ಆ ನಂತರ ಇಲಾಖೆ ಉನ್ನತ ಅಧಿಕಾರಿಗಳ ತಂಡವು ಪ್ರಕರಣ ಸಂಬಂಧ ವಿಶೇಷ ಲೆಕ್ಕ ತಪಾಸಣೆ ನಡೆಸಿದಾಗ ಅಕ್ರಮದಲ್ಲಿ ಶಿವಕುಮಾರ್, ಮಂಜುನಾಥ್ ಮತ್ತು ಆದರ್ಶ್ ಭಾಗಿಯಾಗಿರುವ ಸಂಗತಿ ಬಯಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಸತ್ಯನಾರಾಯಣ ಪ್ರಸಾದ್ ಅವರು ಉನ್ನತ ಅಧಿಕಾರಿಗಳ ತಂಡದ ವಿಶೇಷ ಲೆಕ್ಕ ತಪಾಸಣಾ ವರದಿಯೊಂದಿಗೆ ಶಿವಕುಮಾರ್ ಸೇರಿದಂತೆ ಮೂವರ ವಿರುದ್ಧ ನೀಡಿದ ದೂರು ಆಧರಿಸಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.