ಪಟ್ಟಣದ ಕೋರ್ಟ್ ವಸತಿ ಗೃಹಗಳ ಪಕ್ಕದಲ್ಲೇ ಇರುವ 20 ಗುಂಟೆ ಜಮೀನು 1975-76ರಲ್ಲಿ ಸರ್ಕಾರದಿಂದ ಮಂಜೂರಾಗಿದೆ. ಶಿಕ್ಷಕರ ಸಂಘಗಳಲ್ಲಿನಹೊಂದಾಣಿಕೆ ಕೊರತೆ, ಅಧಿಕಾರಿಗಳ ಅಸಡ್ಡೆ , ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆ ಫಲವೆನ್ನುವಂತೆ ಶಿಕ್ಷಕರ ಭವನ ಕಾಮಗಾರಿ 2016ರವರೆಗೂ ಆರಂಭವಾಗಿರಲಿಲ್ಲ. 2017ರಲ್ಲಿ ಅಂದಿನ ಜೆಡಿಎಸ್ ಶಾಸಕ ಕೆ.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿ, ಶಿಕ್ಷಕರ ಸಂಘದ ಅಧ್ಯಕ್ಷರುಗಳನ್ನು ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಯಿತು.