‘ಜಿಲ್ಲಾಧಿಕಾರಿ ಆದೇಶದಂತೆ ಆಹಾರ ಪದಾರ್ಥಗಳು, ಹಾಲು, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 9 ಗಂಟೆವರೆಗೆ ಕಾಲಾವಕಾಶ ನೀಡಲಾಗಿದೆ. ಆದರೆ, ಜನರು ಈ ಅವಧಿಯ ನಂತರವೂ ರಸ್ತೆಗೆ ಬರುತ್ತಿದ್ದಾರೆ. ಮನೆಯಿಂದ ಹೊರಗೆ ಬರದಂತೆ ಪೊಲೀಸರು ಮನವಿ ಮಾಡಿದರೂ ಜನರು ಅವರ ಮಾತು ಕೇಳುತ್ತಿಲ್ಲ’ ಎಂದು ಕಿಡಿಕಾರಿದರು.