ಹೀಗಾಗಿ ತಹಶೀಲ್ದಾರ್ ವಿಲಿಯಮ್ ಅವರು ಮಂಗಳವಾರದ (ಸೆ.21) ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಮತ್ತು ಆಲ್ ಅಮೀನ್ ಕಾಲೇಜಿನ ಪ್ರಾಂಶುಪಾಲರಿಂದ ಒಪ್ಪಿಗೆ ಪತ್ರ ತರುವಂತೆ ಸೂಚಿಸಿ ಅನುಮತಿ ನಿರಾಕರಿಸಿದ್ದರು. ಆದರೆ, ಪ್ರತಿಷ್ಠಾನದವರು ತಹಶೀಲ್ದಾರ್ರ ಅನುಮತಿ ಪಡೆಯದೆ ನಿಯಮಬಾಹಿರವಾಗಿ ಆಲ್ ಅಮೀನ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ಅಲ್ಲದೇ, ಕೋವಿಡ್ ಆತಂಕದ ನಡುವೆಯೂ ನೂರಾರು ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಲಡ್ಡು ವಿತರಿಸಿದ್ದಾರೆ.