<p><strong>ಕೋಲಾರ:</strong> ‘ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಸಿ.ಸತ್ಯಭಾಮ ತಿಳಿಸಿದರು.</p>.<p>ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆ ಅನುಮೋದನೆ ಸಂಬಂಧ ಇಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ ಎಂಬುದನ್ನು ಪರಿಶೀಲಿಸಿ ಆ ಗ್ರಾಮಗಳಲ್ಲಿ ಪ್ರಾಮಾಣಿಕವಾಗಿ ಅನುದಾನ ಬಳಸಿ ನೀರು ಪೂರೈಸಬೇಕು’ ಎಂದು ಸೂಚಿಸಿದರು.</p>.<p>‘ಜನವಸತಿ ಪ್ರದೇಶಗಳು ಹೆಚ್ಚಾದಂತೆ ಆ ಮಾಹಿತಿಯನ್ನು ಐಎಂಇಎಸ್ನಲ್ಲಿ ಅಡಕ ಮಾಡಬೇಕು. ಇದರಿಂದ ಮುಂದೆ ಆ ಪ್ರದೇಶಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬರುತ್ತದೆ. ನೀರಿನ ಅನುದಾನ ಸದ್ಬಳಕೆ ಆಗಬೇಕು’ ಎಂದು ಹೇಳಿದರು.</p>.<p>‘ಮಾಲೂರು ತಾಲ್ಲೂಕಿನ ಮಾರ್ಕಂಡೇಯ ಡ್ಯಾಂ ಕಾಮಗಾರಿ 2008ರಲ್ಲಿ ಆರಂಭವಾಗಿತ್ತು. ಆದರೆ, ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಿ’ ಎಂದು ಸೂಚನೆ ನೀಡಿದರು.</p>.<p>‘ಮಾರ್ಕಂಡೇಯ ಡ್ಯಾಂನಿಂದ ಮಾಲೂರು ತಾಲ್ಲೂಕಿನ ಟೇಕಲ್, ಬನಹಳ್ಳಿ, ನೂಟವೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 23 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು’ ಎಂದು ಕಾರ್ಯ ನಿರ್ವಾಹಕ ಎಂಜಿನಿಯರ್ ನಾರಾಯಣಸ್ವಾಮಿ ಮಾಹಿತಿ ನೀಡಿದರು.</p>.<p><strong>ದೂರುಗಳಿವೆ: </strong>‘ಅಧಿಕಾರಿಗಳು ಕೊಳವೆ ಬಾವಿ ಕೊರೆಯುವ ಲಾರಿ ಎಲ್ಲಿವರೆಗೆ ಹೋಗಲು ಸಾಧ್ಯವಾಗುತ್ತದೆಯೋ ಅಲ್ಲಿಯೇ ಜಾಗ ಗುರುತಿಸಿ ಕೊಳವೆ ಬಾವಿ ಕೊರೆಸುತ್ತಾರೆ ಎಂದು ದೂರುಗಳಿವೆ. ಅಧಿಕಾರಿಗಳ ಈ ಕ್ರಮ ಸರಿಯಲ್ಲ. ನೀರು ಸಿಗುವ ಜಾಗಕ್ಕೆ ಲಾರಿ ಕರೆದುಕೊಂಡು ಹೋಗಿ ಕೊಳವೆ ಬಾವಿ ಕೊರೆಸುವಂತೆ ಭೂ ವಿಜ್ಞಾನಿಗಳಿಗೆ ಸೂಚನೆ ನೀಡಿ’ ಎಂದು ಹೇಳಿದರು.</p>.<p>ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗರಾಕ್, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಪ್ರಭಾರ) ಸಿ.ಸತ್ಯಭಾಮ ತಿಳಿಸಿದರು.</p>.<p>ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆ ಅನುಮೋದನೆ ಸಂಬಂಧ ಇಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ ಎಂಬುದನ್ನು ಪರಿಶೀಲಿಸಿ ಆ ಗ್ರಾಮಗಳಲ್ಲಿ ಪ್ರಾಮಾಣಿಕವಾಗಿ ಅನುದಾನ ಬಳಸಿ ನೀರು ಪೂರೈಸಬೇಕು’ ಎಂದು ಸೂಚಿಸಿದರು.</p>.<p>‘ಜನವಸತಿ ಪ್ರದೇಶಗಳು ಹೆಚ್ಚಾದಂತೆ ಆ ಮಾಹಿತಿಯನ್ನು ಐಎಂಇಎಸ್ನಲ್ಲಿ ಅಡಕ ಮಾಡಬೇಕು. ಇದರಿಂದ ಮುಂದೆ ಆ ಪ್ರದೇಶಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬರುತ್ತದೆ. ನೀರಿನ ಅನುದಾನ ಸದ್ಬಳಕೆ ಆಗಬೇಕು’ ಎಂದು ಹೇಳಿದರು.</p>.<p>‘ಮಾಲೂರು ತಾಲ್ಲೂಕಿನ ಮಾರ್ಕಂಡೇಯ ಡ್ಯಾಂ ಕಾಮಗಾರಿ 2008ರಲ್ಲಿ ಆರಂಭವಾಗಿತ್ತು. ಆದರೆ, ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸಿ’ ಎಂದು ಸೂಚನೆ ನೀಡಿದರು.</p>.<p>‘ಮಾರ್ಕಂಡೇಯ ಡ್ಯಾಂನಿಂದ ಮಾಲೂರು ತಾಲ್ಲೂಕಿನ ಟೇಕಲ್, ಬನಹಳ್ಳಿ, ನೂಟವೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 23 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು’ ಎಂದು ಕಾರ್ಯ ನಿರ್ವಾಹಕ ಎಂಜಿನಿಯರ್ ನಾರಾಯಣಸ್ವಾಮಿ ಮಾಹಿತಿ ನೀಡಿದರು.</p>.<p><strong>ದೂರುಗಳಿವೆ: </strong>‘ಅಧಿಕಾರಿಗಳು ಕೊಳವೆ ಬಾವಿ ಕೊರೆಯುವ ಲಾರಿ ಎಲ್ಲಿವರೆಗೆ ಹೋಗಲು ಸಾಧ್ಯವಾಗುತ್ತದೆಯೋ ಅಲ್ಲಿಯೇ ಜಾಗ ಗುರುತಿಸಿ ಕೊಳವೆ ಬಾವಿ ಕೊರೆಸುತ್ತಾರೆ ಎಂದು ದೂರುಗಳಿವೆ. ಅಧಿಕಾರಿಗಳ ಈ ಕ್ರಮ ಸರಿಯಲ್ಲ. ನೀರು ಸಿಗುವ ಜಾಗಕ್ಕೆ ಲಾರಿ ಕರೆದುಕೊಂಡು ಹೋಗಿ ಕೊಳವೆ ಬಾವಿ ಕೊರೆಸುವಂತೆ ಭೂ ವಿಜ್ಞಾನಿಗಳಿಗೆ ಸೂಚನೆ ನೀಡಿ’ ಎಂದು ಹೇಳಿದರು.</p>.<p>ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗರಾಕ್, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>