‘ದೇಶದ ವಿವಿಧೆಡೆ ನಡೆದಿರುವ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಬಂಧ ಧ್ವನಿ ಎತ್ತುತ್ತಿದ್ದೇವೆ. ಆದರೆ, ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ. ಪ್ರತಿಭಟನೆ ಮಾಡುವುದಕ್ಕೂ ಪೊಲೀಸರು ಹತ್ತಾರು ಷರತ್ತು ವಿಧಿಸಿ ಕೋವಿಡ್ನ ನೆಪವೊಡ್ಡಿ ಅಡ್ಡಿಪಡಿಸುತ್ತಿದ್ದಾರೆ, ಆದರೆ, ರಾಜಕೀಯ ಸಮಾರಂಭ, ಜನಪ್ರತಿನಿಧಿಗಳ ಸಭೆಗೆ ಯಾವುದೇ ಷರತ್ತು, ಕೋವಿಡ್ ನಿಯಮ ಅನ್ವಯವಾಗುವುದಿಲ್ಲವೇ?’ ಎಂದು ಪ್ರಶ್ನಿಸಿದರು.