<p><strong>ಶ್ರೀನಿವಾಸಪುರ: </strong>ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ತಂದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದು ಪುರಸಭೆ ಅಧ್ಯಕ್ಷೆ ಎಂ.ಎನ್. ಲಲಿತಾ ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಶಾಸಕರು, ಆಡಳಿತ ಪಕ್ಷದ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ಈ ಹಿಂದೆ ಎಂಟು ವರ್ಷಗಳ ಕಾಲ ಪುರಸಭೆ ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಒಳಪಟ್ಟಿತ್ತು. ಆಗ ಶಾಸಕರು ತಂದ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಆಗಿದೆ. ಕಳಪೆ ಕಾಮಾರಿ ಕಣ್ಣಿಗೆ ಕಟ್ಟುವಂತೆ ಕಾಣುತ್ತಿದೆ ಎಂದು ಆಪಾದಿಸಿದರು.</p>.<p>ಪಟ್ಟಣದಲ್ಲಿ ಕೈಗೊಳ್ಳಲಾಗಿರುವ ಚರಂಡಿ ನಿರ್ಮಾಣ ಕಾಮಗಾರಿ, ವಾಣಿಜ್ಯ ಸಂಕೀರ್ಣ ಕಟ್ಟಡಗಳು ಕಳಪೆ ಕಾಮಗಾರಿಗೆ ಉತ್ತಮ ಉದಾಹರಣೆಯಾಗಿವೆ. ಅವುಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ₹ 34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಗಳ ನಿರ್ಮಾಣದ ಕಥೆಯೂ ಇದೇ ಆಗಿದೆ. ತಮ್ಮ ಹಿಂಬಾಲಕರಿಗೆ ಉಪ ಗುತ್ತಿಗೆ ಕೊಡಿಸಿ, ಕಳಪೆ ಕಾಮಗಾರಿಗೆ ಕಾರಣರಾಗಿದ್ದಾರೆ ಎಂದುಹೇಳಿದರು.</p>.<p>ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯರಾದ ಬಿ. ವೆಂಕಟರೆಡ್ಡಿ, ಎಸ್. ರಾಜು, ಆನಂದ್, ಶಬ್ಬೀರ್ ಖಾನ್, ಜಯಲಕ್ಷ್ಮಿ, ಜಬೀನ್ ತಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ: </strong>ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ತಂದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದು ಪುರಸಭೆ ಅಧ್ಯಕ್ಷೆ ಎಂ.ಎನ್. ಲಲಿತಾ ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>.<p>ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಶಾಸಕರು, ಆಡಳಿತ ಪಕ್ಷದ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ಈ ಹಿಂದೆ ಎಂಟು ವರ್ಷಗಳ ಕಾಲ ಪುರಸಭೆ ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಒಳಪಟ್ಟಿತ್ತು. ಆಗ ಶಾಸಕರು ತಂದ ಕೋಟ್ಯಂತರ ರೂಪಾಯಿ ಅನುದಾನ ದುರ್ಬಳಕೆ ಆಗಿದೆ. ಕಳಪೆ ಕಾಮಾರಿ ಕಣ್ಣಿಗೆ ಕಟ್ಟುವಂತೆ ಕಾಣುತ್ತಿದೆ ಎಂದು ಆಪಾದಿಸಿದರು.</p>.<p>ಪಟ್ಟಣದಲ್ಲಿ ಕೈಗೊಳ್ಳಲಾಗಿರುವ ಚರಂಡಿ ನಿರ್ಮಾಣ ಕಾಮಗಾರಿ, ವಾಣಿಜ್ಯ ಸಂಕೀರ್ಣ ಕಟ್ಟಡಗಳು ಕಳಪೆ ಕಾಮಗಾರಿಗೆ ಉತ್ತಮ ಉದಾಹರಣೆಯಾಗಿವೆ. ಅವುಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ₹ 34 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಗಳ ನಿರ್ಮಾಣದ ಕಥೆಯೂ ಇದೇ ಆಗಿದೆ. ತಮ್ಮ ಹಿಂಬಾಲಕರಿಗೆ ಉಪ ಗುತ್ತಿಗೆ ಕೊಡಿಸಿ, ಕಳಪೆ ಕಾಮಗಾರಿಗೆ ಕಾರಣರಾಗಿದ್ದಾರೆ ಎಂದುಹೇಳಿದರು.</p>.<p>ಉಪಾಧ್ಯಕ್ಷೆ ಆಯಿಷಾ ನಯಾಜ್, ಸದಸ್ಯರಾದ ಬಿ. ವೆಂಕಟರೆಡ್ಡಿ, ಎಸ್. ರಾಜು, ಆನಂದ್, ಶಬ್ಬೀರ್ ಖಾನ್, ಜಯಲಕ್ಷ್ಮಿ, ಜಬೀನ್ ತಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>