<p><strong>ಕೋಲಾರ:</strong> ಶಿಕ್ಷಕರಾಗಿ ನೇಮಕಾತಿ ಹೊಂದಲು ಕನಿಷ್ಠ ಅರ್ಹತೆಯಾಗಿ ಪರಿಗಣಿಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಭಾನುವಾರ ನಗರದ 22 ಕೇಂದ್ರಗಳಲ್ಲಿ ನಡೆದಿದ್ದು, ಎರಡು ಅವಧಿಯ ಪರೀಕ್ಷೆ ಸೇರಿ ಒಟ್ಟು 442 ಅಭ್ಯರ್ಥಿಗಳು ಗೈರಾಗಿದ್ದರು.</p>.<p>ಬೆಳಿಗ್ಗೆ ನಡೆದ ಮೊದಲ ಅಧಿವೇಶನದ ಪರೀಕ್ಷೆಯ ಪತ್ರಿಕೆ-1ಕ್ಕೆ ನೋಂದಾಯಿಸಿದ್ದ 2,016 ಮಂದಿ ಪೈಕಿ 1,869 ಅಭ್ಯರ್ಥಿ ಹಾಜರಾಗಿ 147 ಮಂದಿ ಗೈರಾಗಿದ್ದರು. ಶೇ 94.42 ಹಾಜರಾತಿ ಇತ್ತು. ಮಧ್ಯಾಹ್ನ ನಡೆದ 2ನೇ ಅಧಿವೇಶನದ ಪತ್ರಿಕೆ-2ಕ್ಕೆ ನೋಂದಾಯಿಸಿದ್ದ 5,293 ಮಂದಿ ಪೈಕಿ 4,998 ಮಂದಿ ಹಾಜರಾಗಿದ್ದು, 295 ಮಂದಿ ಗೈರಾಗಿದ್ದರು. ಶೇ 92.70 ಹಾಜರಿ ಇತ್ತು.</p>.<p>ಪತ್ರಿಕೆ-1ರ (1ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರು) ಪರೀಕ್ಷೆ 14 ಕೇಂದ್ರಗಳಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಪತ್ರಿಕೆ-2ರ (6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರು) ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ 22 ಕೇಂದ್ರಗಳಲ್ಲಿ ನಡೆಯಿತು.</p>.<p>ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಪರೀಕ್ಷೆ ಸೂಸೂತ್ರವಾಗಿ ನಡೆದಿದೆ ಎಂದು ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದ್ದಾರೆ.</p>.<p>ಗೋಪ್ಯ ಸಾಮಗ್ರಿಗಳನ್ನು ಖಜಾನೆಯಲ್ಲಿ ಸಂರಕ್ಷಿಸಲು ಜಿಲ್ಲಾಧಿಕಾರಿಗಳೇ ರಚಿಸಿದ್ದ ತ್ರಿಸದಸ್ಯ ಸಮಿತಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಯನ್ನು ಪೊಲೀಸ್ ಬಂದೋಬಸ್ತ್ನಲ್ಲಿ ತಲುಪಿಸುವ ಕಾರ್ಯ ನಡೆಸಲಾಗಿದೆ.</p>.<p>ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ವಿವಿಧ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು. ಪರೀಕ್ಷಾ ನೋಡಲ್ ಅಧಿಕಾರಿ ಶಂಕರೇಗೌಡ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಶಿಕ್ಷಕರಾಗಿ ನೇಮಕಾತಿ ಹೊಂದಲು ಕನಿಷ್ಠ ಅರ್ಹತೆಯಾಗಿ ಪರಿಗಣಿಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಭಾನುವಾರ ನಗರದ 22 ಕೇಂದ್ರಗಳಲ್ಲಿ ನಡೆದಿದ್ದು, ಎರಡು ಅವಧಿಯ ಪರೀಕ್ಷೆ ಸೇರಿ ಒಟ್ಟು 442 ಅಭ್ಯರ್ಥಿಗಳು ಗೈರಾಗಿದ್ದರು.</p>.<p>ಬೆಳಿಗ್ಗೆ ನಡೆದ ಮೊದಲ ಅಧಿವೇಶನದ ಪರೀಕ್ಷೆಯ ಪತ್ರಿಕೆ-1ಕ್ಕೆ ನೋಂದಾಯಿಸಿದ್ದ 2,016 ಮಂದಿ ಪೈಕಿ 1,869 ಅಭ್ಯರ್ಥಿ ಹಾಜರಾಗಿ 147 ಮಂದಿ ಗೈರಾಗಿದ್ದರು. ಶೇ 94.42 ಹಾಜರಾತಿ ಇತ್ತು. ಮಧ್ಯಾಹ್ನ ನಡೆದ 2ನೇ ಅಧಿವೇಶನದ ಪತ್ರಿಕೆ-2ಕ್ಕೆ ನೋಂದಾಯಿಸಿದ್ದ 5,293 ಮಂದಿ ಪೈಕಿ 4,998 ಮಂದಿ ಹಾಜರಾಗಿದ್ದು, 295 ಮಂದಿ ಗೈರಾಗಿದ್ದರು. ಶೇ 92.70 ಹಾಜರಿ ಇತ್ತು.</p>.<p>ಪತ್ರಿಕೆ-1ರ (1ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರು) ಪರೀಕ್ಷೆ 14 ಕೇಂದ್ರಗಳಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಪತ್ರಿಕೆ-2ರ (6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರು) ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ 22 ಕೇಂದ್ರಗಳಲ್ಲಿ ನಡೆಯಿತು.</p>.<p>ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಪರೀಕ್ಷೆ ಸೂಸೂತ್ರವಾಗಿ ನಡೆದಿದೆ ಎಂದು ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದ್ದಾರೆ.</p>.<p>ಗೋಪ್ಯ ಸಾಮಗ್ರಿಗಳನ್ನು ಖಜಾನೆಯಲ್ಲಿ ಸಂರಕ್ಷಿಸಲು ಜಿಲ್ಲಾಧಿಕಾರಿಗಳೇ ರಚಿಸಿದ್ದ ತ್ರಿಸದಸ್ಯ ಸಮಿತಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಯನ್ನು ಪೊಲೀಸ್ ಬಂದೋಬಸ್ತ್ನಲ್ಲಿ ತಲುಪಿಸುವ ಕಾರ್ಯ ನಡೆಸಲಾಗಿದೆ.</p>.<p>ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ವಿವಿಧ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು. ಪರೀಕ್ಷಾ ನೋಡಲ್ ಅಧಿಕಾರಿ ಶಂಕರೇಗೌಡ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>