<p><strong>ಕೋಲಾರ:</strong> ‘ಶಿಕ್ಷಕರು ಮನಸ್ಥಿತಿಯನ್ನು ಬದಲಾಯಿಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಚ್.ನಾಗರಾಜಗೌಡ ತಿಳಿಸಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟ ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿ, ‘ಸ್ವರ್ಧಾತ್ಮಕತೆಗೆ ತಕ್ಕ ಬೋಧನಾ ಕ್ರಮ ಜಾರಿಯಾಗಬೇಕು’ ಎಂದರು.</p>.<p>‘ವಿಜ್ಞಾನ ಹಬ್ಬವು ಮಕ್ಕಳ ಜ್ಞಾನಾಭಿವೃದ್ದಿಗೆ ಸಹಕಾರಿಯಾಗುತ್ತದೆ. ದೈನಂದಿನ ಬದುಕಿನ ಪ್ರತಿ ಹಂತದಲ್ಲೂ ವಿಜ್ಞಾನ ಅಡಗಿದೆ. ಮಕ್ಕಳ ಆಲೋಚನೆ ಬದಲಿಸಲು ನಿಮ್ಮ ಬೋಧನೆ ತಾತ್ವಿಕತೆಗೆ ಸೀಮಿತವಾಗದೇ ಪ್ರಾಯೋಗಿಕ ಅಧ್ಯಯನಕ್ಕೆ ಒತ್ತು ನೀಡುವಂತಿರಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರತಿ ಮಗುವಿನಲ್ಲೂ ಪ್ರತಿಭೆ ಸುಪ್ತವಾಗಿರುತ್ತದೆ. ಅವರಲ್ಲಿ ಪ್ರಶ್ನೆ ಕೇಳುವ ಧೈರ್ಯ ತುಂಬಬೇಕು. ಕಲಿಕೆಯಲ್ಲಿ ಗೊಂದಲಗಳಿದ್ದರೂ, ಪ್ರಶ್ನೆ ಕೇಳಲು ಭಯದ ವಾತಾವರಣವಿದ್ದರೆ ಮಕ್ಕಳ ಕಲಿಕೆ ಬಲಗೊಳ್ಳುವುದಿಲ್ಲ’ ಎಂದು ತಿಳಿಸಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಮಾತನಾಡಿ, ‘ವಿನ್ಞಾನ ನಮ್ಮನ್ನು ಸುಜ್ಞಾನದತ್ತ ಸಾಗುವಂತೆ ಮಾಡುತ್ತದೆ. ವಿಜ್ಞಾನವು ಮಕ್ಕಳಿಗೆ ಯಶಸ್ಸಿನ ದಾರಿ ತೋರಿಸುತ್ತದೆ’ ಎಂದರು.</p>.<p>‘ಮಕ್ಕಳಲ್ಲಿ ವೈಜ್ಞಾನಿಕತೆ ಹೆಚ್ಚಿಸುವುದೆ ವಿಜ್ಞಾನ ಹಬ್ಬದ ಉದ್ದೇಶ. ಸೃಜನಾತ್ಮಕತೆ ಹೊರ ಸೆಳೆಯುವ ಕೆಲಸ ಶಿಕ್ಷಕರು ಮಾಡಬೇಕು. ಪ್ರಶ್ನೆ ಕೇಳುವ ಮನೋಭಾವ ಬೆಳಿಸಿಕೊಳ್ಳಬೇಕು. ಹೊಸ ಹೊಸ ಆವಿಷ್ಕಾರಗಳನ್ನು ಮಾಡುವ ಶಕ್ತಿ, ಪ್ರೇರಣೆ ಬೆಳೆಸಬೇಕು’ ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್ ಮಾತನಾಡಿ, ‘ವಿಜ್ಞಾನ, ಗಣಿತ ಕಷ್ಟವೆಂಬ ಭಾವನೆ ಹೋಗಲಾಡಿಸಲು ಕಲಿಕಾ ವಿಧಾನದಲ್ಲಿ ಬದಲಾವಣೆ ತರಬೇಕಿದೆ’ ಎಂದು ತಿಳಿಸಿದರು.</p>.<p>ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎಸ್ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಸಚ್ಚಿದಾನಂದಮೂರ್ತಿ, ಭವಾನಿ, ಸುಗುಣಾ, ಲೀಲಾ, ಫರೀದಾ, ಶ್ರೀನಿವಾಸಲು, ಸುನೀತಾ, ಚಂದ್ರಶೇಖರ್, ವೆಂಕಟಸ್ವಾಮಿರೆಡ್ಡಿ, ಶ್ರೀನಿವಾಸ್, ಟಿ.ವೆಂಕಟರಮಣಪ್ಪ, ಸುಮ, ಭಾರತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಶಿಕ್ಷಕರು ಮನಸ್ಥಿತಿಯನ್ನು ಬದಲಾಯಿಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಚ್.ನಾಗರಾಜಗೌಡ ತಿಳಿಸಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟ ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿ, ‘ಸ್ವರ್ಧಾತ್ಮಕತೆಗೆ ತಕ್ಕ ಬೋಧನಾ ಕ್ರಮ ಜಾರಿಯಾಗಬೇಕು’ ಎಂದರು.</p>.<p>‘ವಿಜ್ಞಾನ ಹಬ್ಬವು ಮಕ್ಕಳ ಜ್ಞಾನಾಭಿವೃದ್ದಿಗೆ ಸಹಕಾರಿಯಾಗುತ್ತದೆ. ದೈನಂದಿನ ಬದುಕಿನ ಪ್ರತಿ ಹಂತದಲ್ಲೂ ವಿಜ್ಞಾನ ಅಡಗಿದೆ. ಮಕ್ಕಳ ಆಲೋಚನೆ ಬದಲಿಸಲು ನಿಮ್ಮ ಬೋಧನೆ ತಾತ್ವಿಕತೆಗೆ ಸೀಮಿತವಾಗದೇ ಪ್ರಾಯೋಗಿಕ ಅಧ್ಯಯನಕ್ಕೆ ಒತ್ತು ನೀಡುವಂತಿರಬೇಕು’ ಎಂದು ಸಲಹೆ ನೀಡಿದರು.</p>.<p>‘ಪ್ರತಿ ಮಗುವಿನಲ್ಲೂ ಪ್ರತಿಭೆ ಸುಪ್ತವಾಗಿರುತ್ತದೆ. ಅವರಲ್ಲಿ ಪ್ರಶ್ನೆ ಕೇಳುವ ಧೈರ್ಯ ತುಂಬಬೇಕು. ಕಲಿಕೆಯಲ್ಲಿ ಗೊಂದಲಗಳಿದ್ದರೂ, ಪ್ರಶ್ನೆ ಕೇಳಲು ಭಯದ ವಾತಾವರಣವಿದ್ದರೆ ಮಕ್ಕಳ ಕಲಿಕೆ ಬಲಗೊಳ್ಳುವುದಿಲ್ಲ’ ಎಂದು ತಿಳಿಸಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಮಾತನಾಡಿ, ‘ವಿನ್ಞಾನ ನಮ್ಮನ್ನು ಸುಜ್ಞಾನದತ್ತ ಸಾಗುವಂತೆ ಮಾಡುತ್ತದೆ. ವಿಜ್ಞಾನವು ಮಕ್ಕಳಿಗೆ ಯಶಸ್ಸಿನ ದಾರಿ ತೋರಿಸುತ್ತದೆ’ ಎಂದರು.</p>.<p>‘ಮಕ್ಕಳಲ್ಲಿ ವೈಜ್ಞಾನಿಕತೆ ಹೆಚ್ಚಿಸುವುದೆ ವಿಜ್ಞಾನ ಹಬ್ಬದ ಉದ್ದೇಶ. ಸೃಜನಾತ್ಮಕತೆ ಹೊರ ಸೆಳೆಯುವ ಕೆಲಸ ಶಿಕ್ಷಕರು ಮಾಡಬೇಕು. ಪ್ರಶ್ನೆ ಕೇಳುವ ಮನೋಭಾವ ಬೆಳಿಸಿಕೊಳ್ಳಬೇಕು. ಹೊಸ ಹೊಸ ಆವಿಷ್ಕಾರಗಳನ್ನು ಮಾಡುವ ಶಕ್ತಿ, ಪ್ರೇರಣೆ ಬೆಳೆಸಬೇಕು’ ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್ ಮಾತನಾಡಿ, ‘ವಿಜ್ಞಾನ, ಗಣಿತ ಕಷ್ಟವೆಂಬ ಭಾವನೆ ಹೋಗಲಾಡಿಸಲು ಕಲಿಕಾ ವಿಧಾನದಲ್ಲಿ ಬದಲಾವಣೆ ತರಬೇಕಿದೆ’ ಎಂದು ತಿಳಿಸಿದರು.</p>.<p>ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎಸ್ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಸಚ್ಚಿದಾನಂದಮೂರ್ತಿ, ಭವಾನಿ, ಸುಗುಣಾ, ಲೀಲಾ, ಫರೀದಾ, ಶ್ರೀನಿವಾಸಲು, ಸುನೀತಾ, ಚಂದ್ರಶೇಖರ್, ವೆಂಕಟಸ್ವಾಮಿರೆಡ್ಡಿ, ಶ್ರೀನಿವಾಸ್, ಟಿ.ವೆಂಕಟರಮಣಪ್ಪ, ಸುಮ, ಭಾರತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>