<p><strong>ಕೋಲಾರ:</strong> ‘ಜೀವನದಲ್ಲಿ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದದ್ದು. ಗುರುವಾಗುವ ಗುರಿಯೊಂದಿಗೆ ಸಾಗುತ್ತಿರುವವರು ಉತ್ತಮ ಶಿಕ್ಷಕರಾಗಿ ದೇಶಕ್ಕೆ ಸಂಸ್ಕಾರ, ಸನ್ನಡತೆಯ ಮಾನವ ಸಂಪನ್ಮೂಲ ಕೊಡುಗೆಯಾಗಿ ನೀಡಿ’ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬಿ.ಇಡಿ ಬೋಧನಾ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳಿಗೆ ಅರಾಭಿಕೊತ್ತನೂರು ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರತಿ ಸಾಧಕನ ಹಿಂದೆ ಶಿಕ್ಷಕರು ಇರುತ್ತಾರೆ. ಗುರುವಿನ ಮಾರ್ಗದರ್ಶನವಿಲ್ಲದೆ ಯಾವುದೇ ಸಾಧನೆ ಅಸಾಧ್ಯ’ ಎಂದರು.</p>.<p>‘ಗುರುವಾಗುವ ಕಾತರತೆಯಿಂದ ಬೋಧನಾ ತರಬೇತಿ ಮುಗಿಸಿ ಹೋಗುತ್ತಿರುವವರು ಉತ್ತಮ ಶಿಕ್ಷಕರಾಗಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಶ್ರೇಯೋಭಿವೃದ್ಧಿಗೆ ಸಾಧನೆ ಧಾರೆಯೆರೆಯಿರಿ. ಶಾಲೆಯ ಪರಿಸರ ಹಸಿರಾಗಿಸಲು ಪ್ರಯತ್ನ ಮಾಡಿ’ ಎಂದು ತಿಳಿಸಿದರು.</p>.<p>‘ಪೋಷಕರು ತಮ್ಮ ಮಕ್ಕಳು ಎಂಜಿನಿಯರ್, ವೈದ್ಯರಾಗಬೇಕೆಂದು ಬಯಸುತ್ತಾರೆ. ಮಕ್ಕಳು ಶಿಕ್ಷಕರಾಗಬೇಕೆಂದು ಬಯಸುವ ಪೋಷಕರ ಸಂಖ್ಯೆ ಕಡಿಮೆ. ಆದರೆ, ಅದೇ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಕರ ಬೇಕೆಂದು ಹುಡುಕಾಡುತ್ತಾರೆ’ ಎಂದು ನಿವೃತ್ತ ಶಿಕ್ಷಕ ಎಸ್.ಅನಂತಪದ್ಮನಾಭ್ ಹೇಳಿದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿಗಳಯ ಅನಿಸಿಕೆ ಹಂಚಿಕೊಂಡರು. ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಭವಾನಿ, ಶ್ವೇತಾ, ಫರೀದಾ, ಆರ್.ವೆಂಕಟರೆಡ್ಡಿ, ಶ್ರೀನಿವಾಸಲು, ಡಿ.ಚಂದ್ರಶೇಖರ್, ವಸಂತಮ್ಮ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಜೀವನದಲ್ಲಿ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದದ್ದು. ಗುರುವಾಗುವ ಗುರಿಯೊಂದಿಗೆ ಸಾಗುತ್ತಿರುವವರು ಉತ್ತಮ ಶಿಕ್ಷಕರಾಗಿ ದೇಶಕ್ಕೆ ಸಂಸ್ಕಾರ, ಸನ್ನಡತೆಯ ಮಾನವ ಸಂಪನ್ಮೂಲ ಕೊಡುಗೆಯಾಗಿ ನೀಡಿ’ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬಿ.ಇಡಿ ಬೋಧನಾ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳಿಗೆ ಅರಾಭಿಕೊತ್ತನೂರು ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಪ್ರತಿ ಸಾಧಕನ ಹಿಂದೆ ಶಿಕ್ಷಕರು ಇರುತ್ತಾರೆ. ಗುರುವಿನ ಮಾರ್ಗದರ್ಶನವಿಲ್ಲದೆ ಯಾವುದೇ ಸಾಧನೆ ಅಸಾಧ್ಯ’ ಎಂದರು.</p>.<p>‘ಗುರುವಾಗುವ ಕಾತರತೆಯಿಂದ ಬೋಧನಾ ತರಬೇತಿ ಮುಗಿಸಿ ಹೋಗುತ್ತಿರುವವರು ಉತ್ತಮ ಶಿಕ್ಷಕರಾಗಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಶ್ರೇಯೋಭಿವೃದ್ಧಿಗೆ ಸಾಧನೆ ಧಾರೆಯೆರೆಯಿರಿ. ಶಾಲೆಯ ಪರಿಸರ ಹಸಿರಾಗಿಸಲು ಪ್ರಯತ್ನ ಮಾಡಿ’ ಎಂದು ತಿಳಿಸಿದರು.</p>.<p>‘ಪೋಷಕರು ತಮ್ಮ ಮಕ್ಕಳು ಎಂಜಿನಿಯರ್, ವೈದ್ಯರಾಗಬೇಕೆಂದು ಬಯಸುತ್ತಾರೆ. ಮಕ್ಕಳು ಶಿಕ್ಷಕರಾಗಬೇಕೆಂದು ಬಯಸುವ ಪೋಷಕರ ಸಂಖ್ಯೆ ಕಡಿಮೆ. ಆದರೆ, ಅದೇ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಕರ ಬೇಕೆಂದು ಹುಡುಕಾಡುತ್ತಾರೆ’ ಎಂದು ನಿವೃತ್ತ ಶಿಕ್ಷಕ ಎಸ್.ಅನಂತಪದ್ಮನಾಭ್ ಹೇಳಿದರು.</p>.<p>ಬಿ.ಇಡಿ ಪ್ರಶಿಕ್ಷಣಾರ್ಥಿಗಳಯ ಅನಿಸಿಕೆ ಹಂಚಿಕೊಂಡರು. ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಭವಾನಿ, ಶ್ವೇತಾ, ಫರೀದಾ, ಆರ್.ವೆಂಕಟರೆಡ್ಡಿ, ಶ್ರೀನಿವಾಸಲು, ಡಿ.ಚಂದ್ರಶೇಖರ್, ವಸಂತಮ್ಮ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>