<p>ಕೋಲಾರ: ನಗರದ ರಂಗಮಂದಿರ ಆವರಣದಲ್ಲಿ ಕೋಲಾರ ನಗರ ನಿಮಾತೃ ಟಿ.ಚನ್ನಯ್ಯ ಅವರ ಪುತ್ಥಳಿ ಸಿದ್ಧಗೊಂಡಿದ್ದು, ಸದ್ಯದಲ್ಲೇ ಅನಾವರಣಗೊಳ್ಳಲಿದೆ.</p>.<p>ಟಿ.ಚನ್ನಯ್ಯ ಅವರ ಪುತ್ಥಳಿ ಸ್ಥಾಪಿಸಬೇಕೆಂಬುದು ಬಹಳ ವರ್ಷಗಳ ಕೂಗಾಗಿತ್ತು. ಅವರು ಕೋಲಾರ ನಗರಕ್ಕೆ ಬೇಕಾದ ಸೌಲಭ್ಯಗಳ ಕುರಿತು ಕನಸು ಕಂಡಿದ್ದು ಮಾತ್ರವಲ್ಲದೇ; ಸ್ಯಾನಿಟೋರಿಯಂ ಆಸ್ಪತ್ರೆ, ನಚಿಕೇತ ನಿಲಯದಂಥ ಹಾಸ್ಟೆಲ್, ಹಳೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಕಾರಣರಾದವರು. ಕೋಲಾರಕ್ಕೆ ಮೊದಲು ವಿದ್ಯುತ್ ತಂದವರು.</p>.<p>ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ಒಡನಾಟ ಹೊಂದಿದ್ದ ಚನ್ನಯ್ಯ, ಭಾರತ ಸಂವಿಧಾನ ಪರಿಷತ್ತಿನ ಸದಸ್ಯರಾಗಿದ್ದರು.</p>.<p>ಮುಳಬಾಗಿಲು ಕ್ಷೇತ್ರದಿಂದ ಅವಿರೋಧವಾಗಿ ಗೆದ್ದು ಶಾಸಕರಾಗಿದ್ದ ಅವರು ಕೆಂಗಲ್ ಹನುಮಂತಯ್ಯ ಸರ್ಕಾರದಲ್ಲಿ ಎಂಟು ಖಾತೆಗಳ ಸಚಿವರಾಗಿದ್ದರು. ಕೆಲ ಕಾಲ ತಮಿಳುನಾಡು ರಾಜ್ಯಪಾಲರಾಗಿದ್ದರು. ಅದಕ್ಕೂ ಮೊದಲು ರಾಜ್ಯಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿದ್ದರು.</p>.<p>ಈಚೆಗೆ ನಡೆದ ಟಿ.ಚನ್ನಯ್ಯ ಅವರ 41ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಪುತ್ರ ಬಾಲಾಜಿ ಚನ್ನಯ್ಯ ಪುತ್ಥಳಿ ಸ್ಥಾಪಿಸಬೇಕೆಂದು ಆಗ್ರಹಿಸಿದ್ದರು.</p>.<p>ಭಾನುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರು ಪುತ್ಥಳಿ ವೀಕ್ಷಿಸಿದರು.</p>.<p>ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.</p>.<p>ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ರಂಗಮಂದಿರ ಆವರಣದಲ್ಲಿ ಕೋಲಾರ ನಗರ ನಿಮಾತೃ ಟಿ.ಚನ್ನಯ್ಯ ಅವರ ಪುತ್ಥಳಿ ಸಿದ್ಧಗೊಂಡಿದ್ದು, ಸದ್ಯದಲ್ಲೇ ಅನಾವರಣಗೊಳ್ಳಲಿದೆ.</p>.<p>ಟಿ.ಚನ್ನಯ್ಯ ಅವರ ಪುತ್ಥಳಿ ಸ್ಥಾಪಿಸಬೇಕೆಂಬುದು ಬಹಳ ವರ್ಷಗಳ ಕೂಗಾಗಿತ್ತು. ಅವರು ಕೋಲಾರ ನಗರಕ್ಕೆ ಬೇಕಾದ ಸೌಲಭ್ಯಗಳ ಕುರಿತು ಕನಸು ಕಂಡಿದ್ದು ಮಾತ್ರವಲ್ಲದೇ; ಸ್ಯಾನಿಟೋರಿಯಂ ಆಸ್ಪತ್ರೆ, ನಚಿಕೇತ ನಿಲಯದಂಥ ಹಾಸ್ಟೆಲ್, ಹಳೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಕಾರಣರಾದವರು. ಕೋಲಾರಕ್ಕೆ ಮೊದಲು ವಿದ್ಯುತ್ ತಂದವರು.</p>.<p>ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರೊಂದಿಗೆ ಒಡನಾಟ ಹೊಂದಿದ್ದ ಚನ್ನಯ್ಯ, ಭಾರತ ಸಂವಿಧಾನ ಪರಿಷತ್ತಿನ ಸದಸ್ಯರಾಗಿದ್ದರು.</p>.<p>ಮುಳಬಾಗಿಲು ಕ್ಷೇತ್ರದಿಂದ ಅವಿರೋಧವಾಗಿ ಗೆದ್ದು ಶಾಸಕರಾಗಿದ್ದ ಅವರು ಕೆಂಗಲ್ ಹನುಮಂತಯ್ಯ ಸರ್ಕಾರದಲ್ಲಿ ಎಂಟು ಖಾತೆಗಳ ಸಚಿವರಾಗಿದ್ದರು. ಕೆಲ ಕಾಲ ತಮಿಳುನಾಡು ರಾಜ್ಯಪಾಲರಾಗಿದ್ದರು. ಅದಕ್ಕೂ ಮೊದಲು ರಾಜ್ಯಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾಗಿದ್ದರು.</p>.<p>ಈಚೆಗೆ ನಡೆದ ಟಿ.ಚನ್ನಯ್ಯ ಅವರ 41ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರ ಪುತ್ರ ಬಾಲಾಜಿ ಚನ್ನಯ್ಯ ಪುತ್ಥಳಿ ಸ್ಥಾಪಿಸಬೇಕೆಂದು ಆಗ್ರಹಿಸಿದ್ದರು.</p>.<p>ಭಾನುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರು ಪುತ್ಥಳಿ ವೀಕ್ಷಿಸಿದರು.</p>.<p>ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಅವರಿಗೆ ಸೂಚಿಸಿದರು.</p>.<p>ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>