<p><strong>ಕೋಲಾರ</strong>: ‘ಎಲ್ಲಾ ಧರ್ಮದ ಸ್ವಾಮೀಜಿಗಳು ಯಾವುದೇ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಸಲಹೆ ನೀಡಲಿ. ಅದನ್ನು ಬಿಟ್ಟು ಸಾರ್ವಜನಿಕ ವೇದಿಕೆಯಲ್ಲಿ ಬೆದರಿಕೆ ಹಾಕುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ವಚನಾನಂದ ಸ್ವಾಮೀಜಿಯು ಶಾಸಕ ಮುರುಗೇಶ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರ ಮೇಲೆ ಒತ್ತಡ ಹಾಕಿದ ಬಗ್ಗೆ ಇಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಸ್ವಾಮೀಜಿಗಳು ಆ ರೀತಿ ಕೇಳಿರುವುದು ಸಮಂಜಸವಲ್ಲ’ ಎಂದರು.</p>.<p>‘ಸ್ವಾಮೀಜಿಗಳು ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿರುವುದು, ಖಡಾಖಂಡಿತವಾಗಿ ಹೇಳಿರುವುದು ಸರಿಯಲ್ಲ. ಸ್ವಾಮೀಜಿಗಳು ವೈಯಕ್ತಿಕವಾಗಿ ಭೇಟಿಯಾಗಿ ಸಲಹೆ ನೀಡಿದರೆ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸುತ್ತಾರೆ. ಸ್ವಾಮೀಜಿಗಳು ವೇದಿಕೆಯಲ್ಲಿ ಆ ರೀತಿ ವರ್ತಿಸಿದರೆ ಮುಖ್ಯಮಂತ್ರಿಗಳ ಘನತೆ ಏನಾಗಬೇಕು?’ ಎಂದು ಪ್ರಶ್ನಿಸಿದರು.</p>.<p>‘ಎಲ್ಲಾ ಸಮುದಾಯಗಳಲ್ಲೂ ಸ್ವಾಮೀಜಿಗಳಿದ್ದಾರೆ. ನಮ್ಮ ಸಮುದಾಯಕ್ಕೆ ಛಲವಾದಿ ಸ್ವಾಮೀಜಿಯಿದ್ದಾರೆ. ಆದರೆ, ಅವರು ಎಂದಿಗೂ ಯಾವುದೇ ಬೇಡಿಕೆ ಮುಂದಿಟ್ಟಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳನ್ನು ಬೇರೆಯವರು ಸೋಲಿಸಲು ಸಾಧ್ಯವಿಲ್ಲ. ಸೋಲು ಗೆಲುವು ಜನರೇ ನಿರ್ಧರಿಸಬೇಕು’ ಎಂದರು.</p>.<p>‘ಕೋಲಾರದ ಜಿಲ್ಲಾಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆ ಸಮಾರಂಭವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಜನರಿಗೆ ಅನುಕೂಲವಾಗಲೆಂದು ಸದ್ಯಕ್ಕೆ ಉದ್ಘಾಟನೆ ಇಲ್ಲದೆಯೇ ಆಸ್ಪತ್ರೆ ಬಳಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಮುಂದೊಂದು ದಿನ ಆಸ್ಪತ್ರೆ ಉದ್ಘಾಟನೆ ಮಾಡಿದರೂ ನಡೆಯುತ್ತದೆ. ಈ ಸಂಗತಿಯನ್ನು ಆರೋಗ್ಯ ಸಚಿವರ ಗಮನಕ್ಕೂ ತರಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಎಲ್ಲಾ ಧರ್ಮದ ಸ್ವಾಮೀಜಿಗಳು ಯಾವುದೇ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಸಲಹೆ ನೀಡಲಿ. ಅದನ್ನು ಬಿಟ್ಟು ಸಾರ್ವಜನಿಕ ವೇದಿಕೆಯಲ್ಲಿ ಬೆದರಿಕೆ ಹಾಕುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ವಚನಾನಂದ ಸ್ವಾಮೀಜಿಯು ಶಾಸಕ ಮುರುಗೇಶ ನಿರಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರ ಮೇಲೆ ಒತ್ತಡ ಹಾಕಿದ ಬಗ್ಗೆ ಇಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ‘ಸ್ವಾಮೀಜಿಗಳು ಆ ರೀತಿ ಕೇಳಿರುವುದು ಸಮಂಜಸವಲ್ಲ’ ಎಂದರು.</p>.<p>‘ಸ್ವಾಮೀಜಿಗಳು ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿರುವುದು, ಖಡಾಖಂಡಿತವಾಗಿ ಹೇಳಿರುವುದು ಸರಿಯಲ್ಲ. ಸ್ವಾಮೀಜಿಗಳು ವೈಯಕ್ತಿಕವಾಗಿ ಭೇಟಿಯಾಗಿ ಸಲಹೆ ನೀಡಿದರೆ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸುತ್ತಾರೆ. ಸ್ವಾಮೀಜಿಗಳು ವೇದಿಕೆಯಲ್ಲಿ ಆ ರೀತಿ ವರ್ತಿಸಿದರೆ ಮುಖ್ಯಮಂತ್ರಿಗಳ ಘನತೆ ಏನಾಗಬೇಕು?’ ಎಂದು ಪ್ರಶ್ನಿಸಿದರು.</p>.<p>‘ಎಲ್ಲಾ ಸಮುದಾಯಗಳಲ್ಲೂ ಸ್ವಾಮೀಜಿಗಳಿದ್ದಾರೆ. ನಮ್ಮ ಸಮುದಾಯಕ್ಕೆ ಛಲವಾದಿ ಸ್ವಾಮೀಜಿಯಿದ್ದಾರೆ. ಆದರೆ, ಅವರು ಎಂದಿಗೂ ಯಾವುದೇ ಬೇಡಿಕೆ ಮುಂದಿಟ್ಟಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳನ್ನು ಬೇರೆಯವರು ಸೋಲಿಸಲು ಸಾಧ್ಯವಿಲ್ಲ. ಸೋಲು ಗೆಲುವು ಜನರೇ ನಿರ್ಧರಿಸಬೇಕು’ ಎಂದರು.</p>.<p>‘ಕೋಲಾರದ ಜಿಲ್ಲಾಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಉದ್ಘಾಟನೆ ಸಮಾರಂಭವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಜನರಿಗೆ ಅನುಕೂಲವಾಗಲೆಂದು ಸದ್ಯಕ್ಕೆ ಉದ್ಘಾಟನೆ ಇಲ್ಲದೆಯೇ ಆಸ್ಪತ್ರೆ ಬಳಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಮುಂದೊಂದು ದಿನ ಆಸ್ಪತ್ರೆ ಉದ್ಘಾಟನೆ ಮಾಡಿದರೂ ನಡೆಯುತ್ತದೆ. ಈ ಸಂಗತಿಯನ್ನು ಆರೋಗ್ಯ ಸಚಿವರ ಗಮನಕ್ಕೂ ತರಲಾಗಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>