<p><strong>ಕೋಲಾರ:</strong> ‘ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಏಪ್ರಿಲ್ ಅಂತ್ಯದೊಳಗೆ ಪಠ್ಯಪುಸ್ತಕ ಸರಬರಾಜು ಮಾಡಲು ಸಕಲ ಸಿದ್ಧತೆ ಮಾಡಿದ್ದೇವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ತಿಳಿಸಿದರು.</p>.<p>ಇಲ್ಲಿನ ಬಿಇಒ ಕಚೇರಿ ಆವರಣದಲ್ಲಿರುವ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಗೋದಾಮಿನಲ್ಲಿ ಬುಧವಾರ ಪರಿಶೀಲನೆ ನಡೆಸಿ ಮಾತನಾಡಿ, ‘ಈಗಾಗಲೇ ಮೊದಲ ಹಂತದ ಸುಮಾರು 25 ಸಾವಿರ ಪಠ್ಯಪುಸ್ತಕಗಳು ಬಂದಿವೆ’ ಎಂದು ಮಾಹಿತಿ ನೀಡಿದರು.</p>.<p>‘ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಪಠ್ಯಪುಸ್ತಕ ಸರಬರಾಜಿನಲ್ಲಿ ವಿಳಂಬವಾಗಿತ್ತು. ಅರ್ಧ ವರ್ಷ ಮುಗಿದರೂ ಅನೇಕ ಪುಸ್ತಕಗಳು ಮಕ್ಕಳ ಕೈಸೇರದೆ ಕಲಿಕೆಗೆ ತೊಂದರೆಯಾಗಿತ್ತು. ಜತೆಗೆ ಪುಸ್ತಕ ವಿತರಣೆಯಲ್ಲಿ ಲೋಪದೋಷಗಳ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಾರಿ ವಿಳಂಬ ತಪ್ಪಿಸಲು ಶಿಕ್ಷಣ ಸಚಿವ ಸುರೇಶ್ಕುಮಾರ್ರ ಸೂಚನೆಯಂತೆ ಈಗಾಗಲೇ ಮೊದಲ ಹಂತದ ಪುಸ್ತಕಗಳ ಸರಬರಾಜು ಆರಂಭವಾಗಿದೆ’ ಎಂದರು.</p>.<p>‘ಈ ಬಾರಿ ಯಾವುದೇ ಆರೋಪಕ್ಕೆ ಅವಕಾಶ ನೀಡದೆಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಪಠ್ಯಪುಸ್ತಕಗಳನ್ನು ಸರಬರಾಜು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಏಪ್ರಿಲ್30ರೊಳಗೆ ಎಲ್ಲಾ ಪಠ್ಯಪುಸ್ತಕಗಳನ್ನು ಆಯಾ ಶಾಲೆಗಳಿಗೆ ಕಳುಹಿಸಲು ಇಲಾಖೆ ಮುಂದಾಗಿದೆ’ ಎಂದು ವಿವರಿಸಿದರು.</p>.<p><strong>ವಾಹನ ವ್ಯವಸ್ಥೆ:</strong> ‘ಶಾಲೆ ಆರಂಭದ ದಿನವೇ ಮಕ್ಕಳಿಗೆ ಎಲ್ಲಾ ಪುಸ್ತಕ ವಿತರಿಸಲು ಕ್ರಮ ಕೈಗೊಳ್ಳುತ್ತೇವೆ. ಪುಸ್ತಕಗಳನ್ನು ಶಾಲೆಗಳಿಗೆ ತಲುಪಿಸಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಯು ತರಗತಿ ಹಾಗೂ ವಿಷಯವಾರು ಪುಸ್ತಕಗಳನ್ನು ಗೋದಾಮಿನಲ್ಲಿ ಸಂಗ್ರಹಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಹಿಂದಿನ ವರ್ಷಗಳಲ್ಲಿ ಪುಸ್ತಕಗಳ ಬರುವುದರಲ್ಲೂ ವಿಳಂಬವಾಗಿತ್ತು. ಮತ್ತೊಂದೆಡೆ ಶಾಲೆಗಳಿಗೆ ಸರಬರಾಜು ಮಾಡುವುದರಲ್ಲೂ ಸಮಸ್ಯೆ ಎದುರಾಗಿತ್ತು. ಈ ಬಾರಿ ಅಂತಹ ಯಾವುದೇ ಸಮಸ್ಯೆಗೆ ಅವಕಾಶ ಕೊಡವುದಿಲ್ಲ’ ಎಂದರು.</p>.<p>ಪಠ್ಯಪುಸ್ತಕ ಗೋದಾಮಿನ ಸಿಬ್ಬಂದಿ ಬೈರೆಡ್ಡಿ, ಶಿವು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಏಪ್ರಿಲ್ ಅಂತ್ಯದೊಳಗೆ ಪಠ್ಯಪುಸ್ತಕ ಸರಬರಾಜು ಮಾಡಲು ಸಕಲ ಸಿದ್ಧತೆ ಮಾಡಿದ್ದೇವೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ತಿಳಿಸಿದರು.</p>.<p>ಇಲ್ಲಿನ ಬಿಇಒ ಕಚೇರಿ ಆವರಣದಲ್ಲಿರುವ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಗೋದಾಮಿನಲ್ಲಿ ಬುಧವಾರ ಪರಿಶೀಲನೆ ನಡೆಸಿ ಮಾತನಾಡಿ, ‘ಈಗಾಗಲೇ ಮೊದಲ ಹಂತದ ಸುಮಾರು 25 ಸಾವಿರ ಪಠ್ಯಪುಸ್ತಕಗಳು ಬಂದಿವೆ’ ಎಂದು ಮಾಹಿತಿ ನೀಡಿದರು.</p>.<p>‘ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಪಠ್ಯಪುಸ್ತಕ ಸರಬರಾಜಿನಲ್ಲಿ ವಿಳಂಬವಾಗಿತ್ತು. ಅರ್ಧ ವರ್ಷ ಮುಗಿದರೂ ಅನೇಕ ಪುಸ್ತಕಗಳು ಮಕ್ಕಳ ಕೈಸೇರದೆ ಕಲಿಕೆಗೆ ತೊಂದರೆಯಾಗಿತ್ತು. ಜತೆಗೆ ಪುಸ್ತಕ ವಿತರಣೆಯಲ್ಲಿ ಲೋಪದೋಷಗಳ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಾರಿ ವಿಳಂಬ ತಪ್ಪಿಸಲು ಶಿಕ್ಷಣ ಸಚಿವ ಸುರೇಶ್ಕುಮಾರ್ರ ಸೂಚನೆಯಂತೆ ಈಗಾಗಲೇ ಮೊದಲ ಹಂತದ ಪುಸ್ತಕಗಳ ಸರಬರಾಜು ಆರಂಭವಾಗಿದೆ’ ಎಂದರು.</p>.<p>‘ಈ ಬಾರಿ ಯಾವುದೇ ಆರೋಪಕ್ಕೆ ಅವಕಾಶ ನೀಡದೆಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಪಠ್ಯಪುಸ್ತಕಗಳನ್ನು ಸರಬರಾಜು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಏಪ್ರಿಲ್30ರೊಳಗೆ ಎಲ್ಲಾ ಪಠ್ಯಪುಸ್ತಕಗಳನ್ನು ಆಯಾ ಶಾಲೆಗಳಿಗೆ ಕಳುಹಿಸಲು ಇಲಾಖೆ ಮುಂದಾಗಿದೆ’ ಎಂದು ವಿವರಿಸಿದರು.</p>.<p><strong>ವಾಹನ ವ್ಯವಸ್ಥೆ:</strong> ‘ಶಾಲೆ ಆರಂಭದ ದಿನವೇ ಮಕ್ಕಳಿಗೆ ಎಲ್ಲಾ ಪುಸ್ತಕ ವಿತರಿಸಲು ಕ್ರಮ ಕೈಗೊಳ್ಳುತ್ತೇವೆ. ಪುಸ್ತಕಗಳನ್ನು ಶಾಲೆಗಳಿಗೆ ತಲುಪಿಸಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಯು ತರಗತಿ ಹಾಗೂ ವಿಷಯವಾರು ಪುಸ್ತಕಗಳನ್ನು ಗೋದಾಮಿನಲ್ಲಿ ಸಂಗ್ರಹಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಹಿಂದಿನ ವರ್ಷಗಳಲ್ಲಿ ಪುಸ್ತಕಗಳ ಬರುವುದರಲ್ಲೂ ವಿಳಂಬವಾಗಿತ್ತು. ಮತ್ತೊಂದೆಡೆ ಶಾಲೆಗಳಿಗೆ ಸರಬರಾಜು ಮಾಡುವುದರಲ್ಲೂ ಸಮಸ್ಯೆ ಎದುರಾಗಿತ್ತು. ಈ ಬಾರಿ ಅಂತಹ ಯಾವುದೇ ಸಮಸ್ಯೆಗೆ ಅವಕಾಶ ಕೊಡವುದಿಲ್ಲ’ ಎಂದರು.</p>.<p>ಪಠ್ಯಪುಸ್ತಕ ಗೋದಾಮಿನ ಸಿಬ್ಬಂದಿ ಬೈರೆಡ್ಡಿ, ಶಿವು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>