ಭಕ್ತರು ದೇವಾಲಯಗಳಲ್ಲಿ ತೀರ್ಥ ಪ್ರಸಾದವಿಲ್ಲದೆ ಮಂಗಳಾರತಿ, ಕುಂಕುಮ, ವಿಭೂತಿ ಪ್ರಸಾದ ಪಡೆದು ಕೃತಾರ್ಥರಾದರು. ನಗರದ ಕೋಲಾರಮ್ಮ, ಸೋಮೇಶ್ವರ, ಕೆಇಬಿ ಗಣಪತಿ ದೇವಾಲಯ, ನಂಜುಂಡೇಶ್ವರ, ವೆಂಕಟರಮಣಸ್ವಾಮಿ, ಪಂಚಮುಖಿ ಹನುಮ, ಶನೇಶ್ವರಸ್ವಾಮಿ, ಕಿಲಾರಿಪೇಟೆಯ ವೇಣುಗೋಪಾಲಸ್ವಾಮಿ, ಸತ್ಯಮ್ಮದೇವಿ, ಕೊಂಡರಾಜನಹಳ್ಳಿಯ ಆಂಜನೇಯ, ಸೀತಿ ಬೆಟ್ಟದ ಶ್ರೀಪತೇಶ್ವರಸ್ವಾಮಿ ದೇವಾಲಯ ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಪ್ರತಿನಿತ್ಯದಂತೆ ಪೂಜಾ ಕೈಂಕರ್ಯ ನೆರವೇರಿತು.