ಪೊಲೀಸರು ಸ್ವಾಮೀಜಿಯ ಆಪ್ತರು ಹಾಗೂ ಸ್ನೇಹಿತರ ವಿಚಾರಣೆ ನಡೆಸಿದ್ದಾರೆ.