<p>ಬಂಗಾರಪೇಟೆ: ಇಬ್ಬರ ವ್ಯಕ್ತಿಗಳ ಜಮೀನು ಸರ್ವೆ ವಿಚಾರದಲ್ಲಿ ಚಾಕು ಇರಿತಕ್ಕೆ ಒಳಗಾಗಿ ಹತ್ಯೆಗೀಡಾದ ಇಲ್ಲಿನ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಮಾನವೀಯತೆ ಖಣಿಯಾಗಿದ್ದರು.</p>.<p>ಎರಡೂವರೆ ವರ್ಷದಿಂದ ಇಲ್ಲಿ ದಂಡಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎಲ್ಲರಿಗೂ ಸ್ಪಂದಿಸುತ್ತಿದ್ದರು.<br />ಸೌಮ್ಯ ಸ್ವಭಾವದವರಾಗಿದ್ದ ಅವರು ಜನಸಾಮಾನ್ಯರನ್ನು ಗೌರವದಿಂದ ಮಾತನಾಡಿಸಿ, ಅವರ ಕೆಲಸ ಮಾಡಿಕೊಡುತ್ತಿದ್ದರು.</p>.<p>ಲಾಕ್ಡೌನ್ ಸಂದರ್ಭ ಹಗಲು ರಾತ್ರಿ ಶ್ರಮಿಸಿ ಕೊರೊನ ಸೋಂಕು ತಡೆಯುವಲ್ಲಿ ಅವಿರತ ಪ್ರಯತ್ನ ಮಾಡಿದ್ದರು.<br />ಜಿಲ್ಲಾಧಿಕಾರಿ ಆದೇಶದಂತೆ ಈಚೆಗೆ ತಾಲ್ಲೂಕಿನಲ್ಲಿ ಸರ್ಕಾರಿ ಜಾಗ, ಗುಂಡುತೋಪು, ಕೆರೆಯಂಗಳ, ಸ್ಮಶಾನ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಏನೇ ಸಮಸ್ಯೆ ಇದ್ದರೂ ತಾಳ್ಮೆಯಿಂದ ಬಗೆಹರಿಸುವ ನೈಪುಣ್ಯತೆ<br />ಹೊಂದಿದ್ದರು.</p>.<p class="Subhead">ಒಂದು ಕೋಟಿ ಪರಿಹಾರಕ್ಕೆ ಆಗ್ರಹ: ‘ದಕ್ಷ ಅಧಿಕಾರಿ ಚಂದ್ರಮೌಳೇಶ್ವರ ಅವರಿಗೆ ರಕ್ಷಣೆ ನೀಡುವಲ್ಲಿ ಇಲ್ಲಿ ಪೊಲೀಸ್ ಇಲಾಖೆ ಎಡವಿದೆ. ರಾಜ್ಯ ಸರ್ಕಾರದ ಅಸಮರ್ಥ ಆಡಳಿತದಿಂದಾಗಿ ಪ್ರಾಮಾಣಿಕ ಅಧಿಕಾರಿಯ ಹತ್ಯೆ ನಡೆದಿದೆ. ಇದಕ್ಕೆ ಪೊಲೀಸ್ ಇಲಾಖೆ ಮತ್ತು ಸರ್ಕಾರವೇ ಹೊಣೆ’ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆರೋಪಿಸಿದರು.</p>.<p>ಮೃತ ತಹಶೀಲ್ದಾರ್ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.</p>.<p>***</p>.<p>ಕೊಲೆ ಆರೋಪಿ ನಿವೃತ್ತ ಶಿಕ್ಷಕ</p>.<p>ಬಂಗಾರಪೇಟೆ: ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿದ ವೆಂಕಟಾಚಲಪತಿ ಅವರು ಬೋಡೇನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾಗಿ 5 ವರ್ಷದ ಹಿಂದೆ ನಿವೃತ್ತಿಯಾಗಿದ್ದರು. ಪ್ರಸ್ತುತ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದರು.</p>.<p>ಜಮೀನು ವಿಚಾರದಲ್ಲಿ ಇವರಿಗೂ ಪಕ್ಕದ ಜಮೀನಿನ ಮಾಲೀಕ ರಾಮಮೂರ್ತಿ ಅವರಿಗೆ ಏಳೆಂಟು ವರ್ಷದಿಂದ ಗಲಾಟೆ ನಡೆದಿತ್ತು. ಗುರುವಾರ ಸಂಜೆ ಅದೇ ಜಮೀನಿನ ವಿಚಾರವಾಗಿ ಸರ್ವೆ ಮಾಡಲು ಸ್ಥಳಕ್ಕೆ ತೆರಳಿದ್ದ ತಹಶೀಲ್ದಾರ್ ಅವರನ್ನು ಸಬ್ಇನ್ಸ್ಪೆಕ್ಟರ್ ಸಮ್ಮುಖದಲ್ಲೇ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿ ಬಂಧನ: ಕಾಮಸಮುದ್ರ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಹತ್ಯೆ ಮಾಡಲು ಬಳಸಿದ ಚಾಕು ಅನ್ನು ವಶಕ್ಕೆ ಪಡೆಯಲಾಗಿದೆ.</p>.<p>ಐಜಿಪಿ ಭೇಟಿ: ಐಜಿಪಿ ಸೀಮಂತಕುಮಾರ್ ಸಿಂಗ್ ಅವರು ಗುರುವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಮಹ್ಮದ್ ಸುಜೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ಇಬ್ಬರ ವ್ಯಕ್ತಿಗಳ ಜಮೀನು ಸರ್ವೆ ವಿಚಾರದಲ್ಲಿ ಚಾಕು ಇರಿತಕ್ಕೆ ಒಳಗಾಗಿ ಹತ್ಯೆಗೀಡಾದ ಇಲ್ಲಿನ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಮಾನವೀಯತೆ ಖಣಿಯಾಗಿದ್ದರು.</p>.<p>ಎರಡೂವರೆ ವರ್ಷದಿಂದ ಇಲ್ಲಿ ದಂಡಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎಲ್ಲರಿಗೂ ಸ್ಪಂದಿಸುತ್ತಿದ್ದರು.<br />ಸೌಮ್ಯ ಸ್ವಭಾವದವರಾಗಿದ್ದ ಅವರು ಜನಸಾಮಾನ್ಯರನ್ನು ಗೌರವದಿಂದ ಮಾತನಾಡಿಸಿ, ಅವರ ಕೆಲಸ ಮಾಡಿಕೊಡುತ್ತಿದ್ದರು.</p>.<p>ಲಾಕ್ಡೌನ್ ಸಂದರ್ಭ ಹಗಲು ರಾತ್ರಿ ಶ್ರಮಿಸಿ ಕೊರೊನ ಸೋಂಕು ತಡೆಯುವಲ್ಲಿ ಅವಿರತ ಪ್ರಯತ್ನ ಮಾಡಿದ್ದರು.<br />ಜಿಲ್ಲಾಧಿಕಾರಿ ಆದೇಶದಂತೆ ಈಚೆಗೆ ತಾಲ್ಲೂಕಿನಲ್ಲಿ ಸರ್ಕಾರಿ ಜಾಗ, ಗುಂಡುತೋಪು, ಕೆರೆಯಂಗಳ, ಸ್ಮಶಾನ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಏನೇ ಸಮಸ್ಯೆ ಇದ್ದರೂ ತಾಳ್ಮೆಯಿಂದ ಬಗೆಹರಿಸುವ ನೈಪುಣ್ಯತೆ<br />ಹೊಂದಿದ್ದರು.</p>.<p class="Subhead">ಒಂದು ಕೋಟಿ ಪರಿಹಾರಕ್ಕೆ ಆಗ್ರಹ: ‘ದಕ್ಷ ಅಧಿಕಾರಿ ಚಂದ್ರಮೌಳೇಶ್ವರ ಅವರಿಗೆ ರಕ್ಷಣೆ ನೀಡುವಲ್ಲಿ ಇಲ್ಲಿ ಪೊಲೀಸ್ ಇಲಾಖೆ ಎಡವಿದೆ. ರಾಜ್ಯ ಸರ್ಕಾರದ ಅಸಮರ್ಥ ಆಡಳಿತದಿಂದಾಗಿ ಪ್ರಾಮಾಣಿಕ ಅಧಿಕಾರಿಯ ಹತ್ಯೆ ನಡೆದಿದೆ. ಇದಕ್ಕೆ ಪೊಲೀಸ್ ಇಲಾಖೆ ಮತ್ತು ಸರ್ಕಾರವೇ ಹೊಣೆ’ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆರೋಪಿಸಿದರು.</p>.<p>ಮೃತ ತಹಶೀಲ್ದಾರ್ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.</p>.<p>***</p>.<p>ಕೊಲೆ ಆರೋಪಿ ನಿವೃತ್ತ ಶಿಕ್ಷಕ</p>.<p>ಬಂಗಾರಪೇಟೆ: ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿದ ವೆಂಕಟಾಚಲಪತಿ ಅವರು ಬೋಡೇನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾಗಿ 5 ವರ್ಷದ ಹಿಂದೆ ನಿವೃತ್ತಿಯಾಗಿದ್ದರು. ಪ್ರಸ್ತುತ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದರು.</p>.<p>ಜಮೀನು ವಿಚಾರದಲ್ಲಿ ಇವರಿಗೂ ಪಕ್ಕದ ಜಮೀನಿನ ಮಾಲೀಕ ರಾಮಮೂರ್ತಿ ಅವರಿಗೆ ಏಳೆಂಟು ವರ್ಷದಿಂದ ಗಲಾಟೆ ನಡೆದಿತ್ತು. ಗುರುವಾರ ಸಂಜೆ ಅದೇ ಜಮೀನಿನ ವಿಚಾರವಾಗಿ ಸರ್ವೆ ಮಾಡಲು ಸ್ಥಳಕ್ಕೆ ತೆರಳಿದ್ದ ತಹಶೀಲ್ದಾರ್ ಅವರನ್ನು ಸಬ್ಇನ್ಸ್ಪೆಕ್ಟರ್ ಸಮ್ಮುಖದಲ್ಲೇ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿ ಬಂಧನ: ಕಾಮಸಮುದ್ರ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಹತ್ಯೆ ಮಾಡಲು ಬಳಸಿದ ಚಾಕು ಅನ್ನು ವಶಕ್ಕೆ ಪಡೆಯಲಾಗಿದೆ.</p>.<p>ಐಜಿಪಿ ಭೇಟಿ: ಐಜಿಪಿ ಸೀಮಂತಕುಮಾರ್ ಸಿಂಗ್ ಅವರು ಗುರುವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಮಹ್ಮದ್ ಸುಜೀತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>