<p><strong>ಚಿಂತಾಮಣಿ</strong>: ಕೊರೊನಾ ಸೋಂಕು ಹರಡುತ್ತಿರುವ ಕಾರಣ ಶಾಲೆಗಳು ಆರಂಭವಾಗಿಲ್ಲ. ಆದರೆ ತಾಲ್ಲೂಕಿನ ಕೆ.ರಾಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸ್ವಯಂಪ್ರೇರಣೆಯಿಂದ ಗ್ರಾಮಗಳಿಗೆ ತೆರಳಿ ಪಾಠ ಮಾಡುತ್ತಿದ್ದಾರೆ.</p>.<p>ಗ್ರಾಮಗಳಲ್ಲಿನ ಮರಗಳ ಕೆಳಗೆ, ದೇವಸ್ಥಾನ, ವಠಾರ, ಚಾವಡಿ, ಸಮುದಾಯ ಭವನಗಳನ್ನು ಶಾಲೆಗಳಾಗಿ ಪರಿವರ್ತಿಸಿದ್ದಾರೆ. ಈ ಶಾಲೆಯಲ್ಲಿ 10 ಜನ ಶಿಕ್ಷಕರಿದ್ದು, ಇಬ್ಬರಂತೆ ಐದು ಗುಂಪುಗಳನ್ನು ರಚಿಸಿಕೊಂಡಿದ್ದಾರೆ. ಶಾಲೆ ವ್ಯಾಪ್ತಿಯ ಹಳ್ಳಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ, 5 ನಿಗದಿತ ಸ್ಥಳಗಳನ್ನು ಗುರುತಿಸಿಕೊಂಡಿದ್ದಾರೆ. ಆ ಹಳ್ಳಿಗಳ ವಿದ್ಯಾರ್ಥಿಗಳನ್ನು ನಿಗದಿತ ಸ್ಥಳಕ್ಕೆ ಕರೆಸಿಕೊಂಡು 3 ದಿನಕೊಮ್ಮೆ ಶಿಕ್ಷಕರು ತೆರಳಿ ಪಾಠ ಮಾಡುತ್ತಾರೆ. ನಂತರದ 3 ದಿನಗಳಿಗೆ ಮನೆಪಾಠ ನೀಡಲಾಗುತ್ತದೆ. ಶಿಕ್ಷಕರ ತಂಡ ಪಾಳಿ ಮೂಲಕ ತೆರಳಿ ಎಲ್ಲ ವಿಷಯಗಳನ್ನು ಬೋಧಿಸುತ್ತಿದ್ದಾರೆ.</p>.<p>ದೀರ್ಘ ಕಾಲದಿಂದ ಶಾಲೆಗೆ ರಜೆ ನೀಡಿದ್ದರಿಂದ ಬೇಸರಗೊಂಡಿದ್ದ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಕಲಿಕೆಯಲ್ಲಿ ನಿರತರಾಗಿದ್ದಾರೆ. ಗ್ರಾಮಸ್ಥರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ ಎನ್ನುತ್ತಾರೆ ಶಿಕ್ಷಕರು.</p>.<p>‘ಎನ್.ಕೊತ್ತೂರು, ಕೋಟಗಲ್, ಕೆ.ರಾಗುಟ್ಟಹಳ್ಳಿ, ಬಂಡಮಿಂದಹಳ್ಳಿ, ಕುರುಮಾರ್ಲಹಳ್ಳಿಗಳಿಗೆ ಶಿಕ್ಷಕರ ತಂಡ ತೆರಳಿ ಪಾಠ ಮಾಡುತ್ತಿದೆ. ಶಿಕ್ಷಕರ ಒಂದೊಂದು ತಂಡ ಒಂದೊಂದು ಗ್ರಾಮಕ್ಕೆ ತೆರಳಿ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ’ ಎಂದು ಮುಖ್ಯ ಶಿಕ್ಷಕ ಸುಬ್ಬಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಕೊರೊನಾ ಸೋಂಕು ಹರಡುತ್ತಿರುವ ಕಾರಣ ಶಾಲೆಗಳು ಆರಂಭವಾಗಿಲ್ಲ. ಆದರೆ ತಾಲ್ಲೂಕಿನ ಕೆ.ರಾಗುಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಸ್ವಯಂಪ್ರೇರಣೆಯಿಂದ ಗ್ರಾಮಗಳಿಗೆ ತೆರಳಿ ಪಾಠ ಮಾಡುತ್ತಿದ್ದಾರೆ.</p>.<p>ಗ್ರಾಮಗಳಲ್ಲಿನ ಮರಗಳ ಕೆಳಗೆ, ದೇವಸ್ಥಾನ, ವಠಾರ, ಚಾವಡಿ, ಸಮುದಾಯ ಭವನಗಳನ್ನು ಶಾಲೆಗಳಾಗಿ ಪರಿವರ್ತಿಸಿದ್ದಾರೆ. ಈ ಶಾಲೆಯಲ್ಲಿ 10 ಜನ ಶಿಕ್ಷಕರಿದ್ದು, ಇಬ್ಬರಂತೆ ಐದು ಗುಂಪುಗಳನ್ನು ರಚಿಸಿಕೊಂಡಿದ್ದಾರೆ. ಶಾಲೆ ವ್ಯಾಪ್ತಿಯ ಹಳ್ಳಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ, 5 ನಿಗದಿತ ಸ್ಥಳಗಳನ್ನು ಗುರುತಿಸಿಕೊಂಡಿದ್ದಾರೆ. ಆ ಹಳ್ಳಿಗಳ ವಿದ್ಯಾರ್ಥಿಗಳನ್ನು ನಿಗದಿತ ಸ್ಥಳಕ್ಕೆ ಕರೆಸಿಕೊಂಡು 3 ದಿನಕೊಮ್ಮೆ ಶಿಕ್ಷಕರು ತೆರಳಿ ಪಾಠ ಮಾಡುತ್ತಾರೆ. ನಂತರದ 3 ದಿನಗಳಿಗೆ ಮನೆಪಾಠ ನೀಡಲಾಗುತ್ತದೆ. ಶಿಕ್ಷಕರ ತಂಡ ಪಾಳಿ ಮೂಲಕ ತೆರಳಿ ಎಲ್ಲ ವಿಷಯಗಳನ್ನು ಬೋಧಿಸುತ್ತಿದ್ದಾರೆ.</p>.<p>ದೀರ್ಘ ಕಾಲದಿಂದ ಶಾಲೆಗೆ ರಜೆ ನೀಡಿದ್ದರಿಂದ ಬೇಸರಗೊಂಡಿದ್ದ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಕಲಿಕೆಯಲ್ಲಿ ನಿರತರಾಗಿದ್ದಾರೆ. ಗ್ರಾಮಸ್ಥರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ ಎನ್ನುತ್ತಾರೆ ಶಿಕ್ಷಕರು.</p>.<p>‘ಎನ್.ಕೊತ್ತೂರು, ಕೋಟಗಲ್, ಕೆ.ರಾಗುಟ್ಟಹಳ್ಳಿ, ಬಂಡಮಿಂದಹಳ್ಳಿ, ಕುರುಮಾರ್ಲಹಳ್ಳಿಗಳಿಗೆ ಶಿಕ್ಷಕರ ತಂಡ ತೆರಳಿ ಪಾಠ ಮಾಡುತ್ತಿದೆ. ಶಿಕ್ಷಕರ ಒಂದೊಂದು ತಂಡ ಒಂದೊಂದು ಗ್ರಾಮಕ್ಕೆ ತೆರಳಿ ಶೈಕ್ಷಣಿಕ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ’ ಎಂದು ಮುಖ್ಯ ಶಿಕ್ಷಕ ಸುಬ್ಬಾರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>