<p><strong>ಕೋಲಾರ:</strong> ಮೀಸಲಾತಿ ಪರಿಪಾಲನೆ ಮಾಡದೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಗ್ಗೂಡಿಸಿ ಪ್ಯಾಕೇಜ್ ಮಾಡಿ ಟೆಂಡರ್ ಮಾಡಿದ್ದರಿಂದ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಕೂಡಲೇ ಪ್ಯಾಕೇಜ್ ಟೆಂಡರ್ ಕೈಬಿಡಬೇಕು ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಮಾರ್ಜೇನಹಳ್ಳಿ ವಿ.ಬಾಬು ಒತ್ತಾಯಿಸಿದರು</p>.<p>ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಸೇರಿದಂತೆ ಅಹಿಂದ ಮತದಾರರು ಕಾರಣವಾಗಿದ್ದಾರೆ. ಆದರೆ, ಗುತ್ತಿಗೆ ಮೀಸಲಾತಿ ಪರಿಪಾಲನೆ ಮಾಡುತ್ತಿಲ್ಲ. ಸರ್ಕಾರದ ಆದೇಶವನ್ನು ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಾರಿ ಮಾಡದೆ ವಂಚನೆ ಮಾಡಿದ್ದಾರೆ ಎಂದು ದೂರಿದರು.</p>.<p>ಜಿಲ್ಲೆಯಲ್ಲಿ 5 ರಿಂದ 6 ಕಾಮಗಾರಿಗಳನ್ನು ಒಂದು ಪ್ಯಾಕೇಜ್ ರೀತಿಯಲ್ಲಿ ಕಾಮಗಾರಿ ಮಾಡಿ ಅನುದಾನ ನೀಡಲು ಅಧಿಕಾರಿಗಳು ಟೆಂಡರ್ ಕರೆದಿದ್ದಾರೆ. ಬೇರೆ ಬೇರೆ ಜಿಲ್ಲೆಗಳ ಪ್ರಭಾವಿಗಳಿಗೆ ಟೆಂಡರ್ ನೀಡಿ ಜಿಲ್ಲೆಯ ಗುತ್ತಿಗೆದಾರರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ₹ 20 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ. ಸರ್ಕಾರದ ಆದೇಶದಂತೆ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಶೇ 24.01 ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ 19 ಮೀಸಲಾತಿಯನ್ನು ಜಾರಿ ಮಾಡಬೇಕಾಗಿದೆ. ಆದರೆ, ಸುಮಾರು ನಾಲ್ಕೈದು ಪ್ಯಾಕೇಜ್ ಟೆಂಡರ್ ಕರೆದು ನಮ್ಮಂತಹ ಸಾಮಾನ್ಯ ಗುತ್ತಿಗೆದಾರರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ದಲಿತರು ಹಾಗೂ ಹಿಂದುಳಿದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ, ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ನಮ್ಮಂತಹ ಗುತ್ತಿಗೆದಾರರನ್ನು ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಇದು ಮರಣ ಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಸಾಕಷ್ಟು ಬಾರಿ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಪರವಾನಗಿ ವಾಪಸ್ ಮಾಡಿ ಮೀಸಲಾತಿ ಪತ್ರ ಹರಿದು ಹಾಕಿದ್ದರೂ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು. ಇಲ್ಲದೇ ಹೋದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸದ್ಯದಲ್ಲೇ ಪ್ರತಿ ಶಾಸಕರಿಗೆ ₹ 50 ಕೋಟಿ ವಿಶೇಷ ಅನುದಾನ ಬರಲಿದೆ. ಅದರಲ್ಲಿ ಕನಿಷ್ಠ ₹ 10 ಕೋಟಿಯನ್ನಾದರೂ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಜಯರಾಮ್, ಕಾರ್ಯದರ್ಶಿ ನರೇಶ್ ಕುಮಾರ್, ಮಾಲೂರು ತಾಲ್ಲೂಕು ಅಧ್ಯಕ್ಷ ಅಂಬರೀಷ್, ಮುಖಂಡರಾದ ಚಲಪತಿ, ಮಂಜುನಾಥ್, ಶಿವಣ್ಣ, ಸಾಗರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮೀಸಲಾತಿ ಪರಿಪಾಲನೆ ಮಾಡದೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಗ್ಗೂಡಿಸಿ ಪ್ಯಾಕೇಜ್ ಮಾಡಿ ಟೆಂಡರ್ ಮಾಡಿದ್ದರಿಂದ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಅನ್ಯಾಯವಾಗಿದೆ. ಕೂಡಲೇ ಪ್ಯಾಕೇಜ್ ಟೆಂಡರ್ ಕೈಬಿಡಬೇಕು ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಮಾರ್ಜೇನಹಳ್ಳಿ ವಿ.ಬಾಬು ಒತ್ತಾಯಿಸಿದರು</p>.<p>ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳು ಸೇರಿದಂತೆ ಅಹಿಂದ ಮತದಾರರು ಕಾರಣವಾಗಿದ್ದಾರೆ. ಆದರೆ, ಗುತ್ತಿಗೆ ಮೀಸಲಾತಿ ಪರಿಪಾಲನೆ ಮಾಡುತ್ತಿಲ್ಲ. ಸರ್ಕಾರದ ಆದೇಶವನ್ನು ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಾರಿ ಮಾಡದೆ ವಂಚನೆ ಮಾಡಿದ್ದಾರೆ ಎಂದು ದೂರಿದರು.</p>.<p>ಜಿಲ್ಲೆಯಲ್ಲಿ 5 ರಿಂದ 6 ಕಾಮಗಾರಿಗಳನ್ನು ಒಂದು ಪ್ಯಾಕೇಜ್ ರೀತಿಯಲ್ಲಿ ಕಾಮಗಾರಿ ಮಾಡಿ ಅನುದಾನ ನೀಡಲು ಅಧಿಕಾರಿಗಳು ಟೆಂಡರ್ ಕರೆದಿದ್ದಾರೆ. ಬೇರೆ ಬೇರೆ ಜಿಲ್ಲೆಗಳ ಪ್ರಭಾವಿಗಳಿಗೆ ಟೆಂಡರ್ ನೀಡಿ ಜಿಲ್ಲೆಯ ಗುತ್ತಿಗೆದಾರರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.</p>.<p>ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ₹ 20 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ. ಸರ್ಕಾರದ ಆದೇಶದಂತೆ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಶೇ 24.01 ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ 19 ಮೀಸಲಾತಿಯನ್ನು ಜಾರಿ ಮಾಡಬೇಕಾಗಿದೆ. ಆದರೆ, ಸುಮಾರು ನಾಲ್ಕೈದು ಪ್ಯಾಕೇಜ್ ಟೆಂಡರ್ ಕರೆದು ನಮ್ಮಂತಹ ಸಾಮಾನ್ಯ ಗುತ್ತಿಗೆದಾರರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ದಲಿತರು ಹಾಗೂ ಹಿಂದುಳಿದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ, ಅಧಿಕಾರಿಗಳು ಜನಪ್ರತಿನಿಧಿಗಳ ಕೈಗೊಂಬೆಯಾಗಿ ನಮ್ಮಂತಹ ಗುತ್ತಿಗೆದಾರರನ್ನು ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಇದು ಮರಣ ಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಸಾಕಷ್ಟು ಬಾರಿ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಪರವಾನಗಿ ವಾಪಸ್ ಮಾಡಿ ಮೀಸಲಾತಿ ಪತ್ರ ಹರಿದು ಹಾಕಿದ್ದರೂ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು. ಇಲ್ಲದೇ ಹೋದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಸದ್ಯದಲ್ಲೇ ಪ್ರತಿ ಶಾಸಕರಿಗೆ ₹ 50 ಕೋಟಿ ವಿಶೇಷ ಅನುದಾನ ಬರಲಿದೆ. ಅದರಲ್ಲಿ ಕನಿಷ್ಠ ₹ 10 ಕೋಟಿಯನ್ನಾದರೂ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಜಯರಾಮ್, ಕಾರ್ಯದರ್ಶಿ ನರೇಶ್ ಕುಮಾರ್, ಮಾಲೂರು ತಾಲ್ಲೂಕು ಅಧ್ಯಕ್ಷ ಅಂಬರೀಷ್, ಮುಖಂಡರಾದ ಚಲಪತಿ, ಮಂಜುನಾಥ್, ಶಿವಣ್ಣ, ಸಾಗರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>